‘ಬರ’ ಗಮನಿಸದ ಉಸ್ತುವಾರಿ ಸಚಿವ!
‘ಬರಗಾಲದ ಹಿನ್ನೆಲೆಯಲ್ಲಿ ಪ್ರತಿ ತಾಲ್ಲೂಕುಗಳಿಗೂ ಭೇಟಿ ನೀಡಿ ಅಧ್ಯಯನ ನಡೆಸಬೇಕು. ಜನರು ಮತ್ತು ಶಾಸಕರನ್ನು ಭೇಟಿಯಾಗಿ ನ.15ರೊಳಗೆ ವರದಿ ಸಲ್ಲಿಸಬೇಕು. ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲಾ ಉಸ್ತುವಾರಿ ಸಚಿವರಿಗೆ ಸೂಚಿಸಿದ್ದಾರೆ. ನ.4ರಂದು ಅವರು ಸಚಿವರಿಗೆ ಪತ್ರ ಬರೆದಿದ್ದಾರೆ. ಆದರೆ ನಾಲ್ಕು ದಿನಗಳು ಕಳೆದಿದ್ದರೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಯಲ್ಲಿ ಬರಪೀಡಿತ ಪ್ರದೇಶದ ಪರಿಸ್ಥಿತಿ ಅವಲೋಕಿಸಲು ಪ್ರವಾಸವನ್ನೇ ಕೈಗೊಂಡಿಲ್ಲ. ಈ ನಡುವೆ ಬಿಜೆಪಿಯ ಶಾಸಕ ಬಸನಗೌಡ ಪಾಟೀಲ ಯತ್ನಾಳ ನೇತೃತ್ವದ ತಂಡ ಜಿಲ್ಲೆಯ ವಿವಿಧೆಡೆ ಸಂಚರಿಸಿ ‘ಬರ ಅಧ್ಯಯನ’ ನಡೆಸಿದೆ! ಪ್ರತಿಕ್ರಿಯೆಗೆ ಉಸ್ತುವಾರಿ ಸಚಿವರು ಲಭ್ಯವಾಗಲಿಲ್ಲ.