<p><strong>ಮೈಸೂರು/ಕೊಡಗು:</strong> ಮೈಸೂರು ಭಾಗದ ಜಿಲ್ಲೆಗಳಲ್ಲಿ ಮಂಗಳವಾರ ತಡರಾತ್ರಿ ಮತ್ತು ಕೊಡಗಿನಲ್ಲಿ ಬುಧವಾರ ಬುಧವಾರ ಉತ್ತಮ ಮಳೆಯಾಯಿತು. ಚಾಮರಾಜನಗರ ಜಿಲ್ಲೆಯಾದ್ಯಂತ ಸಾಧಾರಣ ಮಳೆಯಾದರೂ ಬಿರುಗಾಳಿಗೆ ಮರಗಳು ಉರುಳಿ ಬಿದ್ದಿವೆ. </p>. <p>ಮೈಸೂರು ನಗರದಲ್ಲಿ ರಾತ್ರಿ 11.30ರ ಸುಮಾರಿಗೆ ಮಳೆ ಆರಂಭ ಗೊಂಡು, ಒಂದು ಗಂಟೆಗೂ ಹೆಚ್ಚು ಕಾಲ ಸುರಿಯಿತು. 3–4 ದಿನಗಳಿಂದಲೂ ಸಾಧಾರಣ ಮಳೆಯಾಗುತ್ತಿದ್ದು, ಅಲ್ಲಲ್ಲಿ ರಾಶಿ ಹಾಕಲಾದ ರಾಗಿ ತೋಯ್ದು ಹಾನಿಯಾಗಿದೆ. ಸಾಕಷ್ಟು ಕಡೆ ಜಮೀನುಗಳಲ್ಲಿ ನೀರು ನಿಂತಿದೆ.</p>. <p>ಕಾವೇರಿ ನದಿ ಪಾತ್ರದಲ್ಲಿರುವ ತಿ.ನರಸೀಪುರ ತಾಲ್ಲೂಕಿನ ಕೆಂಡನ ಕೊಪ್ಪಲು, ಕೋಳಿಮಲ್ಲನ ಹುಂಡಿ ಹಾಗೂ ಸೋಸಲೆ ಗ್ರಾಮದ ಹಲವು ಜಮೀನುಗಳಿಗೆ ಮಳೆ ನೀರು ನುಗ್ಗಿದ್ದು, ಭತ್ತದ ನಾಟಿಗೆ ಹಿನ್ನಡೆ ಆಗಿದೆ.</p>. <p>ಕೊಡಗಿನ ವಿರಾಜಪೇಟೆ, ಸಿದ್ಧಾಪುರ ಶನಿವಾರಸಂತೆ, ನಾಪೋಕ್ಲು ವ್ಯಾಪ್ತಿಯಲ್ಲಿ ಬಿರುಸಿನ ಮಳೆಯಾಗಿದೆ. ಕಾಫಿ ಕೊಯ್ಲು ಮುಗಿದಿರುವ ತೋಟಗಳಲ್ಲಿ ಹೂವು ಅರಳಲು ಸಹಾಯಕವಾಗಿದೆ.</p>. <p>ಶಿವಮೊಗ್ಗ ವರದಿ: ಜಿಲ್ಲೆಯ ಮಲೆನಾಡು ಪ್ರದೇಶದ ಕೆಲವೆಡೆ ಬುಧವಾರ ಮಳೆ ಸುರಿದಿದೆ. ಬೇಸಿಗೆ ಆರಂಭದಲ್ಲಿಯೇ ಮಳೆಯ ಸಿಂಚನವಾಗಿದ್ದು, ತಂಪಾದ ವಾತಾವರಣ ಸೃಷ್ಟಿಸಿದೆ.</p>. <p>ಶಿವಮೊಗ್ಗ ಜಿಲ್ಲೆಯಲ್ಲಿ ಹೊಸನಗರ, ರಿಪ್ಪನ್ಪೇಟೆ, ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರು ಹಾಗೂ ಸಾಗರದಲ್ಲಿ ಮಳೆಯಾಗಿದೆ. ರಿಪ್ಪನ್ಪೇಟೆ ಸುತ್ತಮುತ್ತ ಜೋರು ಮಳೆ ಆಗಿದೆ.</p>. <h2><strong>ಮಂಗಳೂರು ವರದಿ: </strong></h2><h2></h2><p><strong>ಬೆಳ್ತಂಗಡಿ ತಾಲ್ಲೂಕಿನ ಕೆಲವೆಡೆ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು, ಬಾಳೆಹೊನ್ನೂರು, ಕೊಪ್ಪ </strong>ಭಾಗದಲ್ಲಿ ಬುಧವಾರ ಮಳೆ ಸುರಿಯಿತು.</p> .<h2>ಚಿಕ್ಕಮಗಳೂರು, ದ.ಕ ಕೆಲವೆಡೆ ಮಳೆ</h2><p>ಮಂಗಳೂರು: ಬೆಳ್ತಂಗಡಿ ತಾಲ್ಲೂಕಿನ ಕೆಲವೆಡೆ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು, ಬಾಳೆಹೊನ್ನೂರು, ಕೊಪ್ಪ ಭಾಗದಲ್ಲಿ ಬುಧವಾರ ಮಳೆ ಸುರಿಯಿತು.</p><p>ಬೆಳಿಗ್ಗೆಯಿಂದ ಮೋಡ ಕವಿದಿತ್ತು. ಮಳೆಯಿಂದ ವಾತಾವರಣದಲ್ಲಿ ಕೊಂಚ ತಂಪಿನ ಅನುಭವವಾಯಿತು.</p><p>ಹಲವೆಡೆ ಅಂಗಳದಲ್ಲಿ ಒಣಗಲು ಹಾಕಿದ್ದ ಅಡಕೆ ಮಳೆಗೆ ಒದ್ದೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು/ಕೊಡಗು:</strong> ಮೈಸೂರು ಭಾಗದ ಜಿಲ್ಲೆಗಳಲ್ಲಿ ಮಂಗಳವಾರ ತಡರಾತ್ರಿ ಮತ್ತು ಕೊಡಗಿನಲ್ಲಿ ಬುಧವಾರ ಬುಧವಾರ ಉತ್ತಮ ಮಳೆಯಾಯಿತು. ಚಾಮರಾಜನಗರ ಜಿಲ್ಲೆಯಾದ್ಯಂತ ಸಾಧಾರಣ ಮಳೆಯಾದರೂ ಬಿರುಗಾಳಿಗೆ ಮರಗಳು ಉರುಳಿ ಬಿದ್ದಿವೆ. </p>. <p>ಮೈಸೂರು ನಗರದಲ್ಲಿ ರಾತ್ರಿ 11.30ರ ಸುಮಾರಿಗೆ ಮಳೆ ಆರಂಭ ಗೊಂಡು, ಒಂದು ಗಂಟೆಗೂ ಹೆಚ್ಚು ಕಾಲ ಸುರಿಯಿತು. 3–4 ದಿನಗಳಿಂದಲೂ ಸಾಧಾರಣ ಮಳೆಯಾಗುತ್ತಿದ್ದು, ಅಲ್ಲಲ್ಲಿ ರಾಶಿ ಹಾಕಲಾದ ರಾಗಿ ತೋಯ್ದು ಹಾನಿಯಾಗಿದೆ. ಸಾಕಷ್ಟು ಕಡೆ ಜಮೀನುಗಳಲ್ಲಿ ನೀರು ನಿಂತಿದೆ.</p>. <p>ಕಾವೇರಿ ನದಿ ಪಾತ್ರದಲ್ಲಿರುವ ತಿ.ನರಸೀಪುರ ತಾಲ್ಲೂಕಿನ ಕೆಂಡನ ಕೊಪ್ಪಲು, ಕೋಳಿಮಲ್ಲನ ಹುಂಡಿ ಹಾಗೂ ಸೋಸಲೆ ಗ್ರಾಮದ ಹಲವು ಜಮೀನುಗಳಿಗೆ ಮಳೆ ನೀರು ನುಗ್ಗಿದ್ದು, ಭತ್ತದ ನಾಟಿಗೆ ಹಿನ್ನಡೆ ಆಗಿದೆ.</p>. <p>ಕೊಡಗಿನ ವಿರಾಜಪೇಟೆ, ಸಿದ್ಧಾಪುರ ಶನಿವಾರಸಂತೆ, ನಾಪೋಕ್ಲು ವ್ಯಾಪ್ತಿಯಲ್ಲಿ ಬಿರುಸಿನ ಮಳೆಯಾಗಿದೆ. ಕಾಫಿ ಕೊಯ್ಲು ಮುಗಿದಿರುವ ತೋಟಗಳಲ್ಲಿ ಹೂವು ಅರಳಲು ಸಹಾಯಕವಾಗಿದೆ.</p>. <p>ಶಿವಮೊಗ್ಗ ವರದಿ: ಜಿಲ್ಲೆಯ ಮಲೆನಾಡು ಪ್ರದೇಶದ ಕೆಲವೆಡೆ ಬುಧವಾರ ಮಳೆ ಸುರಿದಿದೆ. ಬೇಸಿಗೆ ಆರಂಭದಲ್ಲಿಯೇ ಮಳೆಯ ಸಿಂಚನವಾಗಿದ್ದು, ತಂಪಾದ ವಾತಾವರಣ ಸೃಷ್ಟಿಸಿದೆ.</p>. <p>ಶಿವಮೊಗ್ಗ ಜಿಲ್ಲೆಯಲ್ಲಿ ಹೊಸನಗರ, ರಿಪ್ಪನ್ಪೇಟೆ, ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರು ಹಾಗೂ ಸಾಗರದಲ್ಲಿ ಮಳೆಯಾಗಿದೆ. ರಿಪ್ಪನ್ಪೇಟೆ ಸುತ್ತಮುತ್ತ ಜೋರು ಮಳೆ ಆಗಿದೆ.</p>. <h2><strong>ಮಂಗಳೂರು ವರದಿ: </strong></h2><h2></h2><p><strong>ಬೆಳ್ತಂಗಡಿ ತಾಲ್ಲೂಕಿನ ಕೆಲವೆಡೆ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು, ಬಾಳೆಹೊನ್ನೂರು, ಕೊಪ್ಪ </strong>ಭಾಗದಲ್ಲಿ ಬುಧವಾರ ಮಳೆ ಸುರಿಯಿತು.</p> .<h2>ಚಿಕ್ಕಮಗಳೂರು, ದ.ಕ ಕೆಲವೆಡೆ ಮಳೆ</h2><p>ಮಂಗಳೂರು: ಬೆಳ್ತಂಗಡಿ ತಾಲ್ಲೂಕಿನ ಕೆಲವೆಡೆ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು, ಬಾಳೆಹೊನ್ನೂರು, ಕೊಪ್ಪ ಭಾಗದಲ್ಲಿ ಬುಧವಾರ ಮಳೆ ಸುರಿಯಿತು.</p><p>ಬೆಳಿಗ್ಗೆಯಿಂದ ಮೋಡ ಕವಿದಿತ್ತು. ಮಳೆಯಿಂದ ವಾತಾವರಣದಲ್ಲಿ ಕೊಂಚ ತಂಪಿನ ಅನುಭವವಾಯಿತು.</p><p>ಹಲವೆಡೆ ಅಂಗಳದಲ್ಲಿ ಒಣಗಲು ಹಾಕಿದ್ದ ಅಡಕೆ ಮಳೆಗೆ ಒದ್ದೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>