ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು: ಚಾಮುಂಡಿಬೆಟ್ಟದಲ್ಲಿ ಜಯಚಾಮರಾಜೇಂದ್ರ ಒಡೆಯರ್ ಪುತ್ಥಳಿ ಅನಾವರಣ

Last Updated 22 ಏಪ್ರಿಲ್ 2022, 6:18 IST
ಅಕ್ಷರ ಗಾತ್ರ

ಮೈಸೂರು: ಚಾಮುಂಡಿಬೆಟ್ಟದಲ್ಲಿ ಸ್ಥಾಪಿಸಿರುವ ಜಯಚಾಮರಾಜೇಂದ್ರ ಒಡೆಯರ್ ಪುತ್ಥಳಿಯನ್ನು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಶುಕ್ರವಾರ ಬೆಳಿಗ್ಗೆ ಅನಾವರಣಗೊಳಿಸಿದರು.

ಬೆಟ್ಟದ ಗ್ರಾಮಸ್ಥರು ಸೇರಿಕೊಂಡು ತಮ್ಮದೇ ಖರ್ಚಿನಲ್ಲಿ ಪುತ್ಥಳಿ ನಿರ್ಮಿಸಿ, ಅನಾವರಣ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಶಿಲ್ಪಿ ಸೂರ್ಯಪ್ರಕಾಶ್ ಅವರು ಮೂರೂವರೆ ಅಡಿ ಎತ್ತರದ ಪುತ್ಥಳಿ ನಿರ್ಮಿಸಿದ್ದಾರೆ.

'ಚಾಮುಂಡಿ ಬೆಟ್ಟದ ಗ್ರಾಮಸ್ಥರು ಜಯಚಾಮರಾಜೇಂದ್ರ ಒಡೆಯರ್ ಪುತ್ಥಳಿ ನಿರ್ಮಿಸಿರುವುದು ತುಂಬಾ ಸಂತೋಷ. ಈ ಮೂಲಕ ಮಹಾರಾಜರ ಕೊಡುಗೆಗಳನ್ನು ಸ್ಮರಿಸುವ ಕೆಲಸ ಮಾಡಿದ್ದಾರೆ' ಎಂದು ಪ್ರಮೋದಾದೇವಿ ಹೇಳಿದರು.

ಪುತ್ಥಳಿ ಅನಾವರಣ ಸಮಯದಲ್ಲೇ ಚಾಮುಂಡಿ ಬೆಟ್ಟಕ್ಕೆ ಬಂದಿದ್ದ ಕೃಷಿ ಸಚಿವ ಬಿ.ಸಿ‌.ಪಾಟೀಲ ಮತ್ತು ಶಾಸಕ ಜಿ.ಟಿ.ದೇವೇಗೌಡ ಅವರೂ ಕಾರ್ಯಕ್ರಮದಲ್ಲಿ ಭಾಗಿಯಾದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT