<p><strong>ಮೈಸೂರು</strong>: ಇಲ್ಲಿನ ಪ್ರಾಕೃತಿಕ ಪ್ರಾದೇಶಿಕ ವಸ್ತುಸಂಗ್ರಹಾಲಯ (ಆರ್ಎಂಎನ್ಎಚ್)ದಲ್ಲಿ ಮಂಗಳವಾರ ನಡೆದ ಸಂಸ್ಥಾಪನಾ ದಿನಾಚರಣೆಯ ಆಹ್ವಾನಪತ್ರಿಕೆಯಲ್ಲಿ ಕನ್ನಡ ಬಳಸದ ಹಾಗೂ ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಮಾತ್ರವೇ ಮುದ್ರಿಸಿದ ಬಗ್ಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಚಾಟಿ ಬೀಸಿದೆ. ಸ್ಪಷ್ಟೀಕರಣವನ್ನೂ ಕೇಳಿದೆ.</p>.<p>ಈ ಬಗ್ಗೆ ಪತ್ರ ಬರೆದಿರುವ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ, ‘ರಾಜ್ಯದಲ್ಲಿ ತ್ರಿಭಾಷಾ ಸೂತ್ರ ಜಾರಿಯಲ್ಲಿದ್ದು, ಕೇಂದ್ರ ಸ್ವಾಮ್ಯದ ಯಾವುದೇ ಸಂಸ್ಥೆಗಳು ಕನ್ನಡಕ್ಕೆ ಮೊದಲ ಆದ್ಯತೆ ಕೊಡುವುದು ಕಡ್ಡಾಯವಾಗಿದೆ. ಸಂಸ್ಥೆಯು ಮುದ್ರಿಸಿರುವ ಆಹ್ವಾನಪತ್ರಿಕೆ ಗಮನಿಸಿದರೆ ಕನ್ನಡದ ಮೇಲಿರುವ ತಾತ್ಸಾರವು ರುಜುವಾತಾಗಿದೆ’ ಎಂದು ತಿಳಿಸಿದ್ದಾರೆ.</p>.<p>‘ಈ ರೀತಿಯ ಕನ್ನಡ ವಿರೋಧಿ ಧೋರಣೆಗೆ ಎಂಬ ಬಗ್ಗೆ ಸ್ಪಷ್ಟನೆ ಕೊಡಬೇಕು. ಮುಂದೆ ಇಂತಹ ಅಚಾತುರ್ಯಗಳಿಗೆ ಅವಕಾಶ ಕೊಡದೇ ಕನ್ನಡಕ್ಕೆ ಮೊದಲ ಆದ್ಯತೆ ಕೊಡಬೇಕು’ ಎಂದು ಸೂಚಿಸಿದ್ದಾರೆ.</p>.<p>ಆರ್ಎಂಎನ್ಎಚ್ ಆಹ್ವಾನಪತ್ರಿಕೆಯಲ್ಲಿ ತ್ರಿಭಾಷಾ ಸೂತ್ರ ಪಾಲನೆಯಾಗದ ಬಗ್ಗೆ ಕನ್ನಡ ಹೋರಾಟಗಾರ ಅರವಿಂದ ಶರ್ಮ ಪ್ರಾಧಿಕಾರಕ್ಕೆ ದೂರರ್ಜಿ ಸಲ್ಲಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ಇಲ್ಲಿನ ಪ್ರಾಕೃತಿಕ ಪ್ರಾದೇಶಿಕ ವಸ್ತುಸಂಗ್ರಹಾಲಯ (ಆರ್ಎಂಎನ್ಎಚ್)ದಲ್ಲಿ ಮಂಗಳವಾರ ನಡೆದ ಸಂಸ್ಥಾಪನಾ ದಿನಾಚರಣೆಯ ಆಹ್ವಾನಪತ್ರಿಕೆಯಲ್ಲಿ ಕನ್ನಡ ಬಳಸದ ಹಾಗೂ ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಮಾತ್ರವೇ ಮುದ್ರಿಸಿದ ಬಗ್ಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಚಾಟಿ ಬೀಸಿದೆ. ಸ್ಪಷ್ಟೀಕರಣವನ್ನೂ ಕೇಳಿದೆ.</p>.<p>ಈ ಬಗ್ಗೆ ಪತ್ರ ಬರೆದಿರುವ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ, ‘ರಾಜ್ಯದಲ್ಲಿ ತ್ರಿಭಾಷಾ ಸೂತ್ರ ಜಾರಿಯಲ್ಲಿದ್ದು, ಕೇಂದ್ರ ಸ್ವಾಮ್ಯದ ಯಾವುದೇ ಸಂಸ್ಥೆಗಳು ಕನ್ನಡಕ್ಕೆ ಮೊದಲ ಆದ್ಯತೆ ಕೊಡುವುದು ಕಡ್ಡಾಯವಾಗಿದೆ. ಸಂಸ್ಥೆಯು ಮುದ್ರಿಸಿರುವ ಆಹ್ವಾನಪತ್ರಿಕೆ ಗಮನಿಸಿದರೆ ಕನ್ನಡದ ಮೇಲಿರುವ ತಾತ್ಸಾರವು ರುಜುವಾತಾಗಿದೆ’ ಎಂದು ತಿಳಿಸಿದ್ದಾರೆ.</p>.<p>‘ಈ ರೀತಿಯ ಕನ್ನಡ ವಿರೋಧಿ ಧೋರಣೆಗೆ ಎಂಬ ಬಗ್ಗೆ ಸ್ಪಷ್ಟನೆ ಕೊಡಬೇಕು. ಮುಂದೆ ಇಂತಹ ಅಚಾತುರ್ಯಗಳಿಗೆ ಅವಕಾಶ ಕೊಡದೇ ಕನ್ನಡಕ್ಕೆ ಮೊದಲ ಆದ್ಯತೆ ಕೊಡಬೇಕು’ ಎಂದು ಸೂಚಿಸಿದ್ದಾರೆ.</p>.<p>ಆರ್ಎಂಎನ್ಎಚ್ ಆಹ್ವಾನಪತ್ರಿಕೆಯಲ್ಲಿ ತ್ರಿಭಾಷಾ ಸೂತ್ರ ಪಾಲನೆಯಾಗದ ಬಗ್ಗೆ ಕನ್ನಡ ಹೋರಾಟಗಾರ ಅರವಿಂದ ಶರ್ಮ ಪ್ರಾಧಿಕಾರಕ್ಕೆ ದೂರರ್ಜಿ ಸಲ್ಲಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>