<p><strong>ಮೈಸೂರು</strong>: ‘ಸಮಾಜಕ್ಕೆ ಜೆಎಸ್ಎಸ್ ಮಹಾವಿದ್ಯಾಪೀಠದ ಕೊಡುಗೆ ಅಪಾರವಾಗಿದೆ’ ಎಂದು ಶಿವಮೊಗ್ಗದ ಪಿಇಎಸ್ ಟ್ರಸ್ಟ್ ಸಿಇಒ ಎಸ್.ವೈ. ಉಮಾದೇವಿ ಹೇಳಿದರು.</p><p>ಇಲ್ಲಿನ ಸರಸ್ವತಿಪುರಂನ ಜೆಎಸ್ಎಸ್ ಮಹಿಳಾ ಕಾಲೇಜಿನ ನವಜ್ಯೋತಿ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಹಿರಿಯ ವಿದ್ಯಾರ್ಥಿನಿಯರ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.</p><p>‘ಜೆಎಸ್ಎಸ್ ಶಿಕ್ಷಣ ಸಂಸ್ಥೆ ಅಕ್ಷರ ಮತ್ತು ಅನ್ನ ದಾಸೋಹದ ಮೂಲಕ ಸಮಾಜವನ್ನು ಮೇಲೆತ್ತುವ ಕೆಲಸ ಮಾಡುತ್ತಿದೆ. ಹೆಣ್ಣು ಮಕ್ಕಳಿಗೆ ವಸತಿನಿಲಯ ಸೌಲಭ್ಯ ಕಲ್ಪಿಸುವ ಜೊತೆಗೆ ವಿದ್ಯಾವಂತರಾಗಲು ಕಾಲೇಜು ಶ್ರಮಿಸುತ್ತಿದೆ. ವಿದ್ಯಾರ್ಥಿನಿಯರು ಗುರುತರ ಸ್ಥಾನ ಹೊಂದಲು ಸಹಕಾರಿಯಾಗಿದೆ’ ಎಂದರು.</p><p>ಅಧ್ಯಕ್ಷತೆ ವಹಿಸಿದ್ದ ಜೆಎಸ್ಎಸ್ ಮಹಾವಿದ್ಯಾಪೀಠದ ಕಾಲೇಜು ಶಿಕ್ಷಣ ವಿಭಾಗದ ನಿರ್ದೇಶಕ ಪ್ರೊ.ಮೊರಬದ ಮಲ್ಲಿಕಾರ್ಜುನ, ‘ರಾಜೇಂದ್ರ ಸ್ವಾಮೀಜಿ ಮಹಿಳಾ ಸಬಲೀಕರಣಕ್ಕೆ ಮಹತ್ತರವಾದ ಕೊಡುಗೆಗಳನ್ನು ನೀಡಿದ್ದಾರೆ. ಮಹಿಳೆಯರು ಶಿಕ್ಷಿತರಾದರೆ ಸಮಾಜವು ಶಿಕ್ಷಿತವಾದಂತೆಯೇ’ ಎಂದು ಹೇಳಿದರು.</p><p>ಮುಖ್ಯ ಅತಿಥಿಯಾಗಿದ್ದ ನಿವೃತ್ತ ಪ್ರಾಧ್ಯಾಪಕಿ ಎಚ್.ಎಂ. ಕಲಾಶ್ರೀ, ವಕೀಲೆ ಸುಮನಾ ಎಂ.ಎನ್., ಕೆಎಎಸ್ ಅಧಿಕಾರಿ ಸುಷ್ಮಾ ಜೆ.ಪಿ., ‘ಪವರ್ ಟಿವಿ’ ನಿರೂಪಕರ ವಿಭಾಗದ ಮುಖ್ಯಸ್ಥೆ ಸಿಂಧೂರ ಗಂಗಾಧರ, ಪ್ರಾಚಾರ್ಯ ರೇಚಣ್ಣ ಮಾತನಾಡಿದರು.</p><p>ಕನ್ನಡ ವಿಭಾಗದ ಮುಖ್ಯಸ್ಥ ಆರ್.ಎಸ್. ಕುಮಾರ್, ಭೌತವಿಜ್ಞಾನ ವಿಭಾಗದ ಮುಖ್ಯಸ್ಥೆ ಸೌಮ್ಯಾ, ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪುಷ್ಪಲತಾ ಜೆ. ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಸಮಾಜಕ್ಕೆ ಜೆಎಸ್ಎಸ್ ಮಹಾವಿದ್ಯಾಪೀಠದ ಕೊಡುಗೆ ಅಪಾರವಾಗಿದೆ’ ಎಂದು ಶಿವಮೊಗ್ಗದ ಪಿಇಎಸ್ ಟ್ರಸ್ಟ್ ಸಿಇಒ ಎಸ್.ವೈ. ಉಮಾದೇವಿ ಹೇಳಿದರು.</p><p>ಇಲ್ಲಿನ ಸರಸ್ವತಿಪುರಂನ ಜೆಎಸ್ಎಸ್ ಮಹಿಳಾ ಕಾಲೇಜಿನ ನವಜ್ಯೋತಿ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಹಿರಿಯ ವಿದ್ಯಾರ್ಥಿನಿಯರ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.</p><p>‘ಜೆಎಸ್ಎಸ್ ಶಿಕ್ಷಣ ಸಂಸ್ಥೆ ಅಕ್ಷರ ಮತ್ತು ಅನ್ನ ದಾಸೋಹದ ಮೂಲಕ ಸಮಾಜವನ್ನು ಮೇಲೆತ್ತುವ ಕೆಲಸ ಮಾಡುತ್ತಿದೆ. ಹೆಣ್ಣು ಮಕ್ಕಳಿಗೆ ವಸತಿನಿಲಯ ಸೌಲಭ್ಯ ಕಲ್ಪಿಸುವ ಜೊತೆಗೆ ವಿದ್ಯಾವಂತರಾಗಲು ಕಾಲೇಜು ಶ್ರಮಿಸುತ್ತಿದೆ. ವಿದ್ಯಾರ್ಥಿನಿಯರು ಗುರುತರ ಸ್ಥಾನ ಹೊಂದಲು ಸಹಕಾರಿಯಾಗಿದೆ’ ಎಂದರು.</p><p>ಅಧ್ಯಕ್ಷತೆ ವಹಿಸಿದ್ದ ಜೆಎಸ್ಎಸ್ ಮಹಾವಿದ್ಯಾಪೀಠದ ಕಾಲೇಜು ಶಿಕ್ಷಣ ವಿಭಾಗದ ನಿರ್ದೇಶಕ ಪ್ರೊ.ಮೊರಬದ ಮಲ್ಲಿಕಾರ್ಜುನ, ‘ರಾಜೇಂದ್ರ ಸ್ವಾಮೀಜಿ ಮಹಿಳಾ ಸಬಲೀಕರಣಕ್ಕೆ ಮಹತ್ತರವಾದ ಕೊಡುಗೆಗಳನ್ನು ನೀಡಿದ್ದಾರೆ. ಮಹಿಳೆಯರು ಶಿಕ್ಷಿತರಾದರೆ ಸಮಾಜವು ಶಿಕ್ಷಿತವಾದಂತೆಯೇ’ ಎಂದು ಹೇಳಿದರು.</p><p>ಮುಖ್ಯ ಅತಿಥಿಯಾಗಿದ್ದ ನಿವೃತ್ತ ಪ್ರಾಧ್ಯಾಪಕಿ ಎಚ್.ಎಂ. ಕಲಾಶ್ರೀ, ವಕೀಲೆ ಸುಮನಾ ಎಂ.ಎನ್., ಕೆಎಎಸ್ ಅಧಿಕಾರಿ ಸುಷ್ಮಾ ಜೆ.ಪಿ., ‘ಪವರ್ ಟಿವಿ’ ನಿರೂಪಕರ ವಿಭಾಗದ ಮುಖ್ಯಸ್ಥೆ ಸಿಂಧೂರ ಗಂಗಾಧರ, ಪ್ರಾಚಾರ್ಯ ರೇಚಣ್ಣ ಮಾತನಾಡಿದರು.</p><p>ಕನ್ನಡ ವಿಭಾಗದ ಮುಖ್ಯಸ್ಥ ಆರ್.ಎಸ್. ಕುಮಾರ್, ಭೌತವಿಜ್ಞಾನ ವಿಭಾಗದ ಮುಖ್ಯಸ್ಥೆ ಸೌಮ್ಯಾ, ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪುಷ್ಪಲತಾ ಜೆ. ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>