ಈ ವೇಳೆ ಪತ್ರಕರ್ತರೊಂದಿಗೆ ಮಾತನಾಡಿದ ಜಮೀರ್, ‘ನನಗಂತೂ ಯಾವುದೇ ಆಫರ್ ಬಂದಿಲ್ಲ. ನಾನು ಅಲ್ಲಿಗೆ ಹೋಗಿದ್ದು, ತೆಲಂಗಾಣ ಮುಖ್ಯಮಂತ್ರಿಯನ್ನು ಭೇಟಿಯಾಗಿದ್ದು ಸತ್ಯ. ಆದರೆ, ₹ 500 ಕೋಟಿ ಆಫರ್ ಅನ್ನು ಯಾರೂ ನನಗೆ ಕೊಟ್ಟಿಲ್ಲ. ಆ ಬಗ್ಗೆ ಗೊತ್ತೂ ಇಲ್ಲ. ಅಲ್ಲಿನ ಕಾಂಗ್ರೆಸ್ ಅಧ್ಯಕ್ಷ ರೇವಂತ್ ರೆಡ್ಡಿ ನನಗೆ ಮುಖ್ಯಮಂತ್ರಿಯನ್ನು ಭೇಟಿ ಮಾಡಿಸಿದ್ದರು. ಅದು ಸೌಜನ್ಯದ ಭೇಟಿಯಾಗಿತ್ತು’ ಎಂದರು.