<p><strong>ಮೈಸೂರು:</strong> ‘ಆನ್ಲೈನ್ ಮಾರುಕಟ್ಟೆಯಾದ ಫ್ಲಿಪ್ಕಾರ್ಟ್ನಲ್ಲಿ ಲೀಟರ್ ಹಾಲನ್ನು ₹ 1ಕ್ಕೆ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಇದು ಹೈನುಗಾರಿಕೆ ಮಾಡುವ ರೈತ ವಿರೋಧಿ ಕ್ರಮವಾಗಿದ್ದು, ಕೂಡಲೇ ನಿರ್ಬಂಧ ವಿಧಿಸಬೇಕು’ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಅಧ್ಯಕ್ಷ ಚಿಕ್ಕಣ್ಣೇಗೌಡ ಹಾಗೂ ಕಾರ್ಯದರ್ಶಿ ಜಗದೀಶ್ ಸೂರ್ಯ ಆಗ್ರಹಿಸಿದ್ದಾರೆ. </p>.<p>‘ರೈತರು ಜೀವನೋಪಾಯಕ್ಕಾಗಿ ಹೈನುಗಾರಿಕೆ ಅವಲಂಬಿಸಿದ್ದಾರೆ. ಕೆಎಂಎಫ್ ರೈತರಿಗೆ ಉತ್ಪಾದನಾ ವೆಚ್ಚ ನೀಡಲು ಮತ್ತು ಸಂಗ್ರಹಿಸಿದ ಹಾಲು ಮಾರಾಟಕ್ಕೆ ಪ್ರಯಾಸ ಪಡುತ್ತಿರುವಾಗ, ಕೇಂದ್ರ ಸರ್ಕಾರವು ಆನ್ಲೈನ್ ವೇದಿಕೆಗಳಿಗೆ ಅಗ್ಗದ ದರದಲ್ಲಿ ಹಾಲು ಮಾರಾಟಕ್ಕೆ ಅವಕಾಶ ನೀಡಿರುವುದು ಅನ್ಯಾಯವಾಗಿದೆ’ ಎಂದು ಪ್ರಕಟಣೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. </p>.<p>‘ಬಂಡವಾಳಶಾಹಿ ಮಾರುಕಟ್ಟೆ ವ್ಯವಸ್ಥೆಯು ದೇಶದ ಸಹಕಾರಿ ಒಕ್ಕೂಟಗಳನ್ನು ನಾಶ ಮಾಡುತ್ತಿದೆ. ಕಾರ್ಪೊರೇಟ್ ದಾಳಿಗೆ ಸಿಲುಕಿಸುತ್ತಿರುವ ಕೇಂದ್ರ ಸಹಕಾರಿ ಸಚಿವ ಅಮಿತ್ ಶಾ ಕೂಡಲೇ ರಾಜೀನಾಮೆ ನೀಡಬೇಕು. ಕ್ರಮ ವಹಿಸದಿದ್ದರೆ ಹೈನುಗಾರರು ತೀವ್ರ ಪ್ರತಿಭಟನೆ ನಡೆಸಬೇಕಾಗುತ್ತದೆ’ ಎಂದು ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ಆನ್ಲೈನ್ ಮಾರುಕಟ್ಟೆಯಾದ ಫ್ಲಿಪ್ಕಾರ್ಟ್ನಲ್ಲಿ ಲೀಟರ್ ಹಾಲನ್ನು ₹ 1ಕ್ಕೆ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಇದು ಹೈನುಗಾರಿಕೆ ಮಾಡುವ ರೈತ ವಿರೋಧಿ ಕ್ರಮವಾಗಿದ್ದು, ಕೂಡಲೇ ನಿರ್ಬಂಧ ವಿಧಿಸಬೇಕು’ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಅಧ್ಯಕ್ಷ ಚಿಕ್ಕಣ್ಣೇಗೌಡ ಹಾಗೂ ಕಾರ್ಯದರ್ಶಿ ಜಗದೀಶ್ ಸೂರ್ಯ ಆಗ್ರಹಿಸಿದ್ದಾರೆ. </p>.<p>‘ರೈತರು ಜೀವನೋಪಾಯಕ್ಕಾಗಿ ಹೈನುಗಾರಿಕೆ ಅವಲಂಬಿಸಿದ್ದಾರೆ. ಕೆಎಂಎಫ್ ರೈತರಿಗೆ ಉತ್ಪಾದನಾ ವೆಚ್ಚ ನೀಡಲು ಮತ್ತು ಸಂಗ್ರಹಿಸಿದ ಹಾಲು ಮಾರಾಟಕ್ಕೆ ಪ್ರಯಾಸ ಪಡುತ್ತಿರುವಾಗ, ಕೇಂದ್ರ ಸರ್ಕಾರವು ಆನ್ಲೈನ್ ವೇದಿಕೆಗಳಿಗೆ ಅಗ್ಗದ ದರದಲ್ಲಿ ಹಾಲು ಮಾರಾಟಕ್ಕೆ ಅವಕಾಶ ನೀಡಿರುವುದು ಅನ್ಯಾಯವಾಗಿದೆ’ ಎಂದು ಪ್ರಕಟಣೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. </p>.<p>‘ಬಂಡವಾಳಶಾಹಿ ಮಾರುಕಟ್ಟೆ ವ್ಯವಸ್ಥೆಯು ದೇಶದ ಸಹಕಾರಿ ಒಕ್ಕೂಟಗಳನ್ನು ನಾಶ ಮಾಡುತ್ತಿದೆ. ಕಾರ್ಪೊರೇಟ್ ದಾಳಿಗೆ ಸಿಲುಕಿಸುತ್ತಿರುವ ಕೇಂದ್ರ ಸಹಕಾರಿ ಸಚಿವ ಅಮಿತ್ ಶಾ ಕೂಡಲೇ ರಾಜೀನಾಮೆ ನೀಡಬೇಕು. ಕ್ರಮ ವಹಿಸದಿದ್ದರೆ ಹೈನುಗಾರರು ತೀವ್ರ ಪ್ರತಿಭಟನೆ ನಡೆಸಬೇಕಾಗುತ್ತದೆ’ ಎಂದು ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>