<p><strong>ಮೈಸೂರು:</strong> ‘ರಂಗ ಚಟುವಟಿಕೆಗಳು ಮನರಂಜನೆಯ ಜೊತೆಗೆ ಮನೋವಿಕಾಸಕ್ಕೂ ಸಹಕಾರಿಯಾಗಿವೆ’ ಎಂದು ಸಾಹಿತಿ ಡಾ.ಲತಾ ರಾಜಶೇಖರ್ ಹೇಳಿದರು.</p>.<p>ಇಲ್ಲಿನ ಸರಸ್ವತಿಪುರಂನ ಜೆಎಸ್ಎಸ್ ಮಹಿಳಾ ಕಾಲೇಜಿನ ನವಜ್ಯೋತಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ‘ಜೆಎಸ್ಎಸ್ ರಂಗೋತ್ಸವ–2022’ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಸಮೂಹ ಮಾಧ್ಯಮಗಳು ಮಕ್ಕಳ ಮೇಲೆ ಬಹಳ ವೇಗವಾಗಿ ಪ್ರಭಾವ ಬೀರುತ್ತವೆ. ನಾಟಕ, ನೃತ್ಯ, ಸಂಗೀತಗಳು ಮಕ್ಕಳಲ್ಲಿ ಸಕಾರಾತ್ಮಕ ಚಿಂತನೆಗಳನ್ನು ಬೆಳೆಸುತ್ತವೆ. ಅವರಲ್ಲಿ ವೈಚಾರಿಕ ಶಕ್ತಿ ಜಾಗೃತಗೊಳಿಸುತ್ತವೆ’ ಎಂದರು.</p>.<p>ರಂಗಕರ್ಮಿ ಡಾ.ಸುಜಾತಾ ಅಕ್ಕಿ ಮಾತನಾಡಿ, ‘ಮೈಸೂರು ಸೀಮೆಯು ಕನ್ನಡ ಸಂಸ್ಕೃತಿ, ಕಲೆ, ಪರಂಪರೆಗಳಿಗೆ ವಿಶಿಷ್ಟವಾದ ನೆಲೆಯನ್ನು ಹೊಂದಿದೆ. ಉತ್ತರದಿಂದ ಬಂದ ಮಹದೇಶ್ವರರು, ಮಂಟೇಸ್ವಾಮಿ, ಸಿದ್ದಪ್ಪಾಜಿ, ರಾಚಪ್ಪಾಜಿ ಕತ್ತಲೆಯ ರಾಜ್ಯದಲ್ಲಿ ಜ್ಞಾನದ ಬೆಳಕನ್ನು ಪಸರಿಸಿದರು’ ಎಂದು ಸ್ಮರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ರಂಗ ಚಟುವಟಿಕೆಗಳು ಮನರಂಜನೆಯ ಜೊತೆಗೆ ಮನೋವಿಕಾಸಕ್ಕೂ ಸಹಕಾರಿಯಾಗಿವೆ’ ಎಂದು ಸಾಹಿತಿ ಡಾ.ಲತಾ ರಾಜಶೇಖರ್ ಹೇಳಿದರು.</p>.<p>ಇಲ್ಲಿನ ಸರಸ್ವತಿಪುರಂನ ಜೆಎಸ್ಎಸ್ ಮಹಿಳಾ ಕಾಲೇಜಿನ ನವಜ್ಯೋತಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ‘ಜೆಎಸ್ಎಸ್ ರಂಗೋತ್ಸವ–2022’ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಸಮೂಹ ಮಾಧ್ಯಮಗಳು ಮಕ್ಕಳ ಮೇಲೆ ಬಹಳ ವೇಗವಾಗಿ ಪ್ರಭಾವ ಬೀರುತ್ತವೆ. ನಾಟಕ, ನೃತ್ಯ, ಸಂಗೀತಗಳು ಮಕ್ಕಳಲ್ಲಿ ಸಕಾರಾತ್ಮಕ ಚಿಂತನೆಗಳನ್ನು ಬೆಳೆಸುತ್ತವೆ. ಅವರಲ್ಲಿ ವೈಚಾರಿಕ ಶಕ್ತಿ ಜಾಗೃತಗೊಳಿಸುತ್ತವೆ’ ಎಂದರು.</p>.<p>ರಂಗಕರ್ಮಿ ಡಾ.ಸುಜಾತಾ ಅಕ್ಕಿ ಮಾತನಾಡಿ, ‘ಮೈಸೂರು ಸೀಮೆಯು ಕನ್ನಡ ಸಂಸ್ಕೃತಿ, ಕಲೆ, ಪರಂಪರೆಗಳಿಗೆ ವಿಶಿಷ್ಟವಾದ ನೆಲೆಯನ್ನು ಹೊಂದಿದೆ. ಉತ್ತರದಿಂದ ಬಂದ ಮಹದೇಶ್ವರರು, ಮಂಟೇಸ್ವಾಮಿ, ಸಿದ್ದಪ್ಪಾಜಿ, ರಾಚಪ್ಪಾಜಿ ಕತ್ತಲೆಯ ರಾಜ್ಯದಲ್ಲಿ ಜ್ಞಾನದ ಬೆಳಕನ್ನು ಪಸರಿಸಿದರು’ ಎಂದು ಸ್ಮರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>