<p><strong>ಮೈಸೂರು:</strong> ಚಾಮರಾಜನಗರದ ಕೋವಿಡ್ ಆಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯಿಂದ ಅಮಾಯಕರು ಸಾವಿಗೀಡಾದ ಘಟನೆಗೆ ಸಂಬಂಧಿಸಿದಂತೆ ಮೈಸೂರು ಮತ್ತು ಚಾಮರಾಜನಗರದ ಜಿಲ್ಲಾಧಿಕಾರಿಗಳನ್ನು ಹಾಗೂ ಅಸಿಸ್ಟೆಂಟ್ ಡ್ರಗ್ ಕಂಟ್ರೋಲರ್ ಅನ್ನು ಅಮಾನತು ಮಾಡಬೇಕು ಎಂದು ಶಾಸಕ ಸಾ.ರಾ.ಮಹೇಶ್ ಆಗ್ರಹಿಸಿದ್ದಾರೆ.</p>.<p>ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮೈಸೂರು ಮತ್ತು ಚಾಮರಾಜನಗರ ಜಿಲ್ಲಾಡಳಿತಗಳ ನಡುವಿನ ಸಮನ್ವಯದ ಕೊರತೆಯಿಂದ ಈ ದುರಂತ ಸಂಭವಿಸಿದೆ. ಎರಡೂ ಜಿಲ್ಲೆಗಳ ಜಿಲ್ಲಾಧಿಕಾರಿಗಳನ್ನು ಅಮಾನತು ಮಾಡದೆ ಏನು ತನಿಖೆ ಮಾಡುತ್ತೀರಿ ಎಂದು ಪ್ರಶ್ನಿಸಿದರು.</p>.<p>‘ಘಟನೆಯಲ್ಲಿ ಮೂವರು ಸತ್ತಿದ್ದಾರೆ ಎಂದು ಆರೋಗ್ಯ ಸಚಿವರು ಹೇಳಿದ್ದಾರೆ. ಹಾಗಾದರೆ ಅದು ಸಾವಲ್ಲವೇ? ಚಾಮರಾಜನಗರದ ಆಸ್ಪತ್ರೆಗೆ ಮೈಸೂರಿನಿಂದ ಆಮ್ಲಜನಕ ಪೂರೈಕೆ ಆಗಿಲ್ಲ. ಅದು ಗೊತ್ತಿದ್ದರೂ ಮೈಸೂರಿನ ಡ್ರಗ್ ಕಂಟ್ರೋಲರ್ ಈ ವಿಷಯವನ್ನು ಸರ್ಕಾರದ ಗಮನಕ್ಕೆ ತರದಿರುವುದು ದೊಡ್ಡ ಲೋಪ’ ಎಂದರು.</p>.<p>ಮಂಡ್ಯ ಮತ್ತು ಚಾಮರಾಜನಗರಕ್ಕೆ ಆಮ್ಲಜನಕ ಕೊಡಬಾರದು ಎಂದು ಡ್ರಗ್ ಕಂಟ್ರೋಲರ್ಗೆ ಯಾರು ಒತ್ತಡ ಹಾಕಿದ್ದರು ಎಂಬುದು ಬಹಿರಂಗವಾಗಲಿ. ಇದು ಜನರ ಜೀವನದ ಪ್ರಶ್ನೆ. ಇಂತಹ ಉದ್ಧಟತನದ ಅಧಿಕಾರಿಗಳನ್ನು ಇಟ್ಟುಕೊಂಡು ಜನರ ಜೀವನ ಜೊತೆ ಆಟ ಆಡಬೇಡಿ ಎಂದು ಕಿಡಿಕಾರಿದರು.</p>.<p><strong>ಇದನ್ನೂ ಓದಿ– </strong><a href="https://www.prajavani.net/op-ed/editorial/editorial-on-chamarajanagar-covid-hospital-oxygen-shortage-death-tragedy-827792.html" target="_blank">ಸಂಪಾದಕೀಯ: ಸಾವಿನ ಬಾಗಿಲಿಗೆ ಬಲವಂತದಿಂದ ತಳ್ಳಬೇಡಿ, ಪ್ರಾಣವಾಯು ಒದಗಿಸಿ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಚಾಮರಾಜನಗರದ ಕೋವಿಡ್ ಆಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯಿಂದ ಅಮಾಯಕರು ಸಾವಿಗೀಡಾದ ಘಟನೆಗೆ ಸಂಬಂಧಿಸಿದಂತೆ ಮೈಸೂರು ಮತ್ತು ಚಾಮರಾಜನಗರದ ಜಿಲ್ಲಾಧಿಕಾರಿಗಳನ್ನು ಹಾಗೂ ಅಸಿಸ್ಟೆಂಟ್ ಡ್ರಗ್ ಕಂಟ್ರೋಲರ್ ಅನ್ನು ಅಮಾನತು ಮಾಡಬೇಕು ಎಂದು ಶಾಸಕ ಸಾ.ರಾ.ಮಹೇಶ್ ಆಗ್ರಹಿಸಿದ್ದಾರೆ.</p>.<p>ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮೈಸೂರು ಮತ್ತು ಚಾಮರಾಜನಗರ ಜಿಲ್ಲಾಡಳಿತಗಳ ನಡುವಿನ ಸಮನ್ವಯದ ಕೊರತೆಯಿಂದ ಈ ದುರಂತ ಸಂಭವಿಸಿದೆ. ಎರಡೂ ಜಿಲ್ಲೆಗಳ ಜಿಲ್ಲಾಧಿಕಾರಿಗಳನ್ನು ಅಮಾನತು ಮಾಡದೆ ಏನು ತನಿಖೆ ಮಾಡುತ್ತೀರಿ ಎಂದು ಪ್ರಶ್ನಿಸಿದರು.</p>.<p>‘ಘಟನೆಯಲ್ಲಿ ಮೂವರು ಸತ್ತಿದ್ದಾರೆ ಎಂದು ಆರೋಗ್ಯ ಸಚಿವರು ಹೇಳಿದ್ದಾರೆ. ಹಾಗಾದರೆ ಅದು ಸಾವಲ್ಲವೇ? ಚಾಮರಾಜನಗರದ ಆಸ್ಪತ್ರೆಗೆ ಮೈಸೂರಿನಿಂದ ಆಮ್ಲಜನಕ ಪೂರೈಕೆ ಆಗಿಲ್ಲ. ಅದು ಗೊತ್ತಿದ್ದರೂ ಮೈಸೂರಿನ ಡ್ರಗ್ ಕಂಟ್ರೋಲರ್ ಈ ವಿಷಯವನ್ನು ಸರ್ಕಾರದ ಗಮನಕ್ಕೆ ತರದಿರುವುದು ದೊಡ್ಡ ಲೋಪ’ ಎಂದರು.</p>.<p>ಮಂಡ್ಯ ಮತ್ತು ಚಾಮರಾಜನಗರಕ್ಕೆ ಆಮ್ಲಜನಕ ಕೊಡಬಾರದು ಎಂದು ಡ್ರಗ್ ಕಂಟ್ರೋಲರ್ಗೆ ಯಾರು ಒತ್ತಡ ಹಾಕಿದ್ದರು ಎಂಬುದು ಬಹಿರಂಗವಾಗಲಿ. ಇದು ಜನರ ಜೀವನದ ಪ್ರಶ್ನೆ. ಇಂತಹ ಉದ್ಧಟತನದ ಅಧಿಕಾರಿಗಳನ್ನು ಇಟ್ಟುಕೊಂಡು ಜನರ ಜೀವನ ಜೊತೆ ಆಟ ಆಡಬೇಡಿ ಎಂದು ಕಿಡಿಕಾರಿದರು.</p>.<p><strong>ಇದನ್ನೂ ಓದಿ– </strong><a href="https://www.prajavani.net/op-ed/editorial/editorial-on-chamarajanagar-covid-hospital-oxygen-shortage-death-tragedy-827792.html" target="_blank">ಸಂಪಾದಕೀಯ: ಸಾವಿನ ಬಾಗಿಲಿಗೆ ಬಲವಂತದಿಂದ ತಳ್ಳಬೇಡಿ, ಪ್ರಾಣವಾಯು ಒದಗಿಸಿ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>