ಮೈಸೂರು: ಇಲ್ಲಿನ ಜೆ.ಪಿ.ನಗರದ ಬಾಲಗಂಗಾಧರನಾಥಸ್ವಾಮಿ ಉದ್ಯಾನದ ಹಿಂಭಾಗದ ರಸ್ತೆಯಲ್ಲಿ ಬುಧವಾರ ಬೆಳಿಗ್ಗೆ 11 ಗಂಟೆ ಸಮಯದಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹದೇವಮ್ಮ (48) ಎಂಬುವವರ ಕುತ್ತಿಗೆಯಲ್ಲಿದ್ದ 70 ಗ್ರಾಂ ತೂಕದ ಚಿನ್ನದ ಸರವನ್ನು ಬೈಕ್ನಲ್ಲಿ ಬಂದ ಇಬ್ಬರು ಕಿತ್ತುಕೊಂಡು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ವಿದ್ಯಾರಣ್ಯಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.