ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ಕೆ.ಆರ್.ನಗರ | ಕಪ್ಪಡಿ ಕ್ಷೇತ್ರ: ಮಹಾ ಮಾದಲಿ ಸೇವೆ ನಾಳೆ

ಮಹಾ ಶಿವರಾತ್ರಿಯಿಂದ ತಿಂಗಳ ಕಾಲ ನಡೆದಿದ್ದ ಜಾತ್ರೆ; ಸಾವಿರಾರು ಭಕ್ತರು ಬರುವ ನಿರೀಕ್ಷೆ
Published : 23 ಮಾರ್ಚ್ 2025, 7:39 IST
Last Updated : 23 ಮಾರ್ಚ್ 2025, 7:39 IST
ಫಾಲೋ ಮಾಡಿ
Comments
‘ಅಪಪ್ರಚಾರ ಮಾಡಬೇಡಿ’
‘ತಮ್ಮ ಆಹಾರ ಕ್ರಮ (ಮಾಂಸಾಹಾರ ಸಸ್ಯಾಹಾರ) ಅನುಸರಿಸುವುದು ಪ್ರತಿಯೊಬ್ಬರ ಹಕ್ಕು. ಅದನ್ನು ಪ್ರಶ್ನಿಸಲು ನಮಗೆ ಅಧಿಕಾರ ಇಲ್ಲ. ಕಪ್ಪಡಿ ಕ್ಷೇತ್ರದ ಆವರಣದಲ್ಲಿ ಬಲಿ ಪೀಠವೂ ಇಲ್ಲ. ಮಾಂಸಾಹಾರದ ನೈವೇದ್ಯವೂ ಇಲ್ಲ. ಹಾಗಾಗಿ ಇಲ್ಲಿ ಪ್ರಾಣಿ ಬಲಿ ನಡೆಯುತ್ತದೆ ಎನ್ನುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಆದರೂ ಕಪ್ಪಡಿ ಕ್ಷೇತ್ರದಲ್ಲಿ ಪ್ರಾಣಿ ಬಲಿ ನಿಷೇಧಿಸಿದೆ ಎಂದು ಅಧಿಕಾರಿಗಳು ಪ್ರಚಾರ ಮಾಡುವುದರಲ್ಲಿ ಅರ್ಥವಿಲ್ಲ. ಕಳೆದ 2 ವರ್ಷಗಳಿಂದ ಕ್ಷೇತ್ರಕ್ಕೆ ಬರುವ ಭಕ್ತರ ಸಂಖ್ಯೆ ಕಡಿಮೆ ಆಗಿದೆ ಎಂದು ಕಪ್ಪಡಿ ಕ್ಷೇತ್ರದ ಪೀಠಾಧಿಪತಿ ಬಿ.ಎಸ್.ಜ್ಞಾನಾನಂದ ಚೆನ್ನರಾಜೇ ಅರಸ್ ‘ಪ್ರಜಾವಾಣಿ’ಗೆ ತಿಳಿಸಿದರು.
‘ಕಿರುಕುಳ ನೀಡಿದರೆ ಸಹಿಸುವುದಿಲ್ಲ’
‘ಕಪ್ಪಡಿ ಕ್ಷೇತ್ರಕ್ಕೆ ಬರುವ ಭಕ್ತರು ಮಾಂಸಾಹಾರ ತಯಾರಿಸಿಕೊಂಡು ಊಟ ಮಾಡಿದರೆ ಕ್ಷೇತ್ರದಲ್ಲಿ ಪ್ರಾಣಿ ಬಲಿ ಕೊಡಲಾಗುತ್ತದೆ ಎಂದು ಅರ್ಥವಲ್ಲ. ಮಂಟೇಸ್ವಾಮಿ ಪರಂಪರೆಯಲ್ಲಿ ಬಲಿ ಕೊಡುವ ಪದ್ಧತಿ ಇಲ್ಲ. ಇಷ್ಟ ಬಂದ ಆಹಾರ ತಯಾರಿಸಿಕೊಂಡು ಊಟ ಮಾಡುವ ಸ್ವಾತಂತ್ರ್ಯ ಎಲ್ಲರಿಗೂ ಇದೆ. ಮಂಟೇಸ್ವಾಮಿ ಒಕ್ಕಲಿನ ಭಕ್ತರಿಗೆ ಕಿರುಕುಳ ನೀಡಿದರೆ ಸಹಿಸುವುದಿಲ್ಲ. ಬಹಳ ದೊಡ್ಡದಾಗಿ ನಡೆಯುವಂತಹ ಈ ಜಾತ್ರೆಗೆ ಮಸಿ ಬಳಿಯುವ ಕೆಲಸ ಆಗಬಾರದು’ ಎಂದು ಮಂಟೇಸ್ವಾಮಿ ಪರಂಪರೆ ರಕ್ಷಣೆ ಹೋರಾಟ ಸಮಿತಿ ಅಧ್ಯಕ್ಷ ಉಗ್ರನರಸಿಂಹೇಗೌಡ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT