<p><strong>ಮೈಸೂರು:</strong> ತಾಲ್ಲೂಕಿನ ಉತ್ತನಹಳ್ಳಿ ಗ್ರಾಮದಲ್ಲಿರುವ ಜ್ವಾಲಾಮುಖಿ ತ್ರಿಪುರಸುಂದರಿ ದೇವಿ ದೇವಸ್ಥಾನದಲ್ಲಿ 2025-26ನೇ ಸಾಲಿನ ಜಾತ್ರಾ ಮಹೋತ್ಸವವನ್ನು ಫೆ.1ರಿಂದ 3ರವರೆಗೆ ಹಮ್ಮಿಕೊಳ್ಳಲಾಗಿದೆ. </p><p>ನಿತ್ಯವೂ ಬೆಳಿಗ್ಗೆ ದೇವಿ ಮೂರ್ತಿಗೆ ವಿಶೇಷ ಅಭಿಷೇಕ, ಹೂವಿನ ಅಲಂಕಾರ ನೆರವೇರಲಿದೆ. ಫೆ. 1ರಂದು ಏಕಾದಶವಾರ, ರುದ್ರಾಭಿಷೇಕ, ಸುವರ್ಣಾಲಂಕಾರ ಸಹಸ್ರ ನಾಮಾರ್ಚನೆ ನಿವೇದನೆ, ಮಹಾಮಂಗಳಾರತಿ ರಾಜೋಪಚಾರ, ರಾಷ್ಟ್ರಾಶೀರ್ವಾದ, ತೀರ್ಥಪ್ರಸಾದ ವಿನಿಯೋಗ ನಡೆಯಲಿದೆ. ಮಧ್ಯಾಹ್ನ 12.30ಕ್ಕೆ ಪ್ರಸಾದ ವಿನಿಯೋಗ, ಪ್ರದೋಷಕಾಲದ ಪೂಜೆ, ತ್ರಿಶತಿ ನಾಮಾರ್ಚನೆ ಮಹಾಮಂಗಳಾರತಿ ಜರುಗಲಿದೆ. ರಾತ್ರಿ 8.30ಕ್ಕೆ ಅಮ್ಮನವರ ಕನ್ಯಾಕನ್ನಡಿ ಉತ್ಸವ ಪುಣ್ಯಾಹ ಮಂಟಪೋತ್ಸವ ಜರುಗಲಿದೆ.</p><p>ಫೆ.2ರಂದು ಪ್ರಥಮಾಅಶ್ಲೇಷ ನಕ್ಷತ್ರ ಅಂಗವಾಗಿ ಏಕಾದಶವಾರ, ರುದ್ರಾಭಿಷೇಕ, ಸಹಸ್ರ ನಾಮಾರ್ಚನೆ ವಿಶೇಷ ಪೂಜೆಗಳು, ಕದಲಿ ಅಲಂಕಾರ ನೆರವೇರಲಿದೆ. ಫೆ.3ರಂದು ದ್ವಿತೀಯಾ ಮಖ ನಕ್ಷತ್ರ ಪ್ರಯುಕ್ತ ಏಕಾದಶವಾರ ರುದ್ರಾಭಿಷೇಕ, ಪಂಚೋಪಚಾರ ಪೂಜೆ ಮಹಾಮಂಗಳಾರತಿ ನಡೆಯಲಿದೆ. ಮಧ್ಯಾಹ್ನ 12.30ಕ್ಕೆ ಪ್ರಸಾದ ವಿನಿಯೋಗ ಮಾಡಲಾಗುವುದು ಎಂದು ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರದ ಕಾರ್ಯದರ್ಶಿ ಎಂ.ಜೆ. ರೂಪಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ತಾಲ್ಲೂಕಿನ ಉತ್ತನಹಳ್ಳಿ ಗ್ರಾಮದಲ್ಲಿರುವ ಜ್ವಾಲಾಮುಖಿ ತ್ರಿಪುರಸುಂದರಿ ದೇವಿ ದೇವಸ್ಥಾನದಲ್ಲಿ 2025-26ನೇ ಸಾಲಿನ ಜಾತ್ರಾ ಮಹೋತ್ಸವವನ್ನು ಫೆ.1ರಿಂದ 3ರವರೆಗೆ ಹಮ್ಮಿಕೊಳ್ಳಲಾಗಿದೆ. </p><p>ನಿತ್ಯವೂ ಬೆಳಿಗ್ಗೆ ದೇವಿ ಮೂರ್ತಿಗೆ ವಿಶೇಷ ಅಭಿಷೇಕ, ಹೂವಿನ ಅಲಂಕಾರ ನೆರವೇರಲಿದೆ. ಫೆ. 1ರಂದು ಏಕಾದಶವಾರ, ರುದ್ರಾಭಿಷೇಕ, ಸುವರ್ಣಾಲಂಕಾರ ಸಹಸ್ರ ನಾಮಾರ್ಚನೆ ನಿವೇದನೆ, ಮಹಾಮಂಗಳಾರತಿ ರಾಜೋಪಚಾರ, ರಾಷ್ಟ್ರಾಶೀರ್ವಾದ, ತೀರ್ಥಪ್ರಸಾದ ವಿನಿಯೋಗ ನಡೆಯಲಿದೆ. ಮಧ್ಯಾಹ್ನ 12.30ಕ್ಕೆ ಪ್ರಸಾದ ವಿನಿಯೋಗ, ಪ್ರದೋಷಕಾಲದ ಪೂಜೆ, ತ್ರಿಶತಿ ನಾಮಾರ್ಚನೆ ಮಹಾಮಂಗಳಾರತಿ ಜರುಗಲಿದೆ. ರಾತ್ರಿ 8.30ಕ್ಕೆ ಅಮ್ಮನವರ ಕನ್ಯಾಕನ್ನಡಿ ಉತ್ಸವ ಪುಣ್ಯಾಹ ಮಂಟಪೋತ್ಸವ ಜರುಗಲಿದೆ.</p><p>ಫೆ.2ರಂದು ಪ್ರಥಮಾಅಶ್ಲೇಷ ನಕ್ಷತ್ರ ಅಂಗವಾಗಿ ಏಕಾದಶವಾರ, ರುದ್ರಾಭಿಷೇಕ, ಸಹಸ್ರ ನಾಮಾರ್ಚನೆ ವಿಶೇಷ ಪೂಜೆಗಳು, ಕದಲಿ ಅಲಂಕಾರ ನೆರವೇರಲಿದೆ. ಫೆ.3ರಂದು ದ್ವಿತೀಯಾ ಮಖ ನಕ್ಷತ್ರ ಪ್ರಯುಕ್ತ ಏಕಾದಶವಾರ ರುದ್ರಾಭಿಷೇಕ, ಪಂಚೋಪಚಾರ ಪೂಜೆ ಮಹಾಮಂಗಳಾರತಿ ನಡೆಯಲಿದೆ. ಮಧ್ಯಾಹ್ನ 12.30ಕ್ಕೆ ಪ್ರಸಾದ ವಿನಿಯೋಗ ಮಾಡಲಾಗುವುದು ಎಂದು ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರದ ಕಾರ್ಯದರ್ಶಿ ಎಂ.ಜೆ. ರೂಪಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>