ಶನಿವಾರ, 5 ಜುಲೈ 2025
×
ADVERTISEMENT
ADVERTISEMENT

ಜನತಾ ‘ದರ್ಶನ’ ಮರೆತ ಜಿಲ್ಲಾಡಳಿತ: ಸಿಎಂ ತವರಿನಲ್ಲೇ ಅಧಿಕಾರಿಗಳ ನಿರ್ಲಕ್ಷ್ಯ

Published : 9 ನವೆಂಬರ್ 2023, 6:01 IST
Last Updated : 9 ನವೆಂಬರ್ 2023, 6:01 IST
ಫಾಲೋ ಮಾಡಿ
Comments
‘ಬರ’ ಗಮನಿಸದ ಉಸ್ತುವಾರಿ ಸಚಿವ!
‘ಬರಗಾಲದ ಹಿನ್ನೆಲೆಯಲ್ಲಿ ಪ್ರತಿ ತಾಲ್ಲೂಕುಗಳಿಗೂ ಭೇಟಿ ನೀಡಿ ಅಧ್ಯಯನ ನಡೆಸಬೇಕು. ಜನರು ಮತ್ತು ಶಾಸಕರನ್ನು ಭೇಟಿಯಾಗಿ ನ.15ರೊಳಗೆ ವರದಿ ಸಲ್ಲಿಸಬೇಕು. ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲಾ ಉಸ್ತುವಾರಿ ಸಚಿವರಿಗೆ ಸೂಚಿಸಿದ್ದಾರೆ. ನ.4ರಂದು ಅವರು ಸಚಿವರಿಗೆ ಪತ್ರ ಬರೆದಿದ್ದಾರೆ. ಆದರೆ ನಾಲ್ಕು ದಿನಗಳು ಕಳೆದಿದ್ದರೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಯಲ್ಲಿ ಬರಪೀಡಿತ ಪ್ರದೇಶದ ಪರಿಸ್ಥಿತಿ ಅವಲೋಕಿಸಲು ಪ್ರವಾಸವನ್ನೇ ಕೈಗೊಂಡಿಲ್ಲ. ಈ ನಡುವೆ ಬಿಜೆಪಿಯ ಶಾಸಕ ಬಸನಗೌಡ ಪಾಟೀಲ ಯತ್ನಾಳ ನೇತೃತ್ವದ ತಂಡ ಜಿಲ್ಲೆಯ ವಿವಿಧೆಡೆ ಸಂಚರಿಸಿ ‘ಬರ ಅಧ್ಯಯನ’ ನಡೆಸಿದೆ! ಪ್ರತಿಕ್ರಿಯೆಗೆ ಉಸ್ತುವಾರಿ ಸಚಿವರು ಲಭ್ಯವಾಗಲಿಲ್ಲ.
ಶೀಘ್ರದಲ್ಲೇ ಕಾರ್ಯಕ್ರಮ: ಡಿಸಿ
ಈ ಬಗ್ಗೆ ‘‍ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ‘ಎಲ್ಲೆಲ್ಲಿ ಜನತಾ ದರ್ಶನ ನಡೆಸಲಾಗುವುದು (ಕ್ಯಾಲೆಂಡರ್‌ ಆಫ್ ಈವೆಂಟ್) ಎಂಬ ಪ್ರಕಟಣೆಯನ್ನು ಶೀಘ್ರದಲ್ಲೇ ಹೊರಡಿಸಲಾಗುವುದು. 15 ದಿನಗಳಿಗೊಮ್ಮೆ ಹಮ್ಮಿಕೊಳ್ಳಬೇಕು ಎಂಬ ಸೂಚನೆ ಇದೆ. ದೀಪಾವಳಿ ಮುಗಿದ ನಂತರ ಮೊದಲ ಸೋಮವಾರ ತಿ.ನರಸೀಪುರದಲ್ಲಿ ಆಯೋಜಿಸಲು ಉದ್ದೇಶಿಸಲಾಗಿದೆ. ಪಟ್ಟಿ ಸಿದ್ಧಪಡಿಸಲಾಗುತ್ತಿದೆ. ಅರ್ಜಿಗಳು ಬಹಳಷ್ಟು ಪ್ರಮಾಣದಲ್ಲಿ ಬಾಕಿ ಇದ್ದಿದ್ದರಿಂದ ಸೆಪ್ಟೆಂಬರ್‌ನಲ್ಲಿ ಜಿಲ್ಲಾ ಮಟ್ಟದ ಕಾರ್ಯಕ್ರಮ ನಡೆಸಲಾಗಿತ್ತು. ಮುಂದೆ ಹದಿನೈದು ದಿನಗಳಿಗೊಮ್ಮೆ ತಾಲ್ಲೂಕೊಂದನ್ನು ಆಯ್ಕೆ ಮಾಡಿಕೊಂಡು ಆಯೋಜಿಸಲಾಗುವುದು’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT