ಮೈಸೂರು: ‘ಐ.ಟಿ ಅಸ್ತ್ರ ಬಳಸಿ ಕಾಂಗ್ರೆಸ್ ನಾಯಕರಾದ ಡಿ.ಕೆ.ಶಿವಕುಮಾರ್, ಡಾ.ಜಿ.ಪರಮೇಶ್ವರ ಅವರ ಮೇಲೆ ಕೇಂದ್ರ ಸರ್ಕಾರ ದಾಳಿ ನಡೆಸಿದೆ. ಸಿದ್ದರಾಮಯ್ಯ ಅವರ ಮೇಲೂ ದಾಳಿಗೆ ಸಂಚು ರೂಪಿಸಿದೆ. ಆದರೆ, ಅವರನ್ನು ಟಚ್ ಮಾಡಿದರೆ ರಾಜ್ಯದ ಜನ ಸುಮ್ಮನಿರಲ್ಲ’ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ಇಲ್ಲಿ ಎಚ್ಚರಿಸಿದರು.