ಕೃಷ್ಣರಾಜ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಟಿ.ಎಸ್.ಶ್ರೀವತ್ಸ ಅವರು ಬೆಳಿಗ್ಗೆಯೇ ಚಾಮರಾಜಪುರದಲ್ಲಿರುವ ಪಕ್ಷದ ಕಚೇರಿಗೆ ಬಂದು ವಿವಿಧ ಪತ್ರಿಕೆಗಳನ್ನು ಓದಿದರು. ನಂತರ, ಪಕ್ಷದ ರಾಜ್ಯ ಉಪಾಧ್ಯಕ್ಷ ಎಂ.ರಾಜೇಂದ್ರ, ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಎಂ.ಶಿವಕುಮಾರ್, ಪಕ್ಷದ ಮುಖಂಡ ಎಚ್.ಜಿ.ಗಿರಿಧರ್ ಜತೆಗೂ ಸಮಾಲೋಚನೆ ನಡೆಸಿದರು. ಕಾಂಗ್ರೆಸ್ ಅಭ್ಯರ್ಥಿ ಎಂ.ಕೆ.ಸೋಮಶೇಖರ್ ಅವರು ಸುಬ್ಬಯ್ಯ ರಸ್ತೆಯ ತಮ್ಮ ಮನೆಯಲ್ಲಿ ಕುಟುಂಬ ಸದಸ್ಯರ ಜತೆ ಕಾಲ ಕಳೆದರು.