<p><strong>ಮೈಸೂರು:</strong> ‘ಮುಖ್ಯಮಂತ್ರಿ ಬದಲಾವಣೆ ಪ್ರಶ್ನೆಯೇ ಇಲ್ಲ. ಸಿದ್ದರಾಮಯ್ಯ ಅವರಿಗೆ ಸಂಪೂರ್ಣ ಬೆಂಬಲ ಕೊಡುವುದಾಗಿ ಹೈಕಮಾಂಡ್ ನಾಯಕರು ಹೇಳಿದ್ದಾರೆ’ ಎಂದು ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.</p>.<p>ಇಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ‘ಮುಖ್ಯಮಂತ್ರಿ ಬದಲಾವಣೆ ವಿಚಾರವನ್ನು ಯಾರೂ ಮಾತನಾಡುತ್ತಿಲ್ಲ. ಅದು ಮಾಧ್ಯಮಗಳಲ್ಲಿ ಮಾತ್ರ ಚರ್ಚೆಯಾಗುತ್ತಿದೆ. ಇದಕ್ಕೆಲ್ಲಾ ವಿರಾಮ ಹಾಕಬೇಕು’ ಎಂದರು.</p>.<p>‘ಮುಖ್ಯಮಂತ್ರಿ ಬದಲಾವಣೆ ಮಾಡುವುದಿಲ್ಲ ಎಂದು ಹೈಕಮಾಂಡ್ ಈಗಾಗಲೇ ಹೇಳಿದೆ. ವಿರೋಧಪಕ್ಷದವರು ಮುಖ್ಯಮಂತ್ರಿ ವಿರುದ್ಧ ದೊಡ್ಡ ಆರೋಪ ಮಾಡಿ ಪಾದಯಾತ್ರೆ ನಡೆಸಿದ ಸಂದರ್ಭದಲ್ಲೇ ಹೈಕಮಾಂಡ್ ಗಟ್ಟಿಯಾಗಿಯೇ ಹೇಳಿದೆ. ಅವರೊಂದಿಗೆ ಹಿಂದಿನಿಂದಲೂ ನಿಂತಿದೆ’ ಎಂದು ತಿಳಿಸಿದರು.</p>.<p>‘ಪಕ್ಷದಲ್ಲಿ ಯಾವುದೇ ಬಣವಿಲ್ಲ. ರಾಜಕೀಯ ಪಕ್ಷ ಎಂದ ಮೇಲೆ ಒಂದಷ್ಟು ಚರ್ಚೆಗಳು ನಡೆಯುತ್ತವೆ. ಆದರೆ, ಬಣ ರಾಜಕಾರಣ ನಮ್ಮಲ್ಲಿಲ್ಲ’ ಎಂದು ಹೇಳಿದರು.</p>.<p>‘ಗೃಹಲಕ್ಷ್ಮಿ ಯೋಜನೆಯಡಿ ಎಷ್ಟು ತಿಂಗಳಿಂದ ಹಣ ಬಂದಿಲ್ಲವೋ ಅದೆಲ್ಲವನ್ನೂ ಸೇರಿಸಿ ಫಲಾನುಭವಿಗಳ ಖಾತೆಗೆ ಸರ್ಕಾರದಿಂದ ಪಾವತಿಸಲಾಗುತ್ತದೆ. ಈ ಬಗ್ಗೆ ಮುಖ್ಯಮಂತ್ರಿ ಈಗಾಗಲೇ ಸ್ಪಷ್ಟನೆ ಕೊಟ್ಟಿದ್ದಾರೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ಮುಖ್ಯಮಂತ್ರಿ ಬದಲಾವಣೆ ಪ್ರಶ್ನೆಯೇ ಇಲ್ಲ. ಸಿದ್ದರಾಮಯ್ಯ ಅವರಿಗೆ ಸಂಪೂರ್ಣ ಬೆಂಬಲ ಕೊಡುವುದಾಗಿ ಹೈಕಮಾಂಡ್ ನಾಯಕರು ಹೇಳಿದ್ದಾರೆ’ ಎಂದು ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.</p>.<p>ಇಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ‘ಮುಖ್ಯಮಂತ್ರಿ ಬದಲಾವಣೆ ವಿಚಾರವನ್ನು ಯಾರೂ ಮಾತನಾಡುತ್ತಿಲ್ಲ. ಅದು ಮಾಧ್ಯಮಗಳಲ್ಲಿ ಮಾತ್ರ ಚರ್ಚೆಯಾಗುತ್ತಿದೆ. ಇದಕ್ಕೆಲ್ಲಾ ವಿರಾಮ ಹಾಕಬೇಕು’ ಎಂದರು.</p>.<p>‘ಮುಖ್ಯಮಂತ್ರಿ ಬದಲಾವಣೆ ಮಾಡುವುದಿಲ್ಲ ಎಂದು ಹೈಕಮಾಂಡ್ ಈಗಾಗಲೇ ಹೇಳಿದೆ. ವಿರೋಧಪಕ್ಷದವರು ಮುಖ್ಯಮಂತ್ರಿ ವಿರುದ್ಧ ದೊಡ್ಡ ಆರೋಪ ಮಾಡಿ ಪಾದಯಾತ್ರೆ ನಡೆಸಿದ ಸಂದರ್ಭದಲ್ಲೇ ಹೈಕಮಾಂಡ್ ಗಟ್ಟಿಯಾಗಿಯೇ ಹೇಳಿದೆ. ಅವರೊಂದಿಗೆ ಹಿಂದಿನಿಂದಲೂ ನಿಂತಿದೆ’ ಎಂದು ತಿಳಿಸಿದರು.</p>.<p>‘ಪಕ್ಷದಲ್ಲಿ ಯಾವುದೇ ಬಣವಿಲ್ಲ. ರಾಜಕೀಯ ಪಕ್ಷ ಎಂದ ಮೇಲೆ ಒಂದಷ್ಟು ಚರ್ಚೆಗಳು ನಡೆಯುತ್ತವೆ. ಆದರೆ, ಬಣ ರಾಜಕಾರಣ ನಮ್ಮಲ್ಲಿಲ್ಲ’ ಎಂದು ಹೇಳಿದರು.</p>.<p>‘ಗೃಹಲಕ್ಷ್ಮಿ ಯೋಜನೆಯಡಿ ಎಷ್ಟು ತಿಂಗಳಿಂದ ಹಣ ಬಂದಿಲ್ಲವೋ ಅದೆಲ್ಲವನ್ನೂ ಸೇರಿಸಿ ಫಲಾನುಭವಿಗಳ ಖಾತೆಗೆ ಸರ್ಕಾರದಿಂದ ಪಾವತಿಸಲಾಗುತ್ತದೆ. ಈ ಬಗ್ಗೆ ಮುಖ್ಯಮಂತ್ರಿ ಈಗಾಗಲೇ ಸ್ಪಷ್ಟನೆ ಕೊಟ್ಟಿದ್ದಾರೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>