<p><strong>ಮೈಸೂರು</strong>: ‘ವಿಧಾನಪರಿಷತ್ತಿನ ಮೈಸೂರು– ಚಾಮರಾಜನಗರ ದ್ವಿಸದಸ್ಯ ಕ್ಷೇತ್ರದಲ್ಲಿ ಜೆಡಿಎಸ್ ಸೇರಿದಂತೆ ಯಾರೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ’ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.</p>.<p>ಇಲ್ಲಿನ ರಾಜೇಂದ್ರ ಕಲಾಮಂದಿರ ದಲ್ಲಿ ಭಾನುವಾರ ನಡೆದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಎಲ್ಲಿ ಜೆಡಿಎಸ್ ಸ್ಪರ್ಧಿಸಿಲ್ಲವೋ ಅಲ್ಲಿ ಮಾತ್ರ ಬೆಂಬಲ ಕೊಡಿ ಎಂದು ಕೇಳಿದ್ದೇವೆ. ಇದರಿಂದ ಮತದಾರರು ಗೊಂದಲಕ್ಕೆ ಒಳಗಾಗಬಾರದು. ಪ್ರಸ್ತುತ ಕ್ಷೇತ್ರದಲ್ಲಿ ಯಾರೊಂದಿಗೂ ಒಳ ಒಪ್ಪಂದವಾಗಲಿ, ಹೊರ ಒಪ್ಪಂದವಾಗಲಿ ಮಾಡಿಕೊಂಡಿಲ್ಲ’ ಎಂದು ಹೇಳಿದರು.</p>.<p>ಎಲ್ಲ ಗ್ರಾ.ಪಂ.ಗಳಲ್ಲಿ ಪ್ರಚಾರ ನಡೆಸಿರುವ ರಘು ಕೌಟಿಲ್ಯ ಈಗಾಗಲೇ ಗೆದ್ದಾಗಿದೆ. ಆದರೆ, ಮತದಾರರು ಪ್ರಥಮ ಪ್ರಾಶಸ್ತ್ಯದ ಮತಗಳನ್ನು ನೀಡುವ ಮೂಲಕ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.</p>.<p>ರಘು ಅವರು ಕೋವಿಡ್ ಸಮಯದಲ್ಲಿ ಸೇವಾ ಕಾರ್ಯಗಳಲ್ಲಿ ಹೆಚ್ಚು ಸಮಯ ತೊಡಗಿಸಿಕೊಂಡ ಕಾರಣ, ಪತ್ನಿಯನ್ನು ಸರಿಯಾಗಿ ನೋಡಿಕೊಳ್ಳಲಾಗದೇ ಕಳೆದುಕೊಳ್ಳ ಬೇಕಾಯಿತು ಎಂದು ಸ್ಮರಿಸಿದರು.</p>.<p>ಪ್ರತಿ ಚುನಾವಣೆಯಲ್ಲಿಯೂ 600ರಿಂದ 700 ಮತಗಳು ತಿರಸ್ಕೃತ ವಾಗುತ್ತಿವೆ. ಎಚ್ಚರಿಕೆಯಿಂದ ಮತದಾನ ಮಾಡಬೇಕು ಎಂದು ಕಿವಿಮಾತು ಹೇಳಿದರು.</p>.<p>‘ಬಿಜೆಪಿ 15– 16 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ‘ಮುಂದಿನ 15 ದಿನಗಳಲ್ಲಿ ಪ್ರತಿ ಕ್ಷೇತ್ರದಲ್ಲೂ ಪ್ರವಾಸ ಕಾರ್ಯ ನಡೆಸುತ್ತೇನೆ’ ಎಂದು ಪುನರುಚ್ಚರಿಸಿದರು.</p>.<p>‘ನಾನು ಕಣ್ಣೀರು ಹಾಕಿದ್ದು ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡಿದ್ದಕ್ಕೆ ಅಲ್ಲ. ಪುರಸಭೆ ಸದಸ್ಯನಾಗಿದ್ದ ನನ್ನನ್ನು ಮುಖ್ಯಮಂತ್ರಿ ಸ್ಥಾನಕ್ಕೇರಿಸಿದ ಜನರ ಬೆಂಬಲ ನೆನೆದು ನನ್ನ ಕಣ್ಣಿನಲ್ಲಿ ನೀರು ಬಂತು’ ಎಂದು ಹೇಳಿದರು.</p>.<p>ಶಾಸಕ ಎನ್.ಮಹೇಶ್ ಮಾತನಾಡಿ, ‘ಕಾಂಗ್ರೆಸ್ನವರು ಸುಮ್ಮನೆ ಬಾಯಿ ಚಪಲಕ್ಕೆ ಮಾತನಾಡಬಾರದು’ ಎಂದರು.</p>.<p>ಸಂಸದ ಪ್ರತಾಪಸಿಂಹ ಮಾತನಾಡಿ, ಜನಜೀವನ ಮಿಷನ್ ಸೇರಿದಂತೆ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳನ್ನು ಹಾಗೂ ಬಿ.ಎಸ್.ಯಡಿಯೂರಪ್ಪ ಅವರು ಜಾರಿಗೆ ತಂದ ವಿವಿಧ ಯೋಜನೆಗಳನ್ನು ವಿವರಿಸಿದರು.</p>.<p>ಪಕ್ಷದ ಅಭ್ಯರ್ಥಿ ರಘು ಆರ್. ಕೌಟಿಲ್ಯ ಮಾತನಾಡಿ, ‘ಗ್ರಾಮ ಪಂಚಾಯಿತಿ ಸದಸ್ಯರಿಗೆ ₹10 ಸಾವಿರ ಗೌರವಧನ, ಉಚಿತ ಬಸ್ ಪಾಸ್ ನೀಡಲು ಶ್ರಮಿಸುತ್ತೇನೆ. ಪ್ರತಿ ಗ್ರಾಮ ಪಂಚಾಯಿತಿಯ ಕಾವಲುಗಾರನಾಗಿ ಕಾರ್ಯನಿರ್ವಹಿಸುತ್ತೇನೆ’ ಎಂದು ಭರವಸೆ ನೀಡಿದರು.</p>.<p>ಕಾರ್ಯಕ್ರಮದಲ್ಲಿ ಪಕ್ಷದ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷೆ ಮಂಗಳಾ ಸೋಮಶೇಖರ್, ನಗರ ಘಟಕದ ಅಧ್ಯಕ್ಷ ಶ್ರೀವತ್ಸ, ರಾಜ್ಯ ಘಟಕದ ಉಪಾಧ್ಯಕ್ಷ ರಾಜೇಂದ್ರ, ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಮೇಯರ್ ಸುನಂದಾ ಫಾಲನೇತ್ರ, ಶಾಸಕರಾದ ಎಲ್.ನಾಗೇಂದ್ರ, ಹರ್ಷವರ್ಧನ್, ಮುಖಂಡರಾದ ವಿಜಯಶಂಕರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ವಿಧಾನಪರಿಷತ್ತಿನ ಮೈಸೂರು– ಚಾಮರಾಜನಗರ ದ್ವಿಸದಸ್ಯ ಕ್ಷೇತ್ರದಲ್ಲಿ ಜೆಡಿಎಸ್ ಸೇರಿದಂತೆ ಯಾರೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ’ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.</p>.<p>ಇಲ್ಲಿನ ರಾಜೇಂದ್ರ ಕಲಾಮಂದಿರ ದಲ್ಲಿ ಭಾನುವಾರ ನಡೆದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಎಲ್ಲಿ ಜೆಡಿಎಸ್ ಸ್ಪರ್ಧಿಸಿಲ್ಲವೋ ಅಲ್ಲಿ ಮಾತ್ರ ಬೆಂಬಲ ಕೊಡಿ ಎಂದು ಕೇಳಿದ್ದೇವೆ. ಇದರಿಂದ ಮತದಾರರು ಗೊಂದಲಕ್ಕೆ ಒಳಗಾಗಬಾರದು. ಪ್ರಸ್ತುತ ಕ್ಷೇತ್ರದಲ್ಲಿ ಯಾರೊಂದಿಗೂ ಒಳ ಒಪ್ಪಂದವಾಗಲಿ, ಹೊರ ಒಪ್ಪಂದವಾಗಲಿ ಮಾಡಿಕೊಂಡಿಲ್ಲ’ ಎಂದು ಹೇಳಿದರು.</p>.<p>ಎಲ್ಲ ಗ್ರಾ.ಪಂ.ಗಳಲ್ಲಿ ಪ್ರಚಾರ ನಡೆಸಿರುವ ರಘು ಕೌಟಿಲ್ಯ ಈಗಾಗಲೇ ಗೆದ್ದಾಗಿದೆ. ಆದರೆ, ಮತದಾರರು ಪ್ರಥಮ ಪ್ರಾಶಸ್ತ್ಯದ ಮತಗಳನ್ನು ನೀಡುವ ಮೂಲಕ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.</p>.<p>ರಘು ಅವರು ಕೋವಿಡ್ ಸಮಯದಲ್ಲಿ ಸೇವಾ ಕಾರ್ಯಗಳಲ್ಲಿ ಹೆಚ್ಚು ಸಮಯ ತೊಡಗಿಸಿಕೊಂಡ ಕಾರಣ, ಪತ್ನಿಯನ್ನು ಸರಿಯಾಗಿ ನೋಡಿಕೊಳ್ಳಲಾಗದೇ ಕಳೆದುಕೊಳ್ಳ ಬೇಕಾಯಿತು ಎಂದು ಸ್ಮರಿಸಿದರು.</p>.<p>ಪ್ರತಿ ಚುನಾವಣೆಯಲ್ಲಿಯೂ 600ರಿಂದ 700 ಮತಗಳು ತಿರಸ್ಕೃತ ವಾಗುತ್ತಿವೆ. ಎಚ್ಚರಿಕೆಯಿಂದ ಮತದಾನ ಮಾಡಬೇಕು ಎಂದು ಕಿವಿಮಾತು ಹೇಳಿದರು.</p>.<p>‘ಬಿಜೆಪಿ 15– 16 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ‘ಮುಂದಿನ 15 ದಿನಗಳಲ್ಲಿ ಪ್ರತಿ ಕ್ಷೇತ್ರದಲ್ಲೂ ಪ್ರವಾಸ ಕಾರ್ಯ ನಡೆಸುತ್ತೇನೆ’ ಎಂದು ಪುನರುಚ್ಚರಿಸಿದರು.</p>.<p>‘ನಾನು ಕಣ್ಣೀರು ಹಾಕಿದ್ದು ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡಿದ್ದಕ್ಕೆ ಅಲ್ಲ. ಪುರಸಭೆ ಸದಸ್ಯನಾಗಿದ್ದ ನನ್ನನ್ನು ಮುಖ್ಯಮಂತ್ರಿ ಸ್ಥಾನಕ್ಕೇರಿಸಿದ ಜನರ ಬೆಂಬಲ ನೆನೆದು ನನ್ನ ಕಣ್ಣಿನಲ್ಲಿ ನೀರು ಬಂತು’ ಎಂದು ಹೇಳಿದರು.</p>.<p>ಶಾಸಕ ಎನ್.ಮಹೇಶ್ ಮಾತನಾಡಿ, ‘ಕಾಂಗ್ರೆಸ್ನವರು ಸುಮ್ಮನೆ ಬಾಯಿ ಚಪಲಕ್ಕೆ ಮಾತನಾಡಬಾರದು’ ಎಂದರು.</p>.<p>ಸಂಸದ ಪ್ರತಾಪಸಿಂಹ ಮಾತನಾಡಿ, ಜನಜೀವನ ಮಿಷನ್ ಸೇರಿದಂತೆ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳನ್ನು ಹಾಗೂ ಬಿ.ಎಸ್.ಯಡಿಯೂರಪ್ಪ ಅವರು ಜಾರಿಗೆ ತಂದ ವಿವಿಧ ಯೋಜನೆಗಳನ್ನು ವಿವರಿಸಿದರು.</p>.<p>ಪಕ್ಷದ ಅಭ್ಯರ್ಥಿ ರಘು ಆರ್. ಕೌಟಿಲ್ಯ ಮಾತನಾಡಿ, ‘ಗ್ರಾಮ ಪಂಚಾಯಿತಿ ಸದಸ್ಯರಿಗೆ ₹10 ಸಾವಿರ ಗೌರವಧನ, ಉಚಿತ ಬಸ್ ಪಾಸ್ ನೀಡಲು ಶ್ರಮಿಸುತ್ತೇನೆ. ಪ್ರತಿ ಗ್ರಾಮ ಪಂಚಾಯಿತಿಯ ಕಾವಲುಗಾರನಾಗಿ ಕಾರ್ಯನಿರ್ವಹಿಸುತ್ತೇನೆ’ ಎಂದು ಭರವಸೆ ನೀಡಿದರು.</p>.<p>ಕಾರ್ಯಕ್ರಮದಲ್ಲಿ ಪಕ್ಷದ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷೆ ಮಂಗಳಾ ಸೋಮಶೇಖರ್, ನಗರ ಘಟಕದ ಅಧ್ಯಕ್ಷ ಶ್ರೀವತ್ಸ, ರಾಜ್ಯ ಘಟಕದ ಉಪಾಧ್ಯಕ್ಷ ರಾಜೇಂದ್ರ, ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಮೇಯರ್ ಸುನಂದಾ ಫಾಲನೇತ್ರ, ಶಾಸಕರಾದ ಎಲ್.ನಾಗೇಂದ್ರ, ಹರ್ಷವರ್ಧನ್, ಮುಖಂಡರಾದ ವಿಜಯಶಂಕರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>