<p><strong>ಮೈಸೂರು:</strong> ‘ಕನ್ನಡ ಭಾಷೆ ಉಳಿವಿನಲ್ಲಿ ರಂಗಭೂಮಿ, ಸಿನಿಮಾ ಕೊಡುಗೆ ದೊಡ್ಡದು. ಕಲಾವಿದರು ಭಾಷೆಯ ರೂವಾರಿಗಳು’ ಎಂದು ರಂಗಕರ್ಮಿ ಮಂಡ್ಯ ರಮೇಶ್ ಅಭಿಪ್ರಾಯಪಟ್ಟರು. </p>.<p>ನಗರದ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದಲ್ಲಿ ಬುಧವಾರ ನಡೆದ ಕರ್ನಾಟಕ ರಾಜ್ಯೋತ್ಸವ ಉದ್ಘಾಟಿಸಿ ಮಾತನಾಡಿದರು. </p>.<p>‘ಎಲ್ಲ ಭಾಷೆಗಳನ್ನೂ ಕಲಿಯಬೇಕು. ಆದರೆ, ಕನ್ನಡದಲ್ಲಿ ಬದುಕಬೇಕು. ಎಲ್ಲ ಆಹ್ವಾನ ಪತ್ರಿಕೆಗಳೂ ಕನ್ನಡಮಯ ಆಗಬೇಕು. ಆಡಳಿತದಲ್ಲೂ ಕನ್ನಡ ಕಡ್ಡಾಯಗೊಳಿಸಿ, ಅನುಷ್ಠಾನಗೊಳಿಸಬೇಕು. ಆದರೆ, ಇದು ಘೋಷಣೆಯಾಗಿಯೇ ಉಳಿದಿದೆ’ ಎಂದರು. </p>.<p>‘ಮಕ್ಕಳಿಗೆ ಕನ್ನಡ ನೆಲದ ಸೊಗಡು ಕಲಿಸಬೇಕು. ಅದಕ್ಕಾಗಿ ಕಲಾ ಪ್ರಕಾರವನ್ನು ಕಲಿಯಲು ಪ್ರೋತ್ಸಾಹ ನೀಡಬೇಕು. ಪರಿಪೂರ್ಣ ವ್ಯಕ್ತಿತ್ವವನ್ನು ರೂಪಿಸುವ ರಂಗಭೂಮಿಗೆ ಸೇರಿಸಬೇಕು. ಕನ್ನಡ ಉಳಿವಿಗೆ ಶ್ರಮಿಸಿದ ಸಾಧಕರನ್ನು ಎಡ–ಬಲಪಂಥ, ಪೂರ್ವಾಗ್ರಹದಿಂದ ನೋಡದೇ ಆಯ್ಕೆ ಮಾಡಿ ಗೌರವಿಸಬೇಕು’ ಎಂದು ಹೇಳಿದರು. </p>.<p>ಭರತನಾಟ್ಯ ಕಲಾವಿದೆ ವಿದುಷಿ ವಸುಂಧರಾ ದೊರೆಸ್ವಾಮಿ, ಚಲನಚಿತ್ರ ನಿರ್ದೇಶಕ ಬಿ.ಸುರೇಶ್, ವಿದುಷಿ ಸುಕನ್ಯಾ ಪ್ರಭಾಕರ್, ಜಾನಪದ ಗಾಯಕ ರಾಜಪ್ಪ ಕಿರಗಸೂರು ಅವರನ್ನು ಸನ್ಮಾನಿಸಲಾಯಿತು.</p>.<p>ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ವಿ.ಎನ್.ಮಲ್ಲಿಕಾರ್ಜುನಸ್ವಾಮಿ, ಕುಲಪತಿ ಪ್ರೊ.ನಾಗೇಶ್ ವಿ.ಬೆಟ್ಟಕೋಟೆ, ಕುಲಸಚಿವ ಪ್ರೊ.ಎಂ.ಜಿ.ಮಂಜುನಾಥ ಪಾಲ್ಗೊಂಡಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ಕನ್ನಡ ಭಾಷೆ ಉಳಿವಿನಲ್ಲಿ ರಂಗಭೂಮಿ, ಸಿನಿಮಾ ಕೊಡುಗೆ ದೊಡ್ಡದು. ಕಲಾವಿದರು ಭಾಷೆಯ ರೂವಾರಿಗಳು’ ಎಂದು ರಂಗಕರ್ಮಿ ಮಂಡ್ಯ ರಮೇಶ್ ಅಭಿಪ್ರಾಯಪಟ್ಟರು. </p>.<p>ನಗರದ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದಲ್ಲಿ ಬುಧವಾರ ನಡೆದ ಕರ್ನಾಟಕ ರಾಜ್ಯೋತ್ಸವ ಉದ್ಘಾಟಿಸಿ ಮಾತನಾಡಿದರು. </p>.<p>‘ಎಲ್ಲ ಭಾಷೆಗಳನ್ನೂ ಕಲಿಯಬೇಕು. ಆದರೆ, ಕನ್ನಡದಲ್ಲಿ ಬದುಕಬೇಕು. ಎಲ್ಲ ಆಹ್ವಾನ ಪತ್ರಿಕೆಗಳೂ ಕನ್ನಡಮಯ ಆಗಬೇಕು. ಆಡಳಿತದಲ್ಲೂ ಕನ್ನಡ ಕಡ್ಡಾಯಗೊಳಿಸಿ, ಅನುಷ್ಠಾನಗೊಳಿಸಬೇಕು. ಆದರೆ, ಇದು ಘೋಷಣೆಯಾಗಿಯೇ ಉಳಿದಿದೆ’ ಎಂದರು. </p>.<p>‘ಮಕ್ಕಳಿಗೆ ಕನ್ನಡ ನೆಲದ ಸೊಗಡು ಕಲಿಸಬೇಕು. ಅದಕ್ಕಾಗಿ ಕಲಾ ಪ್ರಕಾರವನ್ನು ಕಲಿಯಲು ಪ್ರೋತ್ಸಾಹ ನೀಡಬೇಕು. ಪರಿಪೂರ್ಣ ವ್ಯಕ್ತಿತ್ವವನ್ನು ರೂಪಿಸುವ ರಂಗಭೂಮಿಗೆ ಸೇರಿಸಬೇಕು. ಕನ್ನಡ ಉಳಿವಿಗೆ ಶ್ರಮಿಸಿದ ಸಾಧಕರನ್ನು ಎಡ–ಬಲಪಂಥ, ಪೂರ್ವಾಗ್ರಹದಿಂದ ನೋಡದೇ ಆಯ್ಕೆ ಮಾಡಿ ಗೌರವಿಸಬೇಕು’ ಎಂದು ಹೇಳಿದರು. </p>.<p>ಭರತನಾಟ್ಯ ಕಲಾವಿದೆ ವಿದುಷಿ ವಸುಂಧರಾ ದೊರೆಸ್ವಾಮಿ, ಚಲನಚಿತ್ರ ನಿರ್ದೇಶಕ ಬಿ.ಸುರೇಶ್, ವಿದುಷಿ ಸುಕನ್ಯಾ ಪ್ರಭಾಕರ್, ಜಾನಪದ ಗಾಯಕ ರಾಜಪ್ಪ ಕಿರಗಸೂರು ಅವರನ್ನು ಸನ್ಮಾನಿಸಲಾಯಿತು.</p>.<p>ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ವಿ.ಎನ್.ಮಲ್ಲಿಕಾರ್ಜುನಸ್ವಾಮಿ, ಕುಲಪತಿ ಪ್ರೊ.ನಾಗೇಶ್ ವಿ.ಬೆಟ್ಟಕೋಟೆ, ಕುಲಸಚಿವ ಪ್ರೊ.ಎಂ.ಜಿ.ಮಂಜುನಾಥ ಪಾಲ್ಗೊಂಡಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>