<p><strong>ಮೈಸೂರು: ‘</strong>ಈಗಿನ ಡಿಜಿಟಲ್ ಯುಗದಲ್ಲೂ ಪತ್ರಿಕೋದ್ಯಮದಲ್ಲಿ ನೈತಿಕತೆ ಉಳಿದಿದೆ’ ಎಂದು ಪತ್ರಕರ್ತ ಅಂಶಿ ಪ್ರಸನ್ನಕುಮಾರ್ ಪ್ರತಿಪಾದಿಸಿದರು.</p>.<p>ಇಲ್ಲಿನ ಮಹಾರಾಜ ಕಾಲೇಜು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗವು ಗುರುವಾರ ಏರ್ಪಡಿಸಿದ್ದ ‘ರೂಸಾ 2.0’ ಪ್ರಾಯೋಜಿತ’ ಶೈಕ್ಷಣಿಕ ಕಾರ್ಯಾಗಾರದ ತಾಂತ್ರಿಕ ಅಧಿವೇಶನದಲ್ಲಿ ಮಾತನಾಡಿದರು.</p>.<p>‘ಮುಖ್ಯವಾಹಿನಿಯ ಪತ್ರಿಕೆಗಳು ಹಾಗೂ ಪತ್ರಕರ್ತರು ಯಾವುದೇ ದಾಖಲೆಗಳಿಲ್ಲದೇ ಸುದ್ದಿಗಳನ್ನು ಮಾಡುವುದಿಲ್ಲ. ಹೀಗಾಗಿ ಇನ್ನೂ ಜನರಿಗೆ ಮಾಧ್ಯಮಗಳ ಬಗ್ಗೆ ನಂಬಿಕೆ, ವಿಶ್ವಾಸವಿದೆ. ಅದನ್ನು ಉಳಿಸಿಕೊಂಡು ಹೋಗಬೇಕಾಗಿದೆ’ ಎಂದರು.</p>.<p>‘ಸ್ವಾತಂತ್ರ್ಯಪೂರ್ವದಲ್ಲಿ ಕಲ್ಲಚ್ಚು, ನಂತರ ಅಚ್ಚುಮೋಳೆ ಕಾಲ ಇತ್ತು. ನಂತರ ಕಂಪ್ಯೂಟರ್ ಬಂದಿತು. ಪ್ರಸ್ತುತ ಡಿಜಿಟಲ್ ಮಾಧ್ಯಮಕ್ಕೆ ತಕ್ಕಂತೆ ಪತ್ರಿಕೆಗಳು ಕೂಡ ಬದಲಾಗಿವೆ. ಡಿಜಿಟಲ್ ಮಾಧ್ಯಮದ ಮೂಲಕವು ಜನರಿಗೆ ಸುದ್ದಿಯನ್ನು ಶರವೇಗದಲ್ಲಿ ತಲುಪಿಸುತ್ತಿವೆ’ ಎಂದು ಹೇಳಿದರು.</p>.<p>‘ಎಲ್ಲಾ ಕ್ಷೇತ್ರಗಳಲ್ಲೂ ಒಳಿತು, ಕೆಡಕು ಇರುತ್ತದೆ. ಹೀಗಾಗಿ ಎಲ್ಲಾ ಪತ್ರಿಕೆಗಳು ಹಾಗೂ ಪತ್ರಕರ್ತರನ್ನು ಒಂದೇ ರೀತಿ ನೋಡುವ ಅಗತ್ಯವಿಲ್ಲ’ ಎಂದರು.</p>.<p>‘ಸಾಮಾನ್ಯ ಜ್ಞಾನ, ಪ್ರಚಲಿತ ವಿದ್ಯಮಾನಗಳ ಬಗ್ಗೆ ಅರಿವು, ಭಾಷೆ ಹಾಗೂ ಕಂಪ್ಯೂಟರ್ ಕೌಶಲ ಇರುವವರಿಗೆ ಮಾಧ್ಯಮ ಕ್ಷೇತ್ರಗಳಲ್ಲಿ ಉದ್ಯೋಗಕ್ಕೆ ಕೊರತೆ ಇಲ್ಲ. ಪತ್ರಿಕೆಗಳನ್ನು ಓದಬೇಕು. ಜೊತೆಗೆ ಸಾಹಿತ್ಯ ಕೃತಿಗಳನ್ನು ಓದಬೇಕು’ ಎಂದು ಸಲಹೆ ನೀಡಿದರು.</p>.<p>ಪತ್ರಕರ್ತ ಕೆ.ಪಿ. ನಾಗರಾಜ್ ಮಾತನಾಡಿದರು. ಪತ್ರಿಕೋದ್ಯಮ ವಿಭಾಗದ ಅಧ್ಯಾಪಕರಾದ ಗೋಪಾಲ್, ಶ್ವೇತಾ ಎಂ. ಹನ್ಸ್, ಕೇಶವಮೂರ್ತಿ, ಎನ್. ನವೀನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: ‘</strong>ಈಗಿನ ಡಿಜಿಟಲ್ ಯುಗದಲ್ಲೂ ಪತ್ರಿಕೋದ್ಯಮದಲ್ಲಿ ನೈತಿಕತೆ ಉಳಿದಿದೆ’ ಎಂದು ಪತ್ರಕರ್ತ ಅಂಶಿ ಪ್ರಸನ್ನಕುಮಾರ್ ಪ್ರತಿಪಾದಿಸಿದರು.</p>.<p>ಇಲ್ಲಿನ ಮಹಾರಾಜ ಕಾಲೇಜು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗವು ಗುರುವಾರ ಏರ್ಪಡಿಸಿದ್ದ ‘ರೂಸಾ 2.0’ ಪ್ರಾಯೋಜಿತ’ ಶೈಕ್ಷಣಿಕ ಕಾರ್ಯಾಗಾರದ ತಾಂತ್ರಿಕ ಅಧಿವೇಶನದಲ್ಲಿ ಮಾತನಾಡಿದರು.</p>.<p>‘ಮುಖ್ಯವಾಹಿನಿಯ ಪತ್ರಿಕೆಗಳು ಹಾಗೂ ಪತ್ರಕರ್ತರು ಯಾವುದೇ ದಾಖಲೆಗಳಿಲ್ಲದೇ ಸುದ್ದಿಗಳನ್ನು ಮಾಡುವುದಿಲ್ಲ. ಹೀಗಾಗಿ ಇನ್ನೂ ಜನರಿಗೆ ಮಾಧ್ಯಮಗಳ ಬಗ್ಗೆ ನಂಬಿಕೆ, ವಿಶ್ವಾಸವಿದೆ. ಅದನ್ನು ಉಳಿಸಿಕೊಂಡು ಹೋಗಬೇಕಾಗಿದೆ’ ಎಂದರು.</p>.<p>‘ಸ್ವಾತಂತ್ರ್ಯಪೂರ್ವದಲ್ಲಿ ಕಲ್ಲಚ್ಚು, ನಂತರ ಅಚ್ಚುಮೋಳೆ ಕಾಲ ಇತ್ತು. ನಂತರ ಕಂಪ್ಯೂಟರ್ ಬಂದಿತು. ಪ್ರಸ್ತುತ ಡಿಜಿಟಲ್ ಮಾಧ್ಯಮಕ್ಕೆ ತಕ್ಕಂತೆ ಪತ್ರಿಕೆಗಳು ಕೂಡ ಬದಲಾಗಿವೆ. ಡಿಜಿಟಲ್ ಮಾಧ್ಯಮದ ಮೂಲಕವು ಜನರಿಗೆ ಸುದ್ದಿಯನ್ನು ಶರವೇಗದಲ್ಲಿ ತಲುಪಿಸುತ್ತಿವೆ’ ಎಂದು ಹೇಳಿದರು.</p>.<p>‘ಎಲ್ಲಾ ಕ್ಷೇತ್ರಗಳಲ್ಲೂ ಒಳಿತು, ಕೆಡಕು ಇರುತ್ತದೆ. ಹೀಗಾಗಿ ಎಲ್ಲಾ ಪತ್ರಿಕೆಗಳು ಹಾಗೂ ಪತ್ರಕರ್ತರನ್ನು ಒಂದೇ ರೀತಿ ನೋಡುವ ಅಗತ್ಯವಿಲ್ಲ’ ಎಂದರು.</p>.<p>‘ಸಾಮಾನ್ಯ ಜ್ಞಾನ, ಪ್ರಚಲಿತ ವಿದ್ಯಮಾನಗಳ ಬಗ್ಗೆ ಅರಿವು, ಭಾಷೆ ಹಾಗೂ ಕಂಪ್ಯೂಟರ್ ಕೌಶಲ ಇರುವವರಿಗೆ ಮಾಧ್ಯಮ ಕ್ಷೇತ್ರಗಳಲ್ಲಿ ಉದ್ಯೋಗಕ್ಕೆ ಕೊರತೆ ಇಲ್ಲ. ಪತ್ರಿಕೆಗಳನ್ನು ಓದಬೇಕು. ಜೊತೆಗೆ ಸಾಹಿತ್ಯ ಕೃತಿಗಳನ್ನು ಓದಬೇಕು’ ಎಂದು ಸಲಹೆ ನೀಡಿದರು.</p>.<p>ಪತ್ರಕರ್ತ ಕೆ.ಪಿ. ನಾಗರಾಜ್ ಮಾತನಾಡಿದರು. ಪತ್ರಿಕೋದ್ಯಮ ವಿಭಾಗದ ಅಧ್ಯಾಪಕರಾದ ಗೋಪಾಲ್, ಶ್ವೇತಾ ಎಂ. ಹನ್ಸ್, ಕೇಶವಮೂರ್ತಿ, ಎನ್. ನವೀನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>