<p><strong>ಮೈಸೂರು: </strong>’₹ 294 ಕೋಟಿ ನೀಡಿದ್ದರೂ ಜಿಲ್ಲೆಯಲ್ಲಿ ಜಲಜೀವನ್ ಮಿಷನ್ ಯೋಜನೆ ಆಮೆಗತಿಯಲ್ಲಿದೆ’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಕೆ.ಎಸ್.ಈಶ್ವರಪ್ಪ ಅಸಮಾಧಾನ ವ್ಯಕ್ತಪಡಿಸಿದರು.</p>.<p>ಇಲ್ಲಿನ ಜಿಲ್ಲಾ ಪಂಚಾಯಿತಿಯಲ್ಲಿ ಶುಕ್ರವಾರ ಇಲಾಖೆಯ ಪ್ರಗತಿ ಪರಿಶೀಲನೆ ಸಭೆ ನಡೆಸಿ ಮಾತನಾಡಿದ ಅವರು, ’ದೊಡ್ಡಮೊತ್ತದ ಅನುದಾನ ನೀಡಿದ್ದರೂ ಗುತ್ತಿಗೆದಾರರಿಗೆ ಕೇವಲ ₹ 20 ಕೋಟಿ ನೀಡಿರುವುದು ಏಕೆ? ಮಾಸಾಂತ್ಯದೊಳಗೆ ಪ್ರಗತಿ ಸಾಧನೆಯಾಗಬೇಕು’ ಎಂದು ಸೂಚಿಸಿದರು.</p>.<p>’ಕಾಮಗಾರಿಗಳಿಗೆ ಹಂತಹಂತವಾಗಿ ಹಣ ನೀಡಿದರೆ ಗುತ್ತಿಗೆದಾರರು ಬೇಗನೇ ಕೆಲಸ ಪೂರ್ಣಗೊಳಿಸಲು ಸಾಧ್ಯವಾಗುತ್ತದೆ. ಈ ಮಾಸಾಂತ್ಯಕ್ಕೆ ಯೋಜನೆ ಪೂರ್ಣಗೊಂಡಿರುವ ಕಾಮಗಾರಿಗಳ ವಿವರ ಕಳುಹಿಸಿಕೊಡಬೇಕು. ಇಲ್ಲದಿದ್ದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಕೆ ನೀಡಿದರು.</p>.<p>‘ಯೋಜನೆಯ ಹಿಂದಿನ ಸಾಲಿನ ಕಾಮಗಾರಿಗಳ ಪ್ರಗತಿಯಲ್ಲಿ ನಂಜನಗೂಡು ಮತ್ತು ಪಿರಿಯಾಪಟ್ಟಣ ತಾಲ್ಲೂಕು ಹಿಂದುಳಿದಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು.</p>.<p>’ಪ್ರತಿ ಮನೆಯ ನಲ್ಲಿಗಳಿಗೆ ಮೀಟರ್ ಅಳವಡಿಸಲು ಗ್ರಾಮಸ್ಥರು ಅಡ್ಡಿಪಡಿಸುತ್ತಿದ್ದಾರೆ’ ಎಂಬ ಅಧಿಕಾರಿಗಳ ಮಾತನ್ನು ಒಪ್ಪದ ಈಶ್ವರಪ್ಪ, ‘ಇಂತಹ ಕಡೆ ಸ್ಥಳೀಯ ಶಾಸಕರ ನೆರವು ಪಡೆದು ಗ್ರಾಮಸ್ಥರ ಮನವೊಲಿಸಬೇಕು’ ಎಂದು ಸೂಚಿಸಿದರು.</p>.<p class="Subhead">ಕೆರೆಗಳ ಅಭಿವೃದ್ಧಿಗೆ ಗಡುವು: ಜಿಲ್ಲೆಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಎಲ್ಲ ಕೆರೆಗಳನ್ನು ಅಭಿವೃದ್ಧಿಪಡಿಸಲು ಈಶ್ವರಪ್ಪ ಜ. 2ರ ಗಡುವು ವಿಧಿಸಿದರು.</p>.<p>ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ (ನರೇಗಾ)ಯಡಿ ಜಿಲ್ಲೆಯಲ್ಲಿ ಈವರೆಗೆ ಸಾಧಿಸಿರುವ ಪ್ರಗತಿಗೆ ಅತೃಪ್ತಿ ವ್ಯಕ್ತಪಡಿಸಿದರು. ’ಕೇಂದ್ರ ಸರ್ಕಾರದ ಮಹತ್ವದ ‘ಮಳೆ ನೀರನ್ನು ಹಿಡಿಯಿರಿ’ ಪರಿಕಲ್ಪನೆಯನ್ನು ಇಲ್ಲಿ ಏಕೆ ಜಾರಿಗೊಳಿಸಬಾರದು’ ಎಂದು ಪ್ರಶ್ನಿಸಿದರು.</p>.<p>‘ನರೇಗಾ ಯೋಜನೆಯಡಿ ಏನು ಮಾಡಬೇಕು ಎಂಬ ಪರಿಕಲ್ಪನೆಯೇ ಅಧಿಕಾರಿಗಳಿಗೆ ಇಲ್ಲ. ಕೋವಿಡ್ ಕಾರಣ ಹೇಳಿ ನುಣುಚಿಕೊಳ್ಳುವುದು ಸರಿಯಲ್ಲ. ಗುರಿ ನಿಗದಿ ಮಾಡಿಕೊಳ್ಳುವುದಕ್ಕೂ ಮುನ್ನ ಯೋಚಿಸಿ ನಿಗದಿ ಮಾಡಿಕೊಳ್ಳಬೇಕು. ಸದ್ಯ, ಸಾಧಿಸಿರುವ ಪ್ರಗತಿ ಸರಿಯಲ್ಲ’ ಎಂದು ಕಿಡಿಕಾರಿದರು.</p>.<p>’ಗ್ರಾಮ ಪಂಚಾಯಿತಿ ಸದಸ್ಯರು, ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಂಚಾಯಿತಿ ವ್ಯಾಪ್ತಿಯಲ್ಲಿರುವ ಎಲ್ಲ ಕೆರೆಗಳನ್ನು ಅಭಿವೃದ್ಧಿಪಡಿಸಬೇಕು. ಮುಂದಿನ ವರ್ಷ ಜ. 2ಕ್ಕೆ ಕೆರೆ ಅಭಿವೃದ್ಧಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನೆ ಕೈಗೊಳ್ಳಲಾಗುವುದು’ ಎಂದು ಹೇಳಿದರು.</p>.<p>ಶಾಸಕರಾದ ಸಾ.ರಾ.ಮಹೇಶ್, ಕೆ.ಮಹದೇವ್, ಅಶ್ವಿನ್ ಕುಮಾರ್, ಡಾ.ಯತೀಂದ್ರ ಸಿದ್ದರಾಮಯ್ಯ, ವಿಧಾನ ಪರಿಷತ್ತಿನ ಸದಸ್ಯ ಅಡಗೂರು ಎಚ್.ವಿಶ್ವನಾಥ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಲ್.ಕೆ.ಅತೀಕ್, ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎ.ಎಂ.ಯೋಗೀಶ್ ಇದ್ದರು.</p>.<p>ಇದಕ್ಕೂ ಮುನ್ನ ಈಶ್ವರಪ್ಪ ಚಾಮುಂಡೇಶ್ವರಿ ದೇಗುಲಕ್ಕೆ ತೆರಳಿ ಪೂಜೆ ಸಲ್ಲಿಸಿದರು. ನಂತರ, ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಯಲ್ಲಿ ಅಬ್ದುಲ್ ನಜೀರ್ ಸಾಬ್ ಪುತ್ಥಳಿ ಅನಾವರಣ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>’₹ 294 ಕೋಟಿ ನೀಡಿದ್ದರೂ ಜಿಲ್ಲೆಯಲ್ಲಿ ಜಲಜೀವನ್ ಮಿಷನ್ ಯೋಜನೆ ಆಮೆಗತಿಯಲ್ಲಿದೆ’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಕೆ.ಎಸ್.ಈಶ್ವರಪ್ಪ ಅಸಮಾಧಾನ ವ್ಯಕ್ತಪಡಿಸಿದರು.</p>.<p>ಇಲ್ಲಿನ ಜಿಲ್ಲಾ ಪಂಚಾಯಿತಿಯಲ್ಲಿ ಶುಕ್ರವಾರ ಇಲಾಖೆಯ ಪ್ರಗತಿ ಪರಿಶೀಲನೆ ಸಭೆ ನಡೆಸಿ ಮಾತನಾಡಿದ ಅವರು, ’ದೊಡ್ಡಮೊತ್ತದ ಅನುದಾನ ನೀಡಿದ್ದರೂ ಗುತ್ತಿಗೆದಾರರಿಗೆ ಕೇವಲ ₹ 20 ಕೋಟಿ ನೀಡಿರುವುದು ಏಕೆ? ಮಾಸಾಂತ್ಯದೊಳಗೆ ಪ್ರಗತಿ ಸಾಧನೆಯಾಗಬೇಕು’ ಎಂದು ಸೂಚಿಸಿದರು.</p>.<p>’ಕಾಮಗಾರಿಗಳಿಗೆ ಹಂತಹಂತವಾಗಿ ಹಣ ನೀಡಿದರೆ ಗುತ್ತಿಗೆದಾರರು ಬೇಗನೇ ಕೆಲಸ ಪೂರ್ಣಗೊಳಿಸಲು ಸಾಧ್ಯವಾಗುತ್ತದೆ. ಈ ಮಾಸಾಂತ್ಯಕ್ಕೆ ಯೋಜನೆ ಪೂರ್ಣಗೊಂಡಿರುವ ಕಾಮಗಾರಿಗಳ ವಿವರ ಕಳುಹಿಸಿಕೊಡಬೇಕು. ಇಲ್ಲದಿದ್ದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಕೆ ನೀಡಿದರು.</p>.<p>‘ಯೋಜನೆಯ ಹಿಂದಿನ ಸಾಲಿನ ಕಾಮಗಾರಿಗಳ ಪ್ರಗತಿಯಲ್ಲಿ ನಂಜನಗೂಡು ಮತ್ತು ಪಿರಿಯಾಪಟ್ಟಣ ತಾಲ್ಲೂಕು ಹಿಂದುಳಿದಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು.</p>.<p>’ಪ್ರತಿ ಮನೆಯ ನಲ್ಲಿಗಳಿಗೆ ಮೀಟರ್ ಅಳವಡಿಸಲು ಗ್ರಾಮಸ್ಥರು ಅಡ್ಡಿಪಡಿಸುತ್ತಿದ್ದಾರೆ’ ಎಂಬ ಅಧಿಕಾರಿಗಳ ಮಾತನ್ನು ಒಪ್ಪದ ಈಶ್ವರಪ್ಪ, ‘ಇಂತಹ ಕಡೆ ಸ್ಥಳೀಯ ಶಾಸಕರ ನೆರವು ಪಡೆದು ಗ್ರಾಮಸ್ಥರ ಮನವೊಲಿಸಬೇಕು’ ಎಂದು ಸೂಚಿಸಿದರು.</p>.<p class="Subhead">ಕೆರೆಗಳ ಅಭಿವೃದ್ಧಿಗೆ ಗಡುವು: ಜಿಲ್ಲೆಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಎಲ್ಲ ಕೆರೆಗಳನ್ನು ಅಭಿವೃದ್ಧಿಪಡಿಸಲು ಈಶ್ವರಪ್ಪ ಜ. 2ರ ಗಡುವು ವಿಧಿಸಿದರು.</p>.<p>ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ (ನರೇಗಾ)ಯಡಿ ಜಿಲ್ಲೆಯಲ್ಲಿ ಈವರೆಗೆ ಸಾಧಿಸಿರುವ ಪ್ರಗತಿಗೆ ಅತೃಪ್ತಿ ವ್ಯಕ್ತಪಡಿಸಿದರು. ’ಕೇಂದ್ರ ಸರ್ಕಾರದ ಮಹತ್ವದ ‘ಮಳೆ ನೀರನ್ನು ಹಿಡಿಯಿರಿ’ ಪರಿಕಲ್ಪನೆಯನ್ನು ಇಲ್ಲಿ ಏಕೆ ಜಾರಿಗೊಳಿಸಬಾರದು’ ಎಂದು ಪ್ರಶ್ನಿಸಿದರು.</p>.<p>‘ನರೇಗಾ ಯೋಜನೆಯಡಿ ಏನು ಮಾಡಬೇಕು ಎಂಬ ಪರಿಕಲ್ಪನೆಯೇ ಅಧಿಕಾರಿಗಳಿಗೆ ಇಲ್ಲ. ಕೋವಿಡ್ ಕಾರಣ ಹೇಳಿ ನುಣುಚಿಕೊಳ್ಳುವುದು ಸರಿಯಲ್ಲ. ಗುರಿ ನಿಗದಿ ಮಾಡಿಕೊಳ್ಳುವುದಕ್ಕೂ ಮುನ್ನ ಯೋಚಿಸಿ ನಿಗದಿ ಮಾಡಿಕೊಳ್ಳಬೇಕು. ಸದ್ಯ, ಸಾಧಿಸಿರುವ ಪ್ರಗತಿ ಸರಿಯಲ್ಲ’ ಎಂದು ಕಿಡಿಕಾರಿದರು.</p>.<p>’ಗ್ರಾಮ ಪಂಚಾಯಿತಿ ಸದಸ್ಯರು, ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಂಚಾಯಿತಿ ವ್ಯಾಪ್ತಿಯಲ್ಲಿರುವ ಎಲ್ಲ ಕೆರೆಗಳನ್ನು ಅಭಿವೃದ್ಧಿಪಡಿಸಬೇಕು. ಮುಂದಿನ ವರ್ಷ ಜ. 2ಕ್ಕೆ ಕೆರೆ ಅಭಿವೃದ್ಧಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನೆ ಕೈಗೊಳ್ಳಲಾಗುವುದು’ ಎಂದು ಹೇಳಿದರು.</p>.<p>ಶಾಸಕರಾದ ಸಾ.ರಾ.ಮಹೇಶ್, ಕೆ.ಮಹದೇವ್, ಅಶ್ವಿನ್ ಕುಮಾರ್, ಡಾ.ಯತೀಂದ್ರ ಸಿದ್ದರಾಮಯ್ಯ, ವಿಧಾನ ಪರಿಷತ್ತಿನ ಸದಸ್ಯ ಅಡಗೂರು ಎಚ್.ವಿಶ್ವನಾಥ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಲ್.ಕೆ.ಅತೀಕ್, ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎ.ಎಂ.ಯೋಗೀಶ್ ಇದ್ದರು.</p>.<p>ಇದಕ್ಕೂ ಮುನ್ನ ಈಶ್ವರಪ್ಪ ಚಾಮುಂಡೇಶ್ವರಿ ದೇಗುಲಕ್ಕೆ ತೆರಳಿ ಪೂಜೆ ಸಲ್ಲಿಸಿದರು. ನಂತರ, ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಯಲ್ಲಿ ಅಬ್ದುಲ್ ನಜೀರ್ ಸಾಬ್ ಪುತ್ಥಳಿ ಅನಾವರಣ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>