ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಂಜನಗೂಡು: ಶ್ರೀಕಂಠೇಶ್ವರ ದೇಗುಲದಲ್ಲಿ ದೇವೇಗೌಡ ದಂಪತಿ ಪೂಜೆ

ಜೆಡಿಎಸ್ ವರಿಷ್ಠ, ಮಾಜಿ‌ ಪ್ರಧಾನಿ ಎಚ್.ಡಿ.ದೇವೇಗೌಡ
Last Updated 1 ಡಿಸೆಂಬರ್ 2022, 6:12 IST
ಅಕ್ಷರ ಗಾತ್ರ

ನಂಜನಗೂಡು (ಮೈಸೂರು ಜಿಲ್ಲೆ): ಜೆಡಿಎಸ್ ವರಿಷ್ಠ, ಮಾಜಿ‌ ಪ್ರಧಾನಿ ಎಚ್.ಡಿ.ದೇವೇಗೌಡ ಪತ್ನಿ ಚನ್ನಮ್ಮ ಅವರೊಂದಿಗೆ ಇಲ್ಲಿನ ಶ್ರೀಕಂಠೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಗುರುವಾರ ವಿಶೇಷ ಪೂಜೆ ಸಲ್ಲಿಸಿದರು.

ರುದ್ರಾಭಿಷೇಕ ಮಾಡಿಸಿದರು. ತುಲಾಭಾರ ಸೇವೆ ಸಲ್ಲಿಸಿದರು. ಶಾಸಕರಾದ ಸಾ.ರಾ.ಮಹೇಶ್, ಅಶ್ವಿನ್ ಕುಮಾರ್, ವಿಧಾನಪರಿಷತ್ ಸದಸ್ಯ ಸಿ.ಎನ್. ಮಂಜೇಗೌಡ ಇದ್ದರು.

'ಮೂರು ವರ್ಷದ ನಂತರ ನಂಜುಂಡೇಶ್ವರನ ದರ್ಶನಕ್ಕೆ ಬಂದಿದ್ದೇನೆ. ದಿನ ಚೆನ್ನಾಗಿದೆ ಅಂತ ಗೊತ್ತು ಮಾಡಿದ್ದರು' ಎಂದರು.

'ನಾನು ಚಿಕ್ಕ ಹುಡುಗನಿಂದಲೂ ನಂಜನಗೂಡಿಗೆ ಬರುತ್ತಿದ್ದೇನೆ. ಚಿಕ್ಕ ವಯಸ್ಸಿನಲ್ಲಿ ಕಿವಿ ಸಮಸ್ಯೆಯಾಗಿತ್ತು. ಎಷ್ಟು ವೈದ್ಯರಿಗೆ ತೋರಿಸಿದರೂ ಪ್ರಯೋಜನ ಆಗಿರಲಿಲ್ಲ. ನಂಜುಂಡೇಶ್ವರಲ್ಲಿ ಪ್ರಾರ್ಥಿಸಿದ ನಂತರ, ಗುಣವಾಗಿತ್ತು. ಭಕ್ತಿಯಿಂದ ಪ್ರಾರ್ಥನೆ ಮಾಡಿದರೆ ದೇವರು ಫಲ ಕೊಡುತ್ತಾನೆ' ಎಂದು ದೇವೇಗೌಡಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT