<p><strong>ಮೈಸೂರು</strong>: ‘ನಾನು ಮಂಡ್ಯದಲ್ಲಿ ಗೆಲ್ಲಲ್ಲ ಎಂದು ಭವಿಷ್ಯ ನುಡಿಯಲಿಕ್ಕೆ ಸಿದ್ದರಾಮಯ್ಯ ಜ್ಯೋತಿಷಿಯೇ? ಅದನ್ನು ಅಲ್ಲಿನ ಮತದಾರರು ತೀರ್ಮಾನ ಮಾಡಲಿದ್ದಾರೆ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದರು. </p><p>ಬುಧವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು ‘ ನಾನು ಮಂಡ್ಯದ ಹೊರಗಿನವನೋ–ಒಳಗಿನವನೋ ಎಂದು ಅವರು ಏನು ಬೇಕಾದರೂ ಹೇಳಲಿ. ಆದರೆ ನಾನು ಕನ್ನಡಿಗ. ನನಗೆ ರಾಜಕೀಯ ಜನ್ಮ ಕೊಟ್ಟಿದ್ದು ರಾಮನಗರ, ಶಕ್ತಿ ತುಂಬಿರುವುದು ಮಂಡ್ಯ ಹಾಗೂ ಮೈಸೂರು. ಕಳೆದ ಚುನಾವಣೆಯಲ್ಲಿ ಮಂಡ್ಯದಲ್ಲಿ ನನ್ನ ಮಗ ಸ್ಪರ್ಧಿಸಿದ್ದಾಗ ಕಾಂಗ್ರೆಸ್ನವರೂ ನಮ್ಮ ಜೊತೆ ಇದ್ದರು. ಹೀಗಾಗಿ ಅವನ ಸೋಲಿನಲ್ಲಿ ಸಿದ್ದರಾಮಯ್ಯ ವೈಫಲ್ಯವೂ ಇದೆ’ ಎಂದರು. </p><p>‘ಸಿದ್ದರಾಮಯ್ಯ ರಾಜ್ಯದಲ್ಲಿ ಐದು ವರ್ಷ ಮುಖ್ಯಮಂತ್ರಿ ಆಗಿ ಆಡಳಿತ ನಡೆಸಿದ ಬಳಿಕ ಮೈಸೂರಿನಲ್ಲೇ ಸೋತವರು. ನಿಮ್ಮ ಕುಹುಕಗಳಿಗೆ ಜನರೇ ಉತ್ತರ ಕೊಡಲಿದ್ದಾರೆ’ ಎಂದರು.</p><p>‘ಕೋಲಾರ, ಮಂಡ್ಯ ಸೇರಿದಂತೆ ರಾಜ್ಯದ ಯಾವ ಕ್ಷೇತ್ರದಲ್ಲೂ ಬಿಜೆಪಿ–ಜೆಡಿಎಸ್ ಮೈತ್ರಿಗೆ ವಿರೋಧ ಇಲ್ಲ. ಬೆಂಗಳೂರು ಗ್ರಾಮೀಣ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಡಾ. ಮಂಜುನಾಥ್ ಪರ ಒಲವು ಕಂಡು ಹತಾಶವಾಗಿರುವ ಕಾಂಗ್ರೆಸ್ ಸೀರೆ–ಕುಕ್ಕರ್ ಹಂಚಿ ಮತದಾರರನ್ನು ಸೆಳೆಯುವ ಪ್ರಯತ್ನ ಮಾಡುತ್ತಿದೆ’ ಎಂದು ದೂರಿದರು. </p><p>‘ಕೆಆರ್ಎಸ್ನಲ್ಲಿ 86 ಅಡಿ ನೀರಿದ್ದರೂ ಮೈಸೂರು–ಮಂಡ್ಯ ಭಾಗದಲ್ಲಿ ದನಕರುಗಳಿಗೆ ನೀರು–ಮೇವು ಇಲ್ಲ. ಗುತ್ತಿಗೆದಾರರಿಗೆ ಅನುಕೂಲ ಮಾಡಿಕೊಡಲು ವಿ.ಸಿ. ನಾಲೆಗೆ ನೀರು ಹರಿಸುವುದನ್ನು ಸರ್ಕಾರ ನಿಲ್ಲಿಸಿದೆ. ಇದರಿಂದ ಜನ ಪರಿತಪಿಸುತ್ತಿದ್ದಾರೆ’ ಎಂದು ಕುಮಾರಸ್ವಾಮಿ ದೂರಿದರು.</p>.ಮಂಡ್ಯದಲ್ಲಿ ಕುಮಾರಸ್ವಾಮಿ ಸೋಲು ಖಚಿತ: ಸಿದ್ದರಾಮಯ್ಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ನಾನು ಮಂಡ್ಯದಲ್ಲಿ ಗೆಲ್ಲಲ್ಲ ಎಂದು ಭವಿಷ್ಯ ನುಡಿಯಲಿಕ್ಕೆ ಸಿದ್ದರಾಮಯ್ಯ ಜ್ಯೋತಿಷಿಯೇ? ಅದನ್ನು ಅಲ್ಲಿನ ಮತದಾರರು ತೀರ್ಮಾನ ಮಾಡಲಿದ್ದಾರೆ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದರು. </p><p>ಬುಧವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು ‘ ನಾನು ಮಂಡ್ಯದ ಹೊರಗಿನವನೋ–ಒಳಗಿನವನೋ ಎಂದು ಅವರು ಏನು ಬೇಕಾದರೂ ಹೇಳಲಿ. ಆದರೆ ನಾನು ಕನ್ನಡಿಗ. ನನಗೆ ರಾಜಕೀಯ ಜನ್ಮ ಕೊಟ್ಟಿದ್ದು ರಾಮನಗರ, ಶಕ್ತಿ ತುಂಬಿರುವುದು ಮಂಡ್ಯ ಹಾಗೂ ಮೈಸೂರು. ಕಳೆದ ಚುನಾವಣೆಯಲ್ಲಿ ಮಂಡ್ಯದಲ್ಲಿ ನನ್ನ ಮಗ ಸ್ಪರ್ಧಿಸಿದ್ದಾಗ ಕಾಂಗ್ರೆಸ್ನವರೂ ನಮ್ಮ ಜೊತೆ ಇದ್ದರು. ಹೀಗಾಗಿ ಅವನ ಸೋಲಿನಲ್ಲಿ ಸಿದ್ದರಾಮಯ್ಯ ವೈಫಲ್ಯವೂ ಇದೆ’ ಎಂದರು. </p><p>‘ಸಿದ್ದರಾಮಯ್ಯ ರಾಜ್ಯದಲ್ಲಿ ಐದು ವರ್ಷ ಮುಖ್ಯಮಂತ್ರಿ ಆಗಿ ಆಡಳಿತ ನಡೆಸಿದ ಬಳಿಕ ಮೈಸೂರಿನಲ್ಲೇ ಸೋತವರು. ನಿಮ್ಮ ಕುಹುಕಗಳಿಗೆ ಜನರೇ ಉತ್ತರ ಕೊಡಲಿದ್ದಾರೆ’ ಎಂದರು.</p><p>‘ಕೋಲಾರ, ಮಂಡ್ಯ ಸೇರಿದಂತೆ ರಾಜ್ಯದ ಯಾವ ಕ್ಷೇತ್ರದಲ್ಲೂ ಬಿಜೆಪಿ–ಜೆಡಿಎಸ್ ಮೈತ್ರಿಗೆ ವಿರೋಧ ಇಲ್ಲ. ಬೆಂಗಳೂರು ಗ್ರಾಮೀಣ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಡಾ. ಮಂಜುನಾಥ್ ಪರ ಒಲವು ಕಂಡು ಹತಾಶವಾಗಿರುವ ಕಾಂಗ್ರೆಸ್ ಸೀರೆ–ಕುಕ್ಕರ್ ಹಂಚಿ ಮತದಾರರನ್ನು ಸೆಳೆಯುವ ಪ್ರಯತ್ನ ಮಾಡುತ್ತಿದೆ’ ಎಂದು ದೂರಿದರು. </p><p>‘ಕೆಆರ್ಎಸ್ನಲ್ಲಿ 86 ಅಡಿ ನೀರಿದ್ದರೂ ಮೈಸೂರು–ಮಂಡ್ಯ ಭಾಗದಲ್ಲಿ ದನಕರುಗಳಿಗೆ ನೀರು–ಮೇವು ಇಲ್ಲ. ಗುತ್ತಿಗೆದಾರರಿಗೆ ಅನುಕೂಲ ಮಾಡಿಕೊಡಲು ವಿ.ಸಿ. ನಾಲೆಗೆ ನೀರು ಹರಿಸುವುದನ್ನು ಸರ್ಕಾರ ನಿಲ್ಲಿಸಿದೆ. ಇದರಿಂದ ಜನ ಪರಿತಪಿಸುತ್ತಿದ್ದಾರೆ’ ಎಂದು ಕುಮಾರಸ್ವಾಮಿ ದೂರಿದರು.</p>.ಮಂಡ್ಯದಲ್ಲಿ ಕುಮಾರಸ್ವಾಮಿ ಸೋಲು ಖಚಿತ: ಸಿದ್ದರಾಮಯ್ಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>