ತಮಿಳುನಾಡಿನ 44 ಸಾವಿರ ದೇಗುಲಗಳ ಪೈಕಿ 12 ಸಾವಿರ ದೇಗುಲದಲ್ಲಿ ಒಂದೇ ಒಂದು ಪೂಜೆ ನಡೆದಿಲ್ಲ. 37 ಸಾವಿರ ದೇಗುಲಗಳಲ್ಲಿ ಒಬ್ಬರೇ ಇದ್ದು, ಅವರೇ ಪೂಜೆ ಮತ್ತು ನಿರ್ವಹಣೆ ಮಾಡುತ್ತಿದ್ದಾರೆ. 1,500 ಅಮೂಲ್ಯ ವಿಗ್ರಹಗಳು ಕಾಣೆಯಾಗಿವೆ ಎಂದು ಅಲ್ಲಿನ ಸರ್ಕಾರವೇ ಹೈಕೋರ್ಟ್ಗೆ ಮಾಹಿತಿ ಸಲ್ಲಿಸಿದೆ. ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರು ಒಟ್ಟು 9 ಸಾವಿರ ಮೂರ್ತಿಗಳು ಕಳವಾಗಿದ್ದು, ಅವುಗಳ ಜಾಗದಲ್ಲಿ ಹೊಸ ಮೂರ್ತಿ ಇಡಲಾಗಿದೆ ಎಂದು ತಮ್ಮ ಪುಸ್ತಕದಲ್ಲಿ ದಾಖಲಿಸಿದ್ದಾರೆ. ಸರ್ಕಾರಗಳು ದೇವಾಲಯವನ್ನು ಒಂದು ವ್ಯವಹಾರವಾಗಿ ನೋಡುತ್ತಿದೆ. ಇದು ಹೀಗೆಯೇ ಮುಂದುವರಿದರೆ ಮುಂದಿನ 50 ವರ್ಷಗಳಲ್ಲಿ ದೇವಾಲಯಗಳೇ ಇಲ್ಲದಿರುವ ಸ್ಥಿತಿ ನಿರ್ಮಾಣವಾಗಬಹುದು. ಹಾಗಾಗಿ, ಆನ್ಲೈನ್ ಅಭಿಯಾನ ಕೈಗೊಳ್ಳಲಾಗಿದೆ ಎಂದು ವಿವರಿಸಿದರು.