‘ಮೈಸೂರಿಗೂ ನಮ್ಮ ಕುಟುಂಬಕ್ಕೂ ಅವಿನಾಭಾವ ಸಂಬಂಧವಿದೆ. ಅಪ್ಪಾಜಿಗೆ ಮೈಸೂರು ನಗರವಂದರೆ ಅಚ್ಚುಮೆಚ್ಚು. ಇಲ್ಲಿನ ಕಾಫಿ, ಬಿರಿಯಾನಿ ಇಷ್ಟ. ವಾತಾವರಣವೂ ಚೆನ್ನಾಗಿದೆ. ಎಲ್ಲರೂ ಆರಾಮವಾಗಿ ಜೀವನ ನಡೆಸಲು ಸಾಧ್ಯವಿದೆ. ತಂದೆ ಪದ್ಮವಿಭೂಷಣ ಪಡೆದಾಗ ಇಲ್ಲಿ ಅಭಿನಂದನೆ ಸ್ವೀಕರಿಸಿದ್ದರು. ಜೇನಿನ ಹೊಳೆಯೋ, ಹಾಲಿನ ಮಳೆಯೋ ಗೀತೆಯನ್ನು ಅವರು ಹಾಡಿದ್ದರು. ಅದೆಲ್ಲವೂ ನೆನಪಾಗುತ್ತಿದೆ’ ಎಂದು ನೆನೆದರು.