<p><strong>ಜಯಪುರ</strong>: ಹೋಬಳಿಯ ಮಂಡನಹಳ್ಳಿ ಜೋಡಿಲಿಂಗ ಮಹದೇಶ್ವರ ಜಾತ್ರಾ ಮಹೋತ್ಸವದಲ್ಲಿ ಮಂಗಳವಾರ ಕೊಂಡೋತ್ಸವ ನಡೆಯಿತು.</p>.<p>ಮಹದೇಶ್ವರ ಸ್ವಾಮಿ, ವೀರಭದ್ರೇಶ್ವರ ಸ್ವಾಮಿ ದೇವರ ಬಿರುದು ಹೊತ್ತ ಅರ್ಚಕರು ಕೊಂಡ ಹಾಯ್ದರು. ಭಕ್ತರು ಕೊಂಡೊತ್ಸವ ಕಣ್ತುಂಬಿಕೊಂಡರು. ಭಕ್ತರು ತೆಂಗಿನಕಾಯಿ ಮತ್ತು ದವಸ ಧಾನ್ಯಗಳನ್ನು ಕೊಂಡಕ್ಕೆ ಹಾಕಿ ಪೂಜೆ ಸಲ್ಲಿಸಿದರು.</p>.<p>ಸೋಮವಾರ ಹಾಲರವಿ ಉತ್ಸವಕ್ಕೆ ಗಂಗಸ್ಥಾನದಲ್ಲಿ ಪೂಜೆ ನಡೆಯಿತು. ಮಹದೇಶ್ವರ ಸ್ವಾಮಿ ಉತ್ಸವ ಮೂರ್ತಿ, ದೇವರ ಬಿರುದು ಬಾವಲಿಗಳು ಮೆರವಣಿಗೆಯಲ್ಲಿ ಸಾಗಿದವು. ತಮಟೆ, ಮಂಗಳವಾದ್ಯ ಸದ್ದಿಗೆ ವೀರಗಾಸೆ ನೃತ್ಯ ನಡೆಯಿತು. ಮೆರವಣಿಗೆಯಲ್ಲಿ ಪುರ ಮಠದ ಚಂದ್ರಶೇಖರ ಸ್ವಾಮೀಜಿ ಭಾಗವಹಿಸಿದ್ದರು.</p>.<p>ಮುಂಜಾನೆ 3ಗಂಟೆ ವೇಳೆಗೆ ಕರ್ಪೂರದಿಂದ ಕೊಂಡ ಹಚ್ಚಲಾಯಿತು. ಬಳಿಕ ಜೋಡಿಲಿಂಗ ಮಹದೇಶ್ವರ ಸ್ವಾಮಿಗೆ ಮಹಾಮಂಗಳಾರತಿ ನೆರವೇರಿಸಿ, ಭಕ್ತರಿಗೆ ದೇವರ ದರ್ಶನಕ್ಕೆ ಅನುವು ಮಾಡಿಕೊಡಲಾಯಿತು. ಭಕ್ತರು ಸರತಿ ಸಾಲಿನಲ್ಲಿ ನಿಂತು ಜೋಡಿಲಿಂಗ ದರ್ಶನ ಪಡೆದು, ಹರಕೆ ಪೂಜೆ ಸಲ್ಲಿಸಿದರು. ಮಹಾಪ್ರಸಾದ ವಿನಿಯೋಗ ಮಾಡಲಾಯಿತು.</p><p>ಮಂಗಳವಾರ ಸಂಜೆ ಹುಲಿವಾಹನ ಉತ್ಸವ ಮೂರ್ತಿ, ಮಹದೇಶ್ವರ ಸ್ವಾಮಿ ಉತ್ಸವ ಮೂರ್ತಿ ಮತ್ತು ಬಿರುದು ಬಾವಲಿಗಳನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡುವ ಮೂಲಕ ಜೋಡಿಲಿಂಗ ಮಹದೇಶ್ವರ ಜಾತ್ರಾ ಮಹೋತ್ಸವಕ್ಕೆ ಅಂತಿಮ ತೆರೆ ಬಿದ್ದಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಯಪುರ</strong>: ಹೋಬಳಿಯ ಮಂಡನಹಳ್ಳಿ ಜೋಡಿಲಿಂಗ ಮಹದೇಶ್ವರ ಜಾತ್ರಾ ಮಹೋತ್ಸವದಲ್ಲಿ ಮಂಗಳವಾರ ಕೊಂಡೋತ್ಸವ ನಡೆಯಿತು.</p>.<p>ಮಹದೇಶ್ವರ ಸ್ವಾಮಿ, ವೀರಭದ್ರೇಶ್ವರ ಸ್ವಾಮಿ ದೇವರ ಬಿರುದು ಹೊತ್ತ ಅರ್ಚಕರು ಕೊಂಡ ಹಾಯ್ದರು. ಭಕ್ತರು ಕೊಂಡೊತ್ಸವ ಕಣ್ತುಂಬಿಕೊಂಡರು. ಭಕ್ತರು ತೆಂಗಿನಕಾಯಿ ಮತ್ತು ದವಸ ಧಾನ್ಯಗಳನ್ನು ಕೊಂಡಕ್ಕೆ ಹಾಕಿ ಪೂಜೆ ಸಲ್ಲಿಸಿದರು.</p>.<p>ಸೋಮವಾರ ಹಾಲರವಿ ಉತ್ಸವಕ್ಕೆ ಗಂಗಸ್ಥಾನದಲ್ಲಿ ಪೂಜೆ ನಡೆಯಿತು. ಮಹದೇಶ್ವರ ಸ್ವಾಮಿ ಉತ್ಸವ ಮೂರ್ತಿ, ದೇವರ ಬಿರುದು ಬಾವಲಿಗಳು ಮೆರವಣಿಗೆಯಲ್ಲಿ ಸಾಗಿದವು. ತಮಟೆ, ಮಂಗಳವಾದ್ಯ ಸದ್ದಿಗೆ ವೀರಗಾಸೆ ನೃತ್ಯ ನಡೆಯಿತು. ಮೆರವಣಿಗೆಯಲ್ಲಿ ಪುರ ಮಠದ ಚಂದ್ರಶೇಖರ ಸ್ವಾಮೀಜಿ ಭಾಗವಹಿಸಿದ್ದರು.</p>.<p>ಮುಂಜಾನೆ 3ಗಂಟೆ ವೇಳೆಗೆ ಕರ್ಪೂರದಿಂದ ಕೊಂಡ ಹಚ್ಚಲಾಯಿತು. ಬಳಿಕ ಜೋಡಿಲಿಂಗ ಮಹದೇಶ್ವರ ಸ್ವಾಮಿಗೆ ಮಹಾಮಂಗಳಾರತಿ ನೆರವೇರಿಸಿ, ಭಕ್ತರಿಗೆ ದೇವರ ದರ್ಶನಕ್ಕೆ ಅನುವು ಮಾಡಿಕೊಡಲಾಯಿತು. ಭಕ್ತರು ಸರತಿ ಸಾಲಿನಲ್ಲಿ ನಿಂತು ಜೋಡಿಲಿಂಗ ದರ್ಶನ ಪಡೆದು, ಹರಕೆ ಪೂಜೆ ಸಲ್ಲಿಸಿದರು. ಮಹಾಪ್ರಸಾದ ವಿನಿಯೋಗ ಮಾಡಲಾಯಿತು.</p><p>ಮಂಗಳವಾರ ಸಂಜೆ ಹುಲಿವಾಹನ ಉತ್ಸವ ಮೂರ್ತಿ, ಮಹದೇಶ್ವರ ಸ್ವಾಮಿ ಉತ್ಸವ ಮೂರ್ತಿ ಮತ್ತು ಬಿರುದು ಬಾವಲಿಗಳನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡುವ ಮೂಲಕ ಜೋಡಿಲಿಂಗ ಮಹದೇಶ್ವರ ಜಾತ್ರಾ ಮಹೋತ್ಸವಕ್ಕೆ ಅಂತಿಮ ತೆರೆ ಬಿದ್ದಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>