<p><strong>ಮೈಸೂರು:</strong> ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಬಿ.ಎ. ಪಾಟೀಲ ನೇತೃತ್ವದ ಏಕಸದಸ್ಯ ಸತ್ಯಶೋಧನಾ ಸಮಿತಿಯು ಬುಧವಾರ ಇಲ್ಲಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಹಲವರ ವಿಚಾರಣೆ ನಡೆಸಿತು.</p>.<p>ವಿಶ್ವವಿದ್ಯಾಲಯದ ಹಿಂದಿನ ಕುಲಸಚಿವರ (ಆಡಳಿತ) ವಿರುದ್ಧ ಲಂಚ, ಭ್ರಷ್ಟಾಚಾರದ ಆರೋಪವಿದ್ದು, ಅದರ ತನಿಖೆಗಾಗಿ ಸರ್ಕಾರವು ಬಿ.ಎ.ಪಾಟೀಲ ಅಧ್ಯಕ್ಷತೆಯ ಸಮಿತಿಯನ್ನು ಈಚೆಗೆ ರಚಿಸಿತ್ತು.</p>.<p>ವಾರದ ಹಿಂದಷ್ಟೇ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ ಅಗತ್ಯ ಮಾಹಿತಿ ಸಂಗ್ರಹಿಸಿದ್ದ ಸಮಿತಿಯು ವಿಚಾರಣೆಗೆ ಬರುವಂತೆ ಹಲವರಿಗೆ ನೋಟಿಸ್ ನೀಡಿತ್ತು. ಅವರನ್ನು ಬುಧವಾರ ವಿಚಾರಣೆಗೆ ಒಳಪಡಿಸಿತು. ಬೆಳಿಗ್ಗೆ 10.30ರಿಂದ ಸಂಜೆ 5ರವರೆಗೂ ವಿಚಾರಣೆ ನಡೆಯಿತು. 175 ಪುಟಕ್ಕೂ ಹೆಚ್ಚಿನ ದಾಖಲೆಗಳನ್ನು ಪರಿಶೀಲಿಸಿತು.</p>.<p>ಮಾಜಿ ಕುಲಸಚಿವ ಪ್ರೊ. ಕೆ.ಬಿ. ಪ್ರವೀಣ, ಕಾಯಂ ಅಧ್ಯಾಪಕರ ಸಂಘದ ಕಾರ್ಯದರ್ಶಿ ಜಗದೀಶ್ ಬಾಬು, ಬೋಧಕರೇತರ ಸಂಘದ ಕಾರ್ಯದರ್ಶಿ ಪ್ರದೀಪ್ಗಿರಿ, ಗೀತಾ, ಪುಟ್ಟಸ್ವಾಮಿ ಸೇರಿ ಹಲವರಿಂದ ಮಾಹಿತಿ ಸಂಗ್ರಹಿಸಲಾಯಿತು.</p>.<p>ಹಿಂದಿನ ಕುಲಸಚಿವರ ವಿರುದ್ಧ ಲಂಚ, ಭ್ರಷ್ಟಾಚಾರದ ಆರೋಪ ಹೊರಿಸಿ ವಿಶ್ವವಿದ್ಯಾಲಯದ ಸಿಬ್ಬಂದಿ ಕಳೆದ ವರ್ಷ ಪ್ರತಿಭಟನೆ ನಡೆಸಿದ್ದರು. ಇದು ವಿಧಾನಸಭೆಯಲ್ಲೂ ಚರ್ಚೆಯಾಗಿತ್ತು. ಸರ್ಕಾರವು ರಾಜ್ಯ ಉನ್ನತ ಶಿಕ್ಷಣ ಮಂಡಳಿ (ಕೆಎಸ್ಎಚ್ಇಸಿ) ಉಪಾಧ್ಯಕ್ಷ ಪ್ರೊ.ಎಸ್.ಆರ್. ನಿರಂಜನ ಅವರಿಂದ ತನಿಖೆ ಮಾಡಿಸಿತ್ತು.</p>.<p>ಪ್ರಾಥಮಿಕ ತನಿಖಾ ವರದಿಯಲ್ಲಿ ಅಕ್ರಮಗಳು ನಡೆದಿರುವುದು ಕಂಡುಬಂದ ಕಾರಣಕ್ಕೆ, ವರದಿಯ ಶಿಫಾರಸಿನಂತೆ ಕರಾಮುವಿವಿ ಕಾಯ್ದೆ 1992ರ ಸೆಕ್ಷನ್ 8ರ ಅಡಿಯಲ್ಲಿ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿದ್ದರು. ನಂತರ ಸರ್ಕಾರವು ಏಕ ಸದಸ್ಯ ಸತ್ಯಶೋಧನಾ ಸಮಿತಿಯನ್ನು ರಚಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಬಿ.ಎ. ಪಾಟೀಲ ನೇತೃತ್ವದ ಏಕಸದಸ್ಯ ಸತ್ಯಶೋಧನಾ ಸಮಿತಿಯು ಬುಧವಾರ ಇಲ್ಲಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಹಲವರ ವಿಚಾರಣೆ ನಡೆಸಿತು.</p>.<p>ವಿಶ್ವವಿದ್ಯಾಲಯದ ಹಿಂದಿನ ಕುಲಸಚಿವರ (ಆಡಳಿತ) ವಿರುದ್ಧ ಲಂಚ, ಭ್ರಷ್ಟಾಚಾರದ ಆರೋಪವಿದ್ದು, ಅದರ ತನಿಖೆಗಾಗಿ ಸರ್ಕಾರವು ಬಿ.ಎ.ಪಾಟೀಲ ಅಧ್ಯಕ್ಷತೆಯ ಸಮಿತಿಯನ್ನು ಈಚೆಗೆ ರಚಿಸಿತ್ತು.</p>.<p>ವಾರದ ಹಿಂದಷ್ಟೇ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ ಅಗತ್ಯ ಮಾಹಿತಿ ಸಂಗ್ರಹಿಸಿದ್ದ ಸಮಿತಿಯು ವಿಚಾರಣೆಗೆ ಬರುವಂತೆ ಹಲವರಿಗೆ ನೋಟಿಸ್ ನೀಡಿತ್ತು. ಅವರನ್ನು ಬುಧವಾರ ವಿಚಾರಣೆಗೆ ಒಳಪಡಿಸಿತು. ಬೆಳಿಗ್ಗೆ 10.30ರಿಂದ ಸಂಜೆ 5ರವರೆಗೂ ವಿಚಾರಣೆ ನಡೆಯಿತು. 175 ಪುಟಕ್ಕೂ ಹೆಚ್ಚಿನ ದಾಖಲೆಗಳನ್ನು ಪರಿಶೀಲಿಸಿತು.</p>.<p>ಮಾಜಿ ಕುಲಸಚಿವ ಪ್ರೊ. ಕೆ.ಬಿ. ಪ್ರವೀಣ, ಕಾಯಂ ಅಧ್ಯಾಪಕರ ಸಂಘದ ಕಾರ್ಯದರ್ಶಿ ಜಗದೀಶ್ ಬಾಬು, ಬೋಧಕರೇತರ ಸಂಘದ ಕಾರ್ಯದರ್ಶಿ ಪ್ರದೀಪ್ಗಿರಿ, ಗೀತಾ, ಪುಟ್ಟಸ್ವಾಮಿ ಸೇರಿ ಹಲವರಿಂದ ಮಾಹಿತಿ ಸಂಗ್ರಹಿಸಲಾಯಿತು.</p>.<p>ಹಿಂದಿನ ಕುಲಸಚಿವರ ವಿರುದ್ಧ ಲಂಚ, ಭ್ರಷ್ಟಾಚಾರದ ಆರೋಪ ಹೊರಿಸಿ ವಿಶ್ವವಿದ್ಯಾಲಯದ ಸಿಬ್ಬಂದಿ ಕಳೆದ ವರ್ಷ ಪ್ರತಿಭಟನೆ ನಡೆಸಿದ್ದರು. ಇದು ವಿಧಾನಸಭೆಯಲ್ಲೂ ಚರ್ಚೆಯಾಗಿತ್ತು. ಸರ್ಕಾರವು ರಾಜ್ಯ ಉನ್ನತ ಶಿಕ್ಷಣ ಮಂಡಳಿ (ಕೆಎಸ್ಎಚ್ಇಸಿ) ಉಪಾಧ್ಯಕ್ಷ ಪ್ರೊ.ಎಸ್.ಆರ್. ನಿರಂಜನ ಅವರಿಂದ ತನಿಖೆ ಮಾಡಿಸಿತ್ತು.</p>.<p>ಪ್ರಾಥಮಿಕ ತನಿಖಾ ವರದಿಯಲ್ಲಿ ಅಕ್ರಮಗಳು ನಡೆದಿರುವುದು ಕಂಡುಬಂದ ಕಾರಣಕ್ಕೆ, ವರದಿಯ ಶಿಫಾರಸಿನಂತೆ ಕರಾಮುವಿವಿ ಕಾಯ್ದೆ 1992ರ ಸೆಕ್ಷನ್ 8ರ ಅಡಿಯಲ್ಲಿ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿದ್ದರು. ನಂತರ ಸರ್ಕಾರವು ಏಕ ಸದಸ್ಯ ಸತ್ಯಶೋಧನಾ ಸಮಿತಿಯನ್ನು ರಚಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>