<p><strong>ಮೈಸೂರು</strong>: ‘ಉದ್ಯೋಗದ ನಿರೀಕ್ಷೆಯಲ್ಲಿರುವವರು ತಮಗೆ ದೊರೆತ ಅವಕಾಶವನ್ನು ಸಮರ್ಪಕವಾಗಿ ಬಳಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕು’ ಎಂದು ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ಪ್ರಾಂಶುಪಾಲ ಪ್ರೊ.ಸೋಮಣ್ಣ ಹೇಳಿದರು.</p>.<p>ನಗರದ ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ಸಮರ್ಥನಂ ಅಂಗವಿಕಲರ ಸಂಸ್ಥೆ ಹಾಗೂ ಕಾಲೇಜಿನ ಐಕ್ಯೂಎಸಿ ಘಟಕ, ವಿದ್ಯಾಂಗ ಅಂಗವಿಕಲರ ಸಬಲೀಕರಣ ಸಮಿತಿ, ಹಿರಿಯ ವಿದ್ಯಾರ್ಥಿಗಳ ಸಂಘ, ಪ್ಲೇಸ್ಮೆಂಟ್ ಸೆಲ್ ಆಶ್ರಯದಲ್ಲಿ ಶನಿವಾರ ನಡೆದ ಉದ್ಯೋಗ ಮೇಳದಲ್ಲಿ ಮಾತನಾಡಿದರು.</p>.<p>‘ತಮ್ಮ ಆಯ್ಕೆಯ ಉದ್ಯೋಗಕ್ಕಾಗಿ ಹೆಚ್ಚು ಸಮಯ ವ್ಯರ್ಥ ಮಾಡದೆ, ದೊರೆತ ಉದ್ಯೋಗವನ್ನು ಸಮರ್ಥವಾಗಿ ಮಾಡಬೇಕು. ಜೊತೆಯಲ್ಲೇ ಹೆಚ್ಚು ಪುಸ್ತಕಗಳನ್ನು ಖರೀದಿಸಿ, ನಿರಂತರ ಅಧ್ಯಯನಶೀಲರಾಗಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ಮಾಡಬಹುದು. ಅವಕಾಶ ದೊರೆತರೆ ಸ್ವಂತ ಉದ್ಯೋಗವೂ ಆರಂಭಿಸಬಹುದು’ ಎಂದು ಸಲಹೆ ನೀಡಿದರು.</p>.<p>ಸಮರ್ಥನಂ ಸಂಸ್ಥೆಯ ಅಖಿಲ ಭಾರತ ಪ್ಲೇಸ್ಮೆಂಟ್ ಸೆಲ್ ಮುಖ್ಯಸ್ಥ ಕೆ.ಸತೀಶ್ ಮಾತನಾಡಿ, ‘ಸಂಸ್ಥೆಯು ದೇಶದಾದ್ಯಂತ 182 ಉದ್ಯೋಗ ಮೇಳವನ್ನು ಏರ್ಪಡಿಸಿದ್ದು, ಇದರಲ್ಲಿ 30 ಸಾವಿರಕ್ಕೂ ಹೆಚ್ಚು ಯುವಜನರು ಉದ್ಯೋಗ ಪಡೆದುಕೊಂಡಿದ್ದಾರೆ’ ಎಂದು ಮಾಹಿತಿ ನೀಡಿದರು.</p>.<p>ಉದ್ಯೋಗ ಮೇಳದಲ್ಲಿ ಜಿಲ್ಲೆಯವರು ಮಾತ್ರವಲ್ಲದೆ, ಹಾಸನ, ಮಂಡ್ಯ, ಚಾಮರಾಜನಗರ ಜಿಲ್ಲೆಯ ನೂರಾರು ಉದ್ಯೋಗ ಆಕಾಂಕ್ಷಿಗಳು ಭಾಗವಹಿಸಿದ್ದರು. 284ಕ್ಕೂ ಹೆಚ್ಚು ಅಭ್ಯರ್ಥಿಗಳನ್ನು ಸ್ಥಳದಲ್ಲೇ ಆಯ್ಕೆ ಮಾಡಲಾಯಿತು.</p>.<p>ಕಾರ್ಯಕ್ರಮದಲ್ಲಿ ಐಕ್ಯೂಎಸಿ ಘಟಕದ ಸಂಚಾಲಕ ವಿ.ಮಂಜುನಾಥ್, ಅಂಗವಿಕಲರ ಸಬಲೀಕರಣ ಸಮಿತಿ ಸಂಚಾಲಕ ನಾಗರಾಜ, ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷೆ ಪ್ರೊ.ಜಯಶ್ರೀ, ಪ್ಲೇಸ್ಮೆಂಟ್ ಸೆಲ್ ಸಂಚಾಲಕ ನಿರಂಜನ್ ಬಾಬು, ಸಮರ್ಥನಂ ಸಂಸ್ಥೆಯ ಸುಭಾಷ್, ಶಿವರಾಜು, ವೀರಭದ್ರ ಪಟೇಲ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಉದ್ಯೋಗದ ನಿರೀಕ್ಷೆಯಲ್ಲಿರುವವರು ತಮಗೆ ದೊರೆತ ಅವಕಾಶವನ್ನು ಸಮರ್ಪಕವಾಗಿ ಬಳಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕು’ ಎಂದು ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ಪ್ರಾಂಶುಪಾಲ ಪ್ರೊ.ಸೋಮಣ್ಣ ಹೇಳಿದರು.</p>.<p>ನಗರದ ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ಸಮರ್ಥನಂ ಅಂಗವಿಕಲರ ಸಂಸ್ಥೆ ಹಾಗೂ ಕಾಲೇಜಿನ ಐಕ್ಯೂಎಸಿ ಘಟಕ, ವಿದ್ಯಾಂಗ ಅಂಗವಿಕಲರ ಸಬಲೀಕರಣ ಸಮಿತಿ, ಹಿರಿಯ ವಿದ್ಯಾರ್ಥಿಗಳ ಸಂಘ, ಪ್ಲೇಸ್ಮೆಂಟ್ ಸೆಲ್ ಆಶ್ರಯದಲ್ಲಿ ಶನಿವಾರ ನಡೆದ ಉದ್ಯೋಗ ಮೇಳದಲ್ಲಿ ಮಾತನಾಡಿದರು.</p>.<p>‘ತಮ್ಮ ಆಯ್ಕೆಯ ಉದ್ಯೋಗಕ್ಕಾಗಿ ಹೆಚ್ಚು ಸಮಯ ವ್ಯರ್ಥ ಮಾಡದೆ, ದೊರೆತ ಉದ್ಯೋಗವನ್ನು ಸಮರ್ಥವಾಗಿ ಮಾಡಬೇಕು. ಜೊತೆಯಲ್ಲೇ ಹೆಚ್ಚು ಪುಸ್ತಕಗಳನ್ನು ಖರೀದಿಸಿ, ನಿರಂತರ ಅಧ್ಯಯನಶೀಲರಾಗಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ಮಾಡಬಹುದು. ಅವಕಾಶ ದೊರೆತರೆ ಸ್ವಂತ ಉದ್ಯೋಗವೂ ಆರಂಭಿಸಬಹುದು’ ಎಂದು ಸಲಹೆ ನೀಡಿದರು.</p>.<p>ಸಮರ್ಥನಂ ಸಂಸ್ಥೆಯ ಅಖಿಲ ಭಾರತ ಪ್ಲೇಸ್ಮೆಂಟ್ ಸೆಲ್ ಮುಖ್ಯಸ್ಥ ಕೆ.ಸತೀಶ್ ಮಾತನಾಡಿ, ‘ಸಂಸ್ಥೆಯು ದೇಶದಾದ್ಯಂತ 182 ಉದ್ಯೋಗ ಮೇಳವನ್ನು ಏರ್ಪಡಿಸಿದ್ದು, ಇದರಲ್ಲಿ 30 ಸಾವಿರಕ್ಕೂ ಹೆಚ್ಚು ಯುವಜನರು ಉದ್ಯೋಗ ಪಡೆದುಕೊಂಡಿದ್ದಾರೆ’ ಎಂದು ಮಾಹಿತಿ ನೀಡಿದರು.</p>.<p>ಉದ್ಯೋಗ ಮೇಳದಲ್ಲಿ ಜಿಲ್ಲೆಯವರು ಮಾತ್ರವಲ್ಲದೆ, ಹಾಸನ, ಮಂಡ್ಯ, ಚಾಮರಾಜನಗರ ಜಿಲ್ಲೆಯ ನೂರಾರು ಉದ್ಯೋಗ ಆಕಾಂಕ್ಷಿಗಳು ಭಾಗವಹಿಸಿದ್ದರು. 284ಕ್ಕೂ ಹೆಚ್ಚು ಅಭ್ಯರ್ಥಿಗಳನ್ನು ಸ್ಥಳದಲ್ಲೇ ಆಯ್ಕೆ ಮಾಡಲಾಯಿತು.</p>.<p>ಕಾರ್ಯಕ್ರಮದಲ್ಲಿ ಐಕ್ಯೂಎಸಿ ಘಟಕದ ಸಂಚಾಲಕ ವಿ.ಮಂಜುನಾಥ್, ಅಂಗವಿಕಲರ ಸಬಲೀಕರಣ ಸಮಿತಿ ಸಂಚಾಲಕ ನಾಗರಾಜ, ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷೆ ಪ್ರೊ.ಜಯಶ್ರೀ, ಪ್ಲೇಸ್ಮೆಂಟ್ ಸೆಲ್ ಸಂಚಾಲಕ ನಿರಂಜನ್ ಬಾಬು, ಸಮರ್ಥನಂ ಸಂಸ್ಥೆಯ ಸುಭಾಷ್, ಶಿವರಾಜು, ವೀರಭದ್ರ ಪಟೇಲ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>