<p><strong>ಮೈಸೂರು:</strong> ‘ಸಮ ಸಮಾಜ ನಿರ್ಮಾಣಕ್ಕೆ ಕೈವಾರ ತಾತಯ್ಯ ಅವರ ಸಂದೇಶಗಳು ಅಗತ್ಯವಾಗಿದ್ದು, ಅವುಗಳನ್ನು ಎಲ್ಲರೂ ಪಾಲಿಸಬೇಕು’ ಎಂದು ಕೃಷ್ಣರಾಜ ಕ್ಷೇತ್ರದ ಶಾಸಕ ಟಿ.ಎಸ್. ಶ್ರೀವತ್ಸ ಹೇಳಿದರು.</p>.<p>ಇಲ್ಲಿನ ಕಿರುರಂಗಮಂದಿರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಯೋಗಿನಾರೇಯಣ ಯತೀಂದ್ರರ ಜಯಂತ್ಯುತ್ಸವ ಸಮಿತಿಯಿಂದ ಭಾನುವಾರ ಆಯೋಜಿಸಿದ್ದ ಯೋಗಿನಾರೇಯಣ ಯತೀಂದ್ರರ (ಕೈವಾರ ತಾತಯ್ಯ) ಜಯಂತ್ಯುತ್ಸವದಲ್ಲಿ ಅವರು ಮಾತನಾಡಿದರು.</p>.<p>‘ತಾತಯ್ಯನವರು ಸಮ ಸಮಾಜಕ್ಕಾಗಿ ಕೈಗೊಂಡ ಕಾರ್ಯಗಳು ಮಾದರಿಯಾಗಿವೆ. ಮಹಾನ್ ವ್ಯಕ್ತಿಗಳನ್ನು<br>ಸ್ಮರಿಸುವ ಜೊತೆಗೆ, ಅವರ ಜೀವನ ಚರಿತ್ರೆಯನ್ನು ಪ್ರತಿಯೊಬ್ಬರೂ ಓದಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>‘ಇಂದಿನ ದಿನಗಳಲ್ಲಿ ಜಾತಿ ಭೇದಭಾವವಿಲ್ಲದೆ ಅತಿ ಹೆಚ್ಚು ಮಕ್ಕಳು ಅರ್ಚಕರ ವೃತ್ತಿ, ಶಾಸ್ತ್ರೀಯ ಸಂಗೀತ, ಭರತನಾಟ್ಯದಂತಹ ಕಲೆಯ ಕಡೆ ಅತಿ ಹೆಚ್ಚು ಒಲವನ್ನು ತೋರುತ್ತಿದ್ದಾರೆ. ಇದಕ್ಕೆ ಪ್ರೋತ್ಸಾಹ ನೀಡುತ್ತಿರುವ ಪೋಷಕರು ಅಭಿನಂದನಾರ್ಹರು’ ಎಂದರು.</p>.<p>ಎಲ್ಲರನ್ನೂ ಕರೆತರಬೇಕು: ‘ಮಹಾನ್ ವ್ಯಕ್ತಿಗಳ ಜಯಂತಿ, ಸ್ಮರಣೆಯ ಕಾರ್ಯಕ್ರಮಕ್ಕೆ ಎಲ್ಲರನ್ನೂ ಕರೆತರಬೇಕು. ಎಲ್ಲ ಸಮಜದವರೂ ಭಾಗವಹಿಸಬೇಕು. ಇಂತಹ ದಾರ್ಶನಿಕರ ಕುರಿತು ಎಲ್ಲರೂ ತಿಳಿದುಕೊಳ್ಳಬೇಕು. ಆಗ ಮಾತ್ರ ಸಮ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ’ ಎಂದು ಅಭಿಪ್ರಾಯಪಟ್ಟರು.</p>.<p>ವಿಧಾನಪರಿಷತ್ ಸದಸ್ಯ ಸಿ.ಎನ್. ಮಂಜೇಗೌಡ ಮಾತನಾಡಿ, ‘ಜೀವನದಲ್ಲಿ ಶಿಕ್ಷಣಕ್ಕಿಂತ ದೊಡ್ಡದು ಯಾವುದೂ ಇಲ್ಲ. ಮಕ್ಕಳಿಗೆ ಶಿಕ್ಷಣ ನೀಡಿ ಮಹಾನ್ ವ್ಯಕ್ತಿಗಳನ್ನಾಗಿ ಮಾಡಬೇಕು. ದಾರ್ಶನಿಕರ ಜಯಂತಿಗಳಿಗೆ ಮಕ್ಕಳನ್ನು ಕರೆದುಕೊಂಡು ಬರಬೇಕು’ ಎಂದರು.</p>.<p>ಪ್ರೊ.ಎಚ್.ಎಸ್. ನರಸಿಂಹಯ್ಯ ಮಾತನಾಡಿ, ‘ಕೈವಾರ ತಾತಯ್ಯನವರು 18ನೇ ಶತಮಾನದವರು, ಬಲಿಜ ಜನಾಂಗಕ್ಕೆ ಸೇರಿದವರು. ಇವರ ಮೂಲ ಹೆಸರು ನಾರಾಯಣ. ವಿಜಯನಗರ ಸಾಮ್ರಾಜ್ಯದಲ್ಲಿ ವಾಸವಿದ್ದರು. ಆ ಸಾಮ್ರಾಜ್ಯದ ಪತನದ ನಂತರ ವಲಸೆ ಹೊರಟರು ಮುಂದೆ ಬಳೆ ಮಾರುತ್ತಾ ಜೀವನ ನಡೆಸುತ್ತಿದ್ದರು’ ಎಂದು ತಿಳಿಸಿದರು.</p>.<p>ಶಿಕ್ಷಣ ಕೊಡಿಸಿ: ‘ಬಲಿಜ ಸಮುದಾಯದವರು ಮಕ್ಕಳಿಗೆ ಶಿಕ್ಷಣ ಕೊಡಿಸಲು ಆದ್ಯತೆ ನೀಡಬೇಕು’ ಎಂದು ಸಲಹೆ ನೀಡಿದರು.</p>.<p>ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಎಂ.ಡಿ. ಸುದರ್ಶನ್, ಕುವೆಂಪುನಗರದ ಸರ್ಕಾರಿ ಪಿಯು ಕಾಲೇಜಿನ ಪ್ರಾಂಶುಪಾಲ ಗುಬ್ಬಿಗೂಡು ರಮೇಶ್, ಕೆಪಿಸಿಸಿ ವಕ್ತಾರ ಎಚ್.ಎ. ವೆಂಕಟೇಶ್, ಮುಖಂಡರಾದ ಶ್ರೀನಾಥ್ ಬಾಬು, ಮೀನಾ ತೂಗುದೀಪ್ ಶ್ರೀನಿವಾಸ್, ವಿಜಯ ಸಂಪತ್ಕುಮಾರ್, ಕೆ.ಸಿ. ಪ್ರಕಾಶ್, ಗೋಪಾಲಕೃಷ್ಣ, ಆರ್.ಎನ್. ವಿಶ್ವನಾಥ್ ಉಪಸ್ಥಿತರಿದ್ದರು. ಇದಕ್ಕೂ ಮುನ್ನ, ಕೈವಾರ ತಾತಯ್ಯ ಭಾವಚಿತ್ರದ ಮೆರವಣಿಗೆ ನಡೆಯಿತು. </p>.<div><blockquote>ತಾತಯ್ಯ ಅವರ ಆದರ್ಶದ ಹಾದಿಯಲ್ಲಿ ನಾವು ನಡೆಯಬೇಕು. ಇಂಥವರ ಬಗ್ಗೆ ತಿಳಿದಾಗ ನಮ್ಮ ಲೋಪ–ದೋಷಗಳು ಕಡಿಮೆಯಾಗುತ್ತವೆ</blockquote><span class="attribution">ಸಿ.ಎನ್. ಮಂಜೇಗೌಡವಿಧಾನಪರಿಷತ್ ಸದಸ್ಯ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ಸಮ ಸಮಾಜ ನಿರ್ಮಾಣಕ್ಕೆ ಕೈವಾರ ತಾತಯ್ಯ ಅವರ ಸಂದೇಶಗಳು ಅಗತ್ಯವಾಗಿದ್ದು, ಅವುಗಳನ್ನು ಎಲ್ಲರೂ ಪಾಲಿಸಬೇಕು’ ಎಂದು ಕೃಷ್ಣರಾಜ ಕ್ಷೇತ್ರದ ಶಾಸಕ ಟಿ.ಎಸ್. ಶ್ರೀವತ್ಸ ಹೇಳಿದರು.</p>.<p>ಇಲ್ಲಿನ ಕಿರುರಂಗಮಂದಿರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಯೋಗಿನಾರೇಯಣ ಯತೀಂದ್ರರ ಜಯಂತ್ಯುತ್ಸವ ಸಮಿತಿಯಿಂದ ಭಾನುವಾರ ಆಯೋಜಿಸಿದ್ದ ಯೋಗಿನಾರೇಯಣ ಯತೀಂದ್ರರ (ಕೈವಾರ ತಾತಯ್ಯ) ಜಯಂತ್ಯುತ್ಸವದಲ್ಲಿ ಅವರು ಮಾತನಾಡಿದರು.</p>.<p>‘ತಾತಯ್ಯನವರು ಸಮ ಸಮಾಜಕ್ಕಾಗಿ ಕೈಗೊಂಡ ಕಾರ್ಯಗಳು ಮಾದರಿಯಾಗಿವೆ. ಮಹಾನ್ ವ್ಯಕ್ತಿಗಳನ್ನು<br>ಸ್ಮರಿಸುವ ಜೊತೆಗೆ, ಅವರ ಜೀವನ ಚರಿತ್ರೆಯನ್ನು ಪ್ರತಿಯೊಬ್ಬರೂ ಓದಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>‘ಇಂದಿನ ದಿನಗಳಲ್ಲಿ ಜಾತಿ ಭೇದಭಾವವಿಲ್ಲದೆ ಅತಿ ಹೆಚ್ಚು ಮಕ್ಕಳು ಅರ್ಚಕರ ವೃತ್ತಿ, ಶಾಸ್ತ್ರೀಯ ಸಂಗೀತ, ಭರತನಾಟ್ಯದಂತಹ ಕಲೆಯ ಕಡೆ ಅತಿ ಹೆಚ್ಚು ಒಲವನ್ನು ತೋರುತ್ತಿದ್ದಾರೆ. ಇದಕ್ಕೆ ಪ್ರೋತ್ಸಾಹ ನೀಡುತ್ತಿರುವ ಪೋಷಕರು ಅಭಿನಂದನಾರ್ಹರು’ ಎಂದರು.</p>.<p>ಎಲ್ಲರನ್ನೂ ಕರೆತರಬೇಕು: ‘ಮಹಾನ್ ವ್ಯಕ್ತಿಗಳ ಜಯಂತಿ, ಸ್ಮರಣೆಯ ಕಾರ್ಯಕ್ರಮಕ್ಕೆ ಎಲ್ಲರನ್ನೂ ಕರೆತರಬೇಕು. ಎಲ್ಲ ಸಮಜದವರೂ ಭಾಗವಹಿಸಬೇಕು. ಇಂತಹ ದಾರ್ಶನಿಕರ ಕುರಿತು ಎಲ್ಲರೂ ತಿಳಿದುಕೊಳ್ಳಬೇಕು. ಆಗ ಮಾತ್ರ ಸಮ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ’ ಎಂದು ಅಭಿಪ್ರಾಯಪಟ್ಟರು.</p>.<p>ವಿಧಾನಪರಿಷತ್ ಸದಸ್ಯ ಸಿ.ಎನ್. ಮಂಜೇಗೌಡ ಮಾತನಾಡಿ, ‘ಜೀವನದಲ್ಲಿ ಶಿಕ್ಷಣಕ್ಕಿಂತ ದೊಡ್ಡದು ಯಾವುದೂ ಇಲ್ಲ. ಮಕ್ಕಳಿಗೆ ಶಿಕ್ಷಣ ನೀಡಿ ಮಹಾನ್ ವ್ಯಕ್ತಿಗಳನ್ನಾಗಿ ಮಾಡಬೇಕು. ದಾರ್ಶನಿಕರ ಜಯಂತಿಗಳಿಗೆ ಮಕ್ಕಳನ್ನು ಕರೆದುಕೊಂಡು ಬರಬೇಕು’ ಎಂದರು.</p>.<p>ಪ್ರೊ.ಎಚ್.ಎಸ್. ನರಸಿಂಹಯ್ಯ ಮಾತನಾಡಿ, ‘ಕೈವಾರ ತಾತಯ್ಯನವರು 18ನೇ ಶತಮಾನದವರು, ಬಲಿಜ ಜನಾಂಗಕ್ಕೆ ಸೇರಿದವರು. ಇವರ ಮೂಲ ಹೆಸರು ನಾರಾಯಣ. ವಿಜಯನಗರ ಸಾಮ್ರಾಜ್ಯದಲ್ಲಿ ವಾಸವಿದ್ದರು. ಆ ಸಾಮ್ರಾಜ್ಯದ ಪತನದ ನಂತರ ವಲಸೆ ಹೊರಟರು ಮುಂದೆ ಬಳೆ ಮಾರುತ್ತಾ ಜೀವನ ನಡೆಸುತ್ತಿದ್ದರು’ ಎಂದು ತಿಳಿಸಿದರು.</p>.<p>ಶಿಕ್ಷಣ ಕೊಡಿಸಿ: ‘ಬಲಿಜ ಸಮುದಾಯದವರು ಮಕ್ಕಳಿಗೆ ಶಿಕ್ಷಣ ಕೊಡಿಸಲು ಆದ್ಯತೆ ನೀಡಬೇಕು’ ಎಂದು ಸಲಹೆ ನೀಡಿದರು.</p>.<p>ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಎಂ.ಡಿ. ಸುದರ್ಶನ್, ಕುವೆಂಪುನಗರದ ಸರ್ಕಾರಿ ಪಿಯು ಕಾಲೇಜಿನ ಪ್ರಾಂಶುಪಾಲ ಗುಬ್ಬಿಗೂಡು ರಮೇಶ್, ಕೆಪಿಸಿಸಿ ವಕ್ತಾರ ಎಚ್.ಎ. ವೆಂಕಟೇಶ್, ಮುಖಂಡರಾದ ಶ್ರೀನಾಥ್ ಬಾಬು, ಮೀನಾ ತೂಗುದೀಪ್ ಶ್ರೀನಿವಾಸ್, ವಿಜಯ ಸಂಪತ್ಕುಮಾರ್, ಕೆ.ಸಿ. ಪ್ರಕಾಶ್, ಗೋಪಾಲಕೃಷ್ಣ, ಆರ್.ಎನ್. ವಿಶ್ವನಾಥ್ ಉಪಸ್ಥಿತರಿದ್ದರು. ಇದಕ್ಕೂ ಮುನ್ನ, ಕೈವಾರ ತಾತಯ್ಯ ಭಾವಚಿತ್ರದ ಮೆರವಣಿಗೆ ನಡೆಯಿತು. </p>.<div><blockquote>ತಾತಯ್ಯ ಅವರ ಆದರ್ಶದ ಹಾದಿಯಲ್ಲಿ ನಾವು ನಡೆಯಬೇಕು. ಇಂಥವರ ಬಗ್ಗೆ ತಿಳಿದಾಗ ನಮ್ಮ ಲೋಪ–ದೋಷಗಳು ಕಡಿಮೆಯಾಗುತ್ತವೆ</blockquote><span class="attribution">ಸಿ.ಎನ್. ಮಂಜೇಗೌಡವಿಧಾನಪರಿಷತ್ ಸದಸ್ಯ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>