<p><strong>ಹುಣಸೂರು</strong>: ‘ಜಗತ್ತಿನಲ್ಲಿ ಶಾಂತಿ ಸ್ಥಾಪನೆಗೆ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಶ್ರಮಿಸುತ್ತಿದೆ’ ಎಂದು ಕೇಂದ್ರದ ಉಪವಲಯದ ಸಂಚಾಲಕರಾದ ಲಕ್ಷ್ಮಿ ಬೆಹನ್ ತಿಳಿಸಿದರು.</p>.<p>ನಗರದ ಬೈಪಾಸ್ ರಸ್ತೆಯಲ್ಲಿ ವಿಶ್ವವಿದ್ಯಾಲಯದ ನೂತನ ಕಟ್ಟಡ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.</p>.<p>‘ವಿಶ್ವದಲ್ಲಿ ಅಶಾಂತಿ, ವೈರತ್ವ, ಹಿಂಸೆ ಮತ್ತು ಯುದ್ಧ ನಡೆದು ಶ್ರೀಸಾಮಾನ್ಯರು ಮಾನಸಿಕವಾಗಿ ವಿಚಲಿತರಾಗುತ್ತಿದ್ದಾರೆ. ಸ್ನೇಹ, ಪ್ರೀತಿ, ಆತ್ಮೀಯತೆ ಬೀಜ ಬಿತ್ತುವ ಮೂಲಕ ಸಹೋದರ ಭಾವನೆ ಸ್ಥಾಪನೆಗೆ ವಿದ್ಯಾಲಯವು ಹಲವು ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ’ ಎಂದರು.</p>.<p>‘ಕೇಂದ್ರವು 147 ದೇಶಗಳಲ್ಲಿ ತನ್ನದೇ ಆದ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಿ ಮಾನಸಿಕ ನೆಮ್ಮದಿಗೆ ಒತ್ತು ನೀಡಿ, ಶಾಂತಿ ಸ್ಥಾಪಿಸುವತ್ತ ದಾಪುಗಾಲು ಹಾಕಿದೆ’ ಎಂದು ಹೇಳಿದರು.</p>.<p>‘ದೇಶದಾದ್ಯಂತ ತಾಲ್ಲೂಕು ಮಟ್ಟದಲ್ಲಿ ಈಶ್ವರೀಯ ವಿಶ್ವವಿದ್ಯಾಲಯದ ಕೇಂದ್ರ ಆರಂಭಿಸಲಾಗುವುದು’ ಎಂದರು.</p>.<p>ಕಾರ್ಯಕ್ರಮದಲ್ಲಿ ಮೌಂಟ್ ಅಬು ಕೇಂದ್ರದ ಲಲಿತ್ ಮಧುಬನ್, ಗಾವಡಗೆರೆ ಗುರುಲಿಂಗ ಜಂಗಮ ಮಠದ ನಟರಾಜ ಸ್ವಾಮೀಜಿ, ನಗರಸಭೆ ಅಧ್ಯಕ್ಷ ಶರವಣ ಮಾತನಾಡಿದರು.</p>.<p>ವೇದಿಕೆಯಲ್ಲಿ ನಗರಸಭೆ ಉಪಾಧ್ಯಕ್ಷೆ ಆಶಾ, ನಗರಸಭೆ ಆಯುಕ್ತೆ ಮಾನಸ, ಕೃಷ್ಣಮೂರ್ತಿ, ಬಾಬು, ರಾಮಚಂದ್ರ, ಮೂರ್ತಿ, ನಾಗಶ್ರೀ ಸೇರಿದಂತೆ ಭಕ್ತರು ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಣಸೂರು</strong>: ‘ಜಗತ್ತಿನಲ್ಲಿ ಶಾಂತಿ ಸ್ಥಾಪನೆಗೆ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಶ್ರಮಿಸುತ್ತಿದೆ’ ಎಂದು ಕೇಂದ್ರದ ಉಪವಲಯದ ಸಂಚಾಲಕರಾದ ಲಕ್ಷ್ಮಿ ಬೆಹನ್ ತಿಳಿಸಿದರು.</p>.<p>ನಗರದ ಬೈಪಾಸ್ ರಸ್ತೆಯಲ್ಲಿ ವಿಶ್ವವಿದ್ಯಾಲಯದ ನೂತನ ಕಟ್ಟಡ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.</p>.<p>‘ವಿಶ್ವದಲ್ಲಿ ಅಶಾಂತಿ, ವೈರತ್ವ, ಹಿಂಸೆ ಮತ್ತು ಯುದ್ಧ ನಡೆದು ಶ್ರೀಸಾಮಾನ್ಯರು ಮಾನಸಿಕವಾಗಿ ವಿಚಲಿತರಾಗುತ್ತಿದ್ದಾರೆ. ಸ್ನೇಹ, ಪ್ರೀತಿ, ಆತ್ಮೀಯತೆ ಬೀಜ ಬಿತ್ತುವ ಮೂಲಕ ಸಹೋದರ ಭಾವನೆ ಸ್ಥಾಪನೆಗೆ ವಿದ್ಯಾಲಯವು ಹಲವು ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ’ ಎಂದರು.</p>.<p>‘ಕೇಂದ್ರವು 147 ದೇಶಗಳಲ್ಲಿ ತನ್ನದೇ ಆದ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಿ ಮಾನಸಿಕ ನೆಮ್ಮದಿಗೆ ಒತ್ತು ನೀಡಿ, ಶಾಂತಿ ಸ್ಥಾಪಿಸುವತ್ತ ದಾಪುಗಾಲು ಹಾಕಿದೆ’ ಎಂದು ಹೇಳಿದರು.</p>.<p>‘ದೇಶದಾದ್ಯಂತ ತಾಲ್ಲೂಕು ಮಟ್ಟದಲ್ಲಿ ಈಶ್ವರೀಯ ವಿಶ್ವವಿದ್ಯಾಲಯದ ಕೇಂದ್ರ ಆರಂಭಿಸಲಾಗುವುದು’ ಎಂದರು.</p>.<p>ಕಾರ್ಯಕ್ರಮದಲ್ಲಿ ಮೌಂಟ್ ಅಬು ಕೇಂದ್ರದ ಲಲಿತ್ ಮಧುಬನ್, ಗಾವಡಗೆರೆ ಗುರುಲಿಂಗ ಜಂಗಮ ಮಠದ ನಟರಾಜ ಸ್ವಾಮೀಜಿ, ನಗರಸಭೆ ಅಧ್ಯಕ್ಷ ಶರವಣ ಮಾತನಾಡಿದರು.</p>.<p>ವೇದಿಕೆಯಲ್ಲಿ ನಗರಸಭೆ ಉಪಾಧ್ಯಕ್ಷೆ ಆಶಾ, ನಗರಸಭೆ ಆಯುಕ್ತೆ ಮಾನಸ, ಕೃಷ್ಣಮೂರ್ತಿ, ಬಾಬು, ರಾಮಚಂದ್ರ, ಮೂರ್ತಿ, ನಾಗಶ್ರೀ ಸೇರಿದಂತೆ ಭಕ್ತರು ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>