<p><strong>ಕೆ.ಆರ್.ನಗರ:</strong> ತಾಲ್ಲೂಕಿನ ಕಪ್ಪಡಿ ಕ್ಷೇತ್ರದಲ್ಲಿ ಮಹಾ ಶಿವರಾತ್ರಿಯಿಂದ ಪ್ರಾರಂಭವಾಗಿದ್ದ ಜಾತ್ರೋತ್ಸವವು 26 ದಿನಗಳ ನಂತರ ಗುರುವಾರ ನಡೆದ ಮಹಾ ಮಾದಲಿ ಸೇವೆಯೊಂದಿಗೆ ಸಂಪನ್ನಗೊಂಡಿತು.</p>.<p>ಕಾವೇರಿ ನದಿ ದಂಡೆಯ ಹಸಿರು ತೋಪಿನಲ್ಲಿ ಇರುವ ಈ ಕಪ್ಪಡಿ ಕ್ಷೇತ್ರಕ್ಕೆ ನೂರಾರು ವರ್ಷಗಳ ಇತಿಹಾಸವಿದೆ. ರಾಚಪ್ಪಾಜಿ, ಚನ್ನಾಜಮ್ಮ ಅವರ ಗದ್ದಿಗೆ, ಸಿದ್ದಪ್ಪಾಜಿ ದೇವಸ್ಥಾನ, ಉರಿ ಗದ್ದಿಗೆ, ಮಂಟೇಸ್ವಾಮಿ ಬಸವಣ್ಣ ಇದೆ. ನೀಲಗಾರರ ಸಂಪ್ರದಾಯದಂತೆ ಭಕ್ತರಿಂದ ಇಲ್ಲಿ ಗದ್ದಿಗೆ, ಕಂಡಾಯ ಪೂಜೆ ನಡೆಯುತ್ತದೆ. ಕ್ಷೇತ್ರದಲ್ಲಿ ದಾಸೋಹ ಭವನ ಇದ್ದು, ಜಾತ್ರೋತ್ಸವ ಸಂದರ್ಭದಲ್ಲಿ ನಿತ್ಯ ಬೆಳಿಗ್ಗೆ ತಿಂಡಿ, ಮಧ್ಯಾಹ್ನ, ಸಂಜೆ ಊಟದ ವ್ಯವಸ್ಥೆ ಕಲ್ಪಿಸಲಾಗುತ್ತದೆ.</p>.<p>ಪ್ರತಿ ವರ್ಷ ಜಾತ್ರೋತ್ಸವದ ಕೊನೆಯ ದಿನ ದೂರದ ಊರುಗಳಿಂದ ಸಾಕಷ್ಟು ಸಂಖ್ಯೆಯಲ್ಲಿ ಲಗ್ಗೆ ಇಡುವ ಭಕ್ತರು, ಗುರುವಾರವೂ ಕುಟುಂಬ ಸದಸ್ಯರು, ಸ್ನೇಹಿತರೊಂದಿಗೆ ಪಾಲ್ಗೊಂಡಿದ್ದರು. ದೇವರ ದರ್ಶನ ಪಡೆದ ಭಕ್ತರು ಮಾಂಸಾಹಾರ ಮತ್ತು ಸಸ್ಯಾಹಾರ ಅಡುಗೆ ತಯಾರಿಸಿಕೊಂಡು ಊಟ ಸವಿದರು. ಮಹಾ ಮಾದಲಿ ಪ್ರಸಾದ ಖರೀದಿಸಿ ತಮ್ಮ ಊರುಗಳಿಗೆ ತೆರಳಿದರು.</p>.<p>ಮಾ.13ರಂದು ನಡೆಯುವ ಗದ್ದಿಗೆ ಮಹಾಭಿಷೇಕ ನಂತರ ಮಠಾಧಿಪತಿ ಶ್ರೀಕಂಠ ಸಿದ್ದಲಿಂಗ ರಾಜೇ ಅರಸ್ ಅವರು ಸಂಜೆ ಕಪ್ಪಡಿ ಕ್ಷೇತ್ರದಿಂದ ಹೊರಡುವ ವಾಡಿಕೆ ಇದೆ.</p>.<div><blockquote> ದೇವರ ಹೆಸರಿನಲ್ಲಿ ಪ್ರಾಣಿಬಲಿ ಕೊಡುವುದು ಅನಾಗರಿಕ ಅಂಧ ಶ್ರದ್ಧೆ. ದೇವಾಲಯಗಳಲ್ಲಿ ಅಹಿಂಸಾತ್ಮಕ ಸಾತ್ವಿಕ ಪೂಜೆ ಸಲ್ಲಿಕೆಯಾಗಬೇಕು. </blockquote><span class="attribution">ದಯಾನಂದ ಸ್ವಾಮೀಜಿ ಅಧ್ಯಕ್ಷ ಪಶು-ಪ್ರಾಣಿ ಬಲಿ ನಿರ್ಮೂಲನ ಮಹಾ ಸಂಘ</span></div>.<div><blockquote> ಕಪ್ಪಡಿ ರಾಚಪ್ಪಾಜಿ ಸಿದ್ದಪ್ಪಾಜಿ ನಮ್ಮ ಮನೆಯ ದೇವರು. 50 ವರ್ಷಗಳಿಂದ ಬರುತ್ತಿದ್ದೇನೆ. ಪ್ರತಿ ವರ್ಷ ಬಂದು ಪೂಜೆ ಸಲ್ಲಿಸಿ ಹೋದರೆ ಮನಸ್ಸಿಗೆ ಸಮಾಧಾನವಾಗುತ್ತದೆ </blockquote><span class="attribution">ಮಹದೇವಯ್ಯ ಕುರಬೂರು</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ.ಆರ್.ನಗರ:</strong> ತಾಲ್ಲೂಕಿನ ಕಪ್ಪಡಿ ಕ್ಷೇತ್ರದಲ್ಲಿ ಮಹಾ ಶಿವರಾತ್ರಿಯಿಂದ ಪ್ರಾರಂಭವಾಗಿದ್ದ ಜಾತ್ರೋತ್ಸವವು 26 ದಿನಗಳ ನಂತರ ಗುರುವಾರ ನಡೆದ ಮಹಾ ಮಾದಲಿ ಸೇವೆಯೊಂದಿಗೆ ಸಂಪನ್ನಗೊಂಡಿತು.</p>.<p>ಕಾವೇರಿ ನದಿ ದಂಡೆಯ ಹಸಿರು ತೋಪಿನಲ್ಲಿ ಇರುವ ಈ ಕಪ್ಪಡಿ ಕ್ಷೇತ್ರಕ್ಕೆ ನೂರಾರು ವರ್ಷಗಳ ಇತಿಹಾಸವಿದೆ. ರಾಚಪ್ಪಾಜಿ, ಚನ್ನಾಜಮ್ಮ ಅವರ ಗದ್ದಿಗೆ, ಸಿದ್ದಪ್ಪಾಜಿ ದೇವಸ್ಥಾನ, ಉರಿ ಗದ್ದಿಗೆ, ಮಂಟೇಸ್ವಾಮಿ ಬಸವಣ್ಣ ಇದೆ. ನೀಲಗಾರರ ಸಂಪ್ರದಾಯದಂತೆ ಭಕ್ತರಿಂದ ಇಲ್ಲಿ ಗದ್ದಿಗೆ, ಕಂಡಾಯ ಪೂಜೆ ನಡೆಯುತ್ತದೆ. ಕ್ಷೇತ್ರದಲ್ಲಿ ದಾಸೋಹ ಭವನ ಇದ್ದು, ಜಾತ್ರೋತ್ಸವ ಸಂದರ್ಭದಲ್ಲಿ ನಿತ್ಯ ಬೆಳಿಗ್ಗೆ ತಿಂಡಿ, ಮಧ್ಯಾಹ್ನ, ಸಂಜೆ ಊಟದ ವ್ಯವಸ್ಥೆ ಕಲ್ಪಿಸಲಾಗುತ್ತದೆ.</p>.<p>ಪ್ರತಿ ವರ್ಷ ಜಾತ್ರೋತ್ಸವದ ಕೊನೆಯ ದಿನ ದೂರದ ಊರುಗಳಿಂದ ಸಾಕಷ್ಟು ಸಂಖ್ಯೆಯಲ್ಲಿ ಲಗ್ಗೆ ಇಡುವ ಭಕ್ತರು, ಗುರುವಾರವೂ ಕುಟುಂಬ ಸದಸ್ಯರು, ಸ್ನೇಹಿತರೊಂದಿಗೆ ಪಾಲ್ಗೊಂಡಿದ್ದರು. ದೇವರ ದರ್ಶನ ಪಡೆದ ಭಕ್ತರು ಮಾಂಸಾಹಾರ ಮತ್ತು ಸಸ್ಯಾಹಾರ ಅಡುಗೆ ತಯಾರಿಸಿಕೊಂಡು ಊಟ ಸವಿದರು. ಮಹಾ ಮಾದಲಿ ಪ್ರಸಾದ ಖರೀದಿಸಿ ತಮ್ಮ ಊರುಗಳಿಗೆ ತೆರಳಿದರು.</p>.<p>ಮಾ.13ರಂದು ನಡೆಯುವ ಗದ್ದಿಗೆ ಮಹಾಭಿಷೇಕ ನಂತರ ಮಠಾಧಿಪತಿ ಶ್ರೀಕಂಠ ಸಿದ್ದಲಿಂಗ ರಾಜೇ ಅರಸ್ ಅವರು ಸಂಜೆ ಕಪ್ಪಡಿ ಕ್ಷೇತ್ರದಿಂದ ಹೊರಡುವ ವಾಡಿಕೆ ಇದೆ.</p>.<div><blockquote> ದೇವರ ಹೆಸರಿನಲ್ಲಿ ಪ್ರಾಣಿಬಲಿ ಕೊಡುವುದು ಅನಾಗರಿಕ ಅಂಧ ಶ್ರದ್ಧೆ. ದೇವಾಲಯಗಳಲ್ಲಿ ಅಹಿಂಸಾತ್ಮಕ ಸಾತ್ವಿಕ ಪೂಜೆ ಸಲ್ಲಿಕೆಯಾಗಬೇಕು. </blockquote><span class="attribution">ದಯಾನಂದ ಸ್ವಾಮೀಜಿ ಅಧ್ಯಕ್ಷ ಪಶು-ಪ್ರಾಣಿ ಬಲಿ ನಿರ್ಮೂಲನ ಮಹಾ ಸಂಘ</span></div>.<div><blockquote> ಕಪ್ಪಡಿ ರಾಚಪ್ಪಾಜಿ ಸಿದ್ದಪ್ಪಾಜಿ ನಮ್ಮ ಮನೆಯ ದೇವರು. 50 ವರ್ಷಗಳಿಂದ ಬರುತ್ತಿದ್ದೇನೆ. ಪ್ರತಿ ವರ್ಷ ಬಂದು ಪೂಜೆ ಸಲ್ಲಿಸಿ ಹೋದರೆ ಮನಸ್ಸಿಗೆ ಸಮಾಧಾನವಾಗುತ್ತದೆ </blockquote><span class="attribution">ಮಹದೇವಯ್ಯ ಕುರಬೂರು</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>