ಶನಿವಾರ, 21 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಪ್ರವಾಹ ನಿರ್ವಹಣೆಗೆ ಮಂತ್ರಿ ಮಂಡಲ ಇರಬೇಕಿತ್ತು: ಶ್ರೀನಿವಾಸಪ್ರಸಾದ್‌

Published : 13 ಆಗಸ್ಟ್ 2019, 20:15 IST
ಫಾಲೋ ಮಾಡಿ
Comments

ಮೈಸೂರು: ರಾಜ್ಯದಲ್ಲಿ ಉದ್ಭವಿಸಿರುವ ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ಮಂತ್ರಿ ಮಂಡಲ ಇರಬೇಕಿತ್ತು ಎಂದು ಬಿಜೆಪಿ ಸಂಸದ ವಿ.ಶ್ರೀನಿವಾಸಪ್ರಸಾದ್‌ ಮಂಗಳವಾರ ಇಲ್ಲಿ ಹೇಳಿದರು.

‘ನಾನು ಹಿಂದೆ ಕಂದಾಯ ಸಚಿವನಾಗಿ ಕೆಲಸ ಮಾಡಿದ್ದೇನೆ. ಸಮಸ್ಯೆ ಏನು ಎಂಬುದು ಗೊತ್ತು. ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಮುಖ್ಯಮಂತ್ರಿ ಒಬ್ಬರೇ ಶ್ರಮಿಸುತ್ತಿದ್ದಾರೆ. ಇದೊಂದು ಅನಿರೀಕ್ಷಿತ ಘಟನೆ. ಮಂತ್ರಿ ಮಂಡಲ ರಚನೆಗೆ ಸಿದ್ಧರಾಗಿದ್ದಾಗಲೇ ಸಮಸ್ಯೆ ಉಂಟಾಗಿದೆ. ಸಚಿವರು ಇದ್ದಿದ್ದರೆ ಮತ್ತಷ್ಟು ಉತ್ತಮವಾಗಿ ನಿರ್ವಹಣೆ ಮಾಡಬಹುದಿತ್ತು’ ಎಂದು ಅಭಿಪ್ರಾಯಪಟ್ಟರು.

‘ಈಗಲೂ, ಚುನಾಯಿತ ಪ್ರತಿನಿಧಿಗಳು ರಾಜ್ಯದಾದ್ಯಂತ ಪ್ರವಾಸ ಮಾಡಿ ಜನರ ಕಷ್ಟ ಆಲಿಸುತ್ತಿದ್ದಾರೆ. ವಿವಿಧ ರೀತಿಯಲ್ಲಿ ಸಹಾಯ ಮಾಡುತ್ತಿದ್ದಾರೆ. ಅಧಿಕಾರಿಗಳು ಕೂಡ ಸ್ಪಂದಿಸುತ್ತಿದ್ದಾರೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT