ಕೊಳೆತ ತ್ಯಾಜ್ಯ ತಿನ್ನಲು ನಾಯಿಗಳು ಮತ್ತು ಹಂದಿಗಳು ಬೀಡು ಬಿಟ್ಟಿದ್ದು, ರಸ್ತೆಯಲ್ಲಿ ಓಡಾಡುವ ಜನರು, ವಾಹನ ಸವಾರರನ್ನು ಕಚ್ಚಲು ಯತ್ನಿಸುತ್ತಿವೆ. ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗಿದ್ದು, ಜನರು ಈ ರಸ್ತೆಯಲ್ಲಿ ಓಡಾಡಲು ಭಯಪಡುತ್ತಿದ್ದಾರೆ. ಧನಗಹಳ್ಳಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಕೂಡಲೇ ಕಸದ ತ್ಯಾಜ್ಯ ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು. ಗ್ರಾಮದ ನೈರ್ಮಲ್ಯ ಕಾಪಾಡಬೇಕು.