ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಹನ ಡಿಕ್ಕಿಯಿಂದಾದ ಜಗಳಕ್ಕೆ ಬಿಜೆಪಿ ರಾಜಕೀಯ ‌ಬಣ್ಣ: ಯತೀಂದ್ರ ಸಿದ್ದರಾಮಯ್ಯ ಆರೋಪ

Published 28 ಏಪ್ರಿಲ್ 2023, 5:31 IST
Last Updated 28 ಏಪ್ರಿಲ್ 2023, 5:31 IST
ಅಕ್ಷರ ಗಾತ್ರ

ಮೈಸೂರು: ವರುಣ ಕ್ಷೇತ್ರದ ಸಿದ್ದರಾಮನಹುಂಡಿಯಲ್ಲಿ ಕಾರು- ಬೈಕ್ ಡಿಕ್ಕಿಯಿಂದಾಗಿ ಕೆಲವರ ನಡುವೆ ಗಲಾಟೆ ನಡೆದಿದೆ. ಅದಕ್ಕೆ ಬಿಜೆಪಿಯವರು ರಾಜಕೀಯ ಬಣ್ಣ ಬಳಿದಿದ್ದಾರೆ' ಎಂದು ಕಾಂಗ್ರೆಸ್ ಶಾಸಕ ಡಾ‌.ಯತೀಂದ್ರ ಸಿದ್ದರಾಮಯ್ಯ ಆರೋಪಿಸಿದರು.

ಇಲ್ಲಿ ಪತ್ರಕರ್ತರೊಂದಿಗೆ ಶುಕ್ರವಾರ ಮಾತನಾಡಿದ ಅವರು, 'ಬಿಜೆಪಿ ಮೂಲತಃ ಗಲಭೆ ಪಕ್ಷ. ಅವರು

ಗಲಭೆ ಮಾಡಿಸುವಲ್ಲಿ ನಿಸ್ಸೀಮರು. ಅವರು ಎಷ್ಟೇ ಪ್ರಚೋದನೆ ಮಾಡಿದರೂ ಕಾಂಗ್ರೆಸ್ ಕಾರ್ಯಕರ್ತರು ಪ್ರಚೋದನೆಗೆ ಒಳಗಾಗಬಾರದು' ಎಂದರು.

'ಬಿಜೆಪಿಯವರು ರಾಜಕೀಯ ಲಾಭಕ್ಕಾಗಿ ಈ ರೀತಿ ಕಾರ್ಯತಂತ್ರ ಮಾಡುತ್ತಿದ್ದಾರೆ. ಹಸಿ ಸುಳ್ಳು ಹೇಳುತ್ತಾ ದ್ವೇಷ ಹರಡಿಸಿ ತನ್ನ ಬೇಳೆ ಬೇಯಿಸಿಕೊಳ್ಳುವ ತಂತ್ರ ಮಾಡುತ್ತಿದ್ದಾರೆ' ಎಂದು ಆರೋಪಿಸಿದರು.

'ಗಲಾಟೆ ವೇಳೆ ಸಿದ್ದರಾಮಯ್ಯ ಕುಟುಂಬದವರಾರೂ ಇರಲಿಲ್ಲ. ಅದರೂ ದುರುದ್ದೇಶದಿಂದ ನಮ್ಮ‌ ಕುಟುಂಬದವರ ಮೇಲೆ ದೂರು ನೀಡಿದ್ದಾರೆ' ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT