ಯತೀಂದ್ರ, ಸೋಮವಾರ ಕ್ಷೇತ್ರ ವ್ಯಾಪ್ತಿಯ ಮೈಸೂರು ತಾಲ್ಲೂಕಿನ ಎಸ್.ಉತ್ತನಹಳ್ಳಿಯ ಜ್ವಾಲಾಮುಖಿ ತ್ರಿಪುರ ಸುಂದರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಪ್ರಚಾರ ಕಾರ್ಯವನ್ನು ನಡೆಸಿದರು. ಅವರನ್ನು ಅಭಿಮಾನಿಗಳು ಎತ್ತಿನ ಗಾಡಿಯಲ್ಲಿ ಮೆರವಣಿಗೆ ಮಾಡುವ ಮೂಲಕ ಸ್ವಾಗತಿಸಿದರು. ನಂತರ ಗುಡುಮಾದನಹಳ್ಳಿ, ಮರಸೆ, ಮಾಕನಹುಂಡಿ, ಕೋಚನಹಳ್ಳಿ ಗ್ರಾಮಗಳಲ್ಲಿ ತಂದೆ ಪರವಾಗಿ ಮತ ಯಾಚಿಸಿದರು.