<p><strong>ಜಯಪುರ:</strong> ಹೋಬಳಿಯ ದೊಡ್ಡಹುಂಡಿಯ ಮುರುಡ ಬಸವೇಶ್ವರಸ್ವಾಮಿ ಓಕಳಿ ಜಾತ್ರಾ ಮಹೋತ್ಸವ ಪ್ರಯುಕ್ತ ಬಸವೇಶ್ವರ ರಥೋತ್ಸವ ದೊಡ್ಡಹುಂಡಿ, ಕೆರೆಹಂಡಿ, ಡಿ.ಸಾಲುಂಡಿ ಗ್ರಾಮಗಳಲ್ಲಿ ಸೋಮವಾರ ವಿಜೃಂಭಣೆಯಿಂದ ನಡೆಯಿತು.</p>.<p>ಒಂಬತ್ತು ವರ್ಷಕ್ಕೊಮ್ಮೆ ನಡೆಯುವ ಓಕಳಿ ಜಾತ್ರಾ ಮೆರವಣಿಗೆಯಲ್ಲಿ ಗೋವುಗಳನ್ನು ಶೃಂಗರಿಸಿ ಮೆರವಣಿಗೆ ಮಾಡಲಾಯಿತು.</p>.<p>ಹರಕೆ ಹೊತ್ತ ಭಕ್ತರು ಬಾಯಿಬೀಗ ಧರಿಸಿ ಸ್ವಾಮಿಯ ಹರಕೆ ತೀರಿಸಿದರು. 33 ಹಳ್ಳಿಗಳ ಗಡಿ ದೇವರುಗಳು ಮತ್ತು ಬಿರುದು ಬಾವಲಿಗಳು, ಛತ್ರಿ ಚಾಮರಗಳು ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದವು.</p>.<p>ಮಂಗಳವಾದ್ಯ ಮತ್ತು ತಮಟೆ ಸದ್ದಿಗೆ ನಂದಿಧ್ವಜ ಕಂಬವನ್ನು ಯುವಕರು ಹೊತ್ತು ಕುಣಿದರು.ಪೂಜಾ ಕುಣಿತ,ಡೊಳ್ಳು ಕುಣಿತ ,ವೀರಗಾಸೆ ನೃತ್ಯ ಸೇರಿ ಸಾಂಸ್ಕೃತಿಕ ಕಲಾ ತಂಡಗಳು ಮೆರವಣಿಗೆಯಲ್ಲಿ ಸಾಗಿದವು.</p>.<p>ಜಾತ್ರೋತ್ಸವದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು. ಸರತಿ ಸಾಲಿನಲ್ಲಿ ನಿಂತು ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು.</p>.<p>ಜಯಪುರ ಠಾಣಾ ಪಿಎಸ್ಐ ಕಾಳೇಗೌಡ ಅವರು ಪೊಲೀಸ್ ಬಂದೋಬಸ್ತ್ ನೇತೃತ್ವ ವಹಿಸಿ,ಜಾತ್ರಾ ಮೆರವಣಿಗೆ ಸಾಂಗವಾಗಿ ಸಾಗಲು ಸಿಬ್ಬಂದಿಗಳಿಗೆ ಮಾರ್ಗದರ್ಶನ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಯಪುರ:</strong> ಹೋಬಳಿಯ ದೊಡ್ಡಹುಂಡಿಯ ಮುರುಡ ಬಸವೇಶ್ವರಸ್ವಾಮಿ ಓಕಳಿ ಜಾತ್ರಾ ಮಹೋತ್ಸವ ಪ್ರಯುಕ್ತ ಬಸವೇಶ್ವರ ರಥೋತ್ಸವ ದೊಡ್ಡಹುಂಡಿ, ಕೆರೆಹಂಡಿ, ಡಿ.ಸಾಲುಂಡಿ ಗ್ರಾಮಗಳಲ್ಲಿ ಸೋಮವಾರ ವಿಜೃಂಭಣೆಯಿಂದ ನಡೆಯಿತು.</p>.<p>ಒಂಬತ್ತು ವರ್ಷಕ್ಕೊಮ್ಮೆ ನಡೆಯುವ ಓಕಳಿ ಜಾತ್ರಾ ಮೆರವಣಿಗೆಯಲ್ಲಿ ಗೋವುಗಳನ್ನು ಶೃಂಗರಿಸಿ ಮೆರವಣಿಗೆ ಮಾಡಲಾಯಿತು.</p>.<p>ಹರಕೆ ಹೊತ್ತ ಭಕ್ತರು ಬಾಯಿಬೀಗ ಧರಿಸಿ ಸ್ವಾಮಿಯ ಹರಕೆ ತೀರಿಸಿದರು. 33 ಹಳ್ಳಿಗಳ ಗಡಿ ದೇವರುಗಳು ಮತ್ತು ಬಿರುದು ಬಾವಲಿಗಳು, ಛತ್ರಿ ಚಾಮರಗಳು ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದವು.</p>.<p>ಮಂಗಳವಾದ್ಯ ಮತ್ತು ತಮಟೆ ಸದ್ದಿಗೆ ನಂದಿಧ್ವಜ ಕಂಬವನ್ನು ಯುವಕರು ಹೊತ್ತು ಕುಣಿದರು.ಪೂಜಾ ಕುಣಿತ,ಡೊಳ್ಳು ಕುಣಿತ ,ವೀರಗಾಸೆ ನೃತ್ಯ ಸೇರಿ ಸಾಂಸ್ಕೃತಿಕ ಕಲಾ ತಂಡಗಳು ಮೆರವಣಿಗೆಯಲ್ಲಿ ಸಾಗಿದವು.</p>.<p>ಜಾತ್ರೋತ್ಸವದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು. ಸರತಿ ಸಾಲಿನಲ್ಲಿ ನಿಂತು ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು.</p>.<p>ಜಯಪುರ ಠಾಣಾ ಪಿಎಸ್ಐ ಕಾಳೇಗೌಡ ಅವರು ಪೊಲೀಸ್ ಬಂದೋಬಸ್ತ್ ನೇತೃತ್ವ ವಹಿಸಿ,ಜಾತ್ರಾ ಮೆರವಣಿಗೆ ಸಾಂಗವಾಗಿ ಸಾಗಲು ಸಿಬ್ಬಂದಿಗಳಿಗೆ ಮಾರ್ಗದರ್ಶನ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>