ನಗರದ ಮಹಾರಾಜ ಕಾಲೇಜು ಶತಮಾನೋತ್ಸವ ಭವನದಲ್ಲಿ ಶನಿವಾರ ಜಾಗೃತ ಕರ್ನಾಟಕ ಸಂಘಟನೆಯು ಆಯೋಜಿಸಿದ್ದ ‘ಕುವೆಂಪು ಕ್ರಾಂತಿಕಹಳೆ–50’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ‘ಎಲ್ಲರೂ ಕುವೆಂಪು ಸಾಹಿತ್ಯ ಓದಿದ್ದರೆ ಇಂದು ಮಂಡ್ಯದ ಕೆರಗೋಡಿನಲ್ಲಿ ರಾಷ್ಟ್ರಧ್ವಜಕ್ಕೆ ಬದಲಾಗಿ ಧರ್ಮ ಧ್ವಜ ಹಾರಿಸುವ ಪ್ರಯತ್ನ ಮಾಡುತ್ತಿರಲಿಲ್ಲ. ಇಂದಿನ ರಾಜಕೀಯ ಸಜ್ಜನಿಕೆ ಕಳೆದುಕೊಂಡಿದ್ದು, ಸಂಪೂರ್ಣ ಗುಲಾಮಗಿರಿಗೆ ಮನಸ್ಸುಗಳು ಹೊಂದಿಕೊಂಡಿವೆ. ಜಾತ್ಯತೀತ ಮನೋಭಾವ ಬೆಳಸಿಕೊಳ್ಳದ ಸ್ಥಿತಿಗೆ ಬದಲಾಗಿದ್ದೇವೆ’ ಎಂದು ದೂರಿದರು.