<p><strong>ಮೈಸೂರು</strong>: ವಾರ್ತಾ ಇಲಾಖೆಯ ನಿವೃತ್ತ ಛಾಯಾ ಮತ್ತು ಚಲನಚಿತ್ರ ಅಧಿಕಾರಿ ಟಿ.ಕೆಂಪಣ್ಣ ಅವರು ತಾವು ತೆಗೆದಿರುವ ‘ಕರ್ನಾಟಕದ ಪ್ರಾಚೀನ ದೇವಾಲಯಗಳ ಛಾಯಾಚಿತ್ರ ಪ್ರದರ್ಶನ’ವನ್ನು ಆ.19ರಿಂದ 21ರವರೆಗೆ ಇಲ್ಲಿನ ಕಲಾಮಂದಿರ ಆವರಣದ ಸುಚಿತ್ರಾ ಕಲಾಗ್ಯಾಲರಿಯಲ್ಲಿ ಹಮ್ಮಿಕೊಂಡಿದ್ದಾರೆ.</p>.<p>‘ಈ ವಿಶೇಷವಾದ ಛಾಯಾಚಿತ್ರಗಳ ಪ್ರದರ್ಶನವನ್ನು ವಿಶ್ವ ಛಾಯಾಗ್ರಹಣ ದಿನದ ಅಂಗವಾಗಿ ಆಯೋಜಿಸಿದ್ದೇನೆ. ನಮ್ಮ ಶಿಲ್ಪಕಲೆಯ ವೈಭವವನ್ನು ಸಾರ್ವಜನಿಕರು ಕಣ್ತುಂಬಿಕೊಳ್ಳುವಂತೆ ಮಾಡುವುದು ನನ್ನ ಉದ್ದೇಶ. ಐತಿಹಾಸಿಕ ಸ್ಥಳಗಳಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ತೆಗೆದ ಫೋಟೊಗಳನ್ನು ಪ್ರದರ್ಶಿಸಲಾಗುವುದು’ ಎಂದು ಇಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಆ.19ರಂದು ಬೆಳಿಗ್ಗೆ 11.30ಕ್ಕೆ ಕರ್ನಾಟಕ ಲಲಿತಕಲಾ ಅಕಾಡೆಮಿ ಅಧ್ಯಕ್ಷ ಸಂಪತ್ ಕುಮಾರ್ ಉದ್ಘಾಟಿಸುವರು. ಪತ್ರಕರ್ತ ಅಂಶಿ ಪ್ರಸನ್ನಕುಮಾರ್ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವರು. ಮೈಸೂರು ಪಾಲಿಮರ್ಸ್ ಮತ್ತು ರಬ್ಬರ್ ಪ್ರಾಡಕ್ಟ್ಸ್ ಪ್ರೈ.ಲಿ. ಸಿಇಒ ಜಿ. ರಾಜಗೋಪಾಲಯ್ಯ ಅಧ್ಯಕ್ಷತೆ ವಹಿಸುವರು’ ಎಂದು ಮಾಹಿತಿ ನೀಡಿದರು.</p>.<p>‘ವಿಶ್ವ ಛಾಯಾಗ್ರಹಣ ದಿನದ ಅಂಗವಾಗಿ ಛಾಯಾಗ್ರಾಹಕರ ಸಂಘದ ಹಿರಿಯರಾದ ರಾಮ್ ಪ್ರಸಾದ್, ಎಸ್. ತಿಪ್ಪೇಸ್ವಾಮಿ, ಜಂಬುಕೇಶ್ವರ, ಜಗದೀಶ್ ಹಾಗೂ ಮೈಸೂರು ಪತ್ರಿಕಾ ಛಾಯಾಗ್ರಾಹಕರ ಸಂಘದ ಅಧ್ಯಕ್ಷ ಪ್ರಗತಿ ಗೋಪಾಲಕೃಷ್ಣ ಅವರನ್ನು ಸನ್ಮಾನಿಸಲಾಗುವುದು’ ಎಂದು ತಿಳಿಸಿದರು.</p>.<p>ಛಾಯಾಗ್ರಾಹಕರಾದ ಎಸ್.ತಿಪ್ಪೇಸ್ವಾಮಿ, ಪ್ರಗತಿ ಗೋಪಾಲಕೃಷ್ಣ, ಶಾಂತಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ವಾರ್ತಾ ಇಲಾಖೆಯ ನಿವೃತ್ತ ಛಾಯಾ ಮತ್ತು ಚಲನಚಿತ್ರ ಅಧಿಕಾರಿ ಟಿ.ಕೆಂಪಣ್ಣ ಅವರು ತಾವು ತೆಗೆದಿರುವ ‘ಕರ್ನಾಟಕದ ಪ್ರಾಚೀನ ದೇವಾಲಯಗಳ ಛಾಯಾಚಿತ್ರ ಪ್ರದರ್ಶನ’ವನ್ನು ಆ.19ರಿಂದ 21ರವರೆಗೆ ಇಲ್ಲಿನ ಕಲಾಮಂದಿರ ಆವರಣದ ಸುಚಿತ್ರಾ ಕಲಾಗ್ಯಾಲರಿಯಲ್ಲಿ ಹಮ್ಮಿಕೊಂಡಿದ್ದಾರೆ.</p>.<p>‘ಈ ವಿಶೇಷವಾದ ಛಾಯಾಚಿತ್ರಗಳ ಪ್ರದರ್ಶನವನ್ನು ವಿಶ್ವ ಛಾಯಾಗ್ರಹಣ ದಿನದ ಅಂಗವಾಗಿ ಆಯೋಜಿಸಿದ್ದೇನೆ. ನಮ್ಮ ಶಿಲ್ಪಕಲೆಯ ವೈಭವವನ್ನು ಸಾರ್ವಜನಿಕರು ಕಣ್ತುಂಬಿಕೊಳ್ಳುವಂತೆ ಮಾಡುವುದು ನನ್ನ ಉದ್ದೇಶ. ಐತಿಹಾಸಿಕ ಸ್ಥಳಗಳಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ತೆಗೆದ ಫೋಟೊಗಳನ್ನು ಪ್ರದರ್ಶಿಸಲಾಗುವುದು’ ಎಂದು ಇಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಆ.19ರಂದು ಬೆಳಿಗ್ಗೆ 11.30ಕ್ಕೆ ಕರ್ನಾಟಕ ಲಲಿತಕಲಾ ಅಕಾಡೆಮಿ ಅಧ್ಯಕ್ಷ ಸಂಪತ್ ಕುಮಾರ್ ಉದ್ಘಾಟಿಸುವರು. ಪತ್ರಕರ್ತ ಅಂಶಿ ಪ್ರಸನ್ನಕುಮಾರ್ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವರು. ಮೈಸೂರು ಪಾಲಿಮರ್ಸ್ ಮತ್ತು ರಬ್ಬರ್ ಪ್ರಾಡಕ್ಟ್ಸ್ ಪ್ರೈ.ಲಿ. ಸಿಇಒ ಜಿ. ರಾಜಗೋಪಾಲಯ್ಯ ಅಧ್ಯಕ್ಷತೆ ವಹಿಸುವರು’ ಎಂದು ಮಾಹಿತಿ ನೀಡಿದರು.</p>.<p>‘ವಿಶ್ವ ಛಾಯಾಗ್ರಹಣ ದಿನದ ಅಂಗವಾಗಿ ಛಾಯಾಗ್ರಾಹಕರ ಸಂಘದ ಹಿರಿಯರಾದ ರಾಮ್ ಪ್ರಸಾದ್, ಎಸ್. ತಿಪ್ಪೇಸ್ವಾಮಿ, ಜಂಬುಕೇಶ್ವರ, ಜಗದೀಶ್ ಹಾಗೂ ಮೈಸೂರು ಪತ್ರಿಕಾ ಛಾಯಾಗ್ರಾಹಕರ ಸಂಘದ ಅಧ್ಯಕ್ಷ ಪ್ರಗತಿ ಗೋಪಾಲಕೃಷ್ಣ ಅವರನ್ನು ಸನ್ಮಾನಿಸಲಾಗುವುದು’ ಎಂದು ತಿಳಿಸಿದರು.</p>.<p>ಛಾಯಾಗ್ರಾಹಕರಾದ ಎಸ್.ತಿಪ್ಪೇಸ್ವಾಮಿ, ಪ್ರಗತಿ ಗೋಪಾಲಕೃಷ್ಣ, ಶಾಂತಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>