<p><strong>ಮೈಸೂರು</strong>: ಇಲ್ಲಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ 2009–10ನೇ ಸಾಲಿನಿಂದ 2015–16ರವರೆಗೆ ನಡೆದಿದೆ ಎನ್ನಲಾದ ಹಣ ದುರ್ಬಳಕೆ ಹಗರಣದ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡಿದ್ದು, ಸದ್ಯದಲ್ಲಿಯೇ ಅಧಿಕಾರಿಗಳ ತಂಡವು ತನಿಖೆಗೆಂದು ಮೈಸೂರಿಗೆ ಬರುವ ನಿರೀಕ್ಷೆ ಇದೆ.</p>.<p>ಅಧ್ಯಯನ ಕೇಂದ್ರಗಳ ಸ್ಥಾಪನೆ, ಪರೀಕ್ಷೆ, ವಿದ್ಯಾರ್ಥಿಗಳಿಂದ ಶುಲ್ಕ ಸಂಗ್ರಹ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಈ ಅವಧಿಯಲ್ಲಿ ₹250 ಕೋಟಿಯಷ್ಟು ಹಣ ದುರ್ಬಳಕೆ ಆಗಿರುವುದು ಕಂಡುಬಂದಿತ್ತು. ಈ ಕುರಿತು 2022ರ ಫೆಬ್ರುವರಿಯಲ್ಲಿ ವಿಶ್ವವಿದ್ಯಾಲಯದ ಕುಲಸಚಿವರ ಪತ್ರ ಹಾಗೂ ವಿ.ವಿ.ಯ ಆಡಳಿತ ಮಂಡಳಿಯ ಸಭೆಯ ನಿರ್ಣಯ ಆಧರಿಸಿ ರಾಜ್ಯಪಾಲರು ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದ್ದರು.</p>.<p>ಅದರಂತೆ ರಾಜ್ಯ ಸರ್ಕಾರವು ಈ ವರ್ಷ ಮಾರ್ಚ್ 13ರಂದು ಸಿಬಿಐ ತನಿಖೆಗೆ ಆದೇಶಿಸಿತ್ತು. ಸಂಬಂಧಿಸಿದ ಅಧಿಕಾರಿಗಳು, ಲೆಕ್ಕ ಪರಿಶೋಧಕರು, ಬ್ಯಾಂಕುಗಳು ಸಿಬಿಐಗೆ ಅಗತ್ಯ ಮಾಹಿತಿ ಒದಗಿಸುವಂತೆ ಸೂಚಿಸಿತ್ತು. ಸಿಬಿಐ ಅಧಿಕಾರಿಗಳು ಸದ್ಯ ಪ್ರಕರಣದ ತನಿಖೆ ಯನ್ನು ಆರಂಭಿಸಿದ್ದು, ಸಂಬಂಧಿಸಿದ ಎಲ್ಲರಿಗೆ ನೋಟಿಸ್ ನೀಡಿದ್ದಾರೆ ಎಂದು <br>ತಿಳಿದುಬಂದಿದೆ.</p>.<p>ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಕೆಎಸ್ಒಯು ಕುಲಸಚಿವ ಕೆಎನ್ಎನ್ ಮೂರ್ತಿ ‘ಸಿಬಿಐ ತನಿಖೆ ಸಂಬಂಧ ಈವರೆಗೆ ನೋಟಿಸ್ ಬಂದಿಲ್ಲ. ಬಂದರೆ ಅಗತ್ಯ ಮಾಹಿತಿ ಒದಗಿಸುತ್ತೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ಇಲ್ಲಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ 2009–10ನೇ ಸಾಲಿನಿಂದ 2015–16ರವರೆಗೆ ನಡೆದಿದೆ ಎನ್ನಲಾದ ಹಣ ದುರ್ಬಳಕೆ ಹಗರಣದ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡಿದ್ದು, ಸದ್ಯದಲ್ಲಿಯೇ ಅಧಿಕಾರಿಗಳ ತಂಡವು ತನಿಖೆಗೆಂದು ಮೈಸೂರಿಗೆ ಬರುವ ನಿರೀಕ್ಷೆ ಇದೆ.</p>.<p>ಅಧ್ಯಯನ ಕೇಂದ್ರಗಳ ಸ್ಥಾಪನೆ, ಪರೀಕ್ಷೆ, ವಿದ್ಯಾರ್ಥಿಗಳಿಂದ ಶುಲ್ಕ ಸಂಗ್ರಹ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಈ ಅವಧಿಯಲ್ಲಿ ₹250 ಕೋಟಿಯಷ್ಟು ಹಣ ದುರ್ಬಳಕೆ ಆಗಿರುವುದು ಕಂಡುಬಂದಿತ್ತು. ಈ ಕುರಿತು 2022ರ ಫೆಬ್ರುವರಿಯಲ್ಲಿ ವಿಶ್ವವಿದ್ಯಾಲಯದ ಕುಲಸಚಿವರ ಪತ್ರ ಹಾಗೂ ವಿ.ವಿ.ಯ ಆಡಳಿತ ಮಂಡಳಿಯ ಸಭೆಯ ನಿರ್ಣಯ ಆಧರಿಸಿ ರಾಜ್ಯಪಾಲರು ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದ್ದರು.</p>.<p>ಅದರಂತೆ ರಾಜ್ಯ ಸರ್ಕಾರವು ಈ ವರ್ಷ ಮಾರ್ಚ್ 13ರಂದು ಸಿಬಿಐ ತನಿಖೆಗೆ ಆದೇಶಿಸಿತ್ತು. ಸಂಬಂಧಿಸಿದ ಅಧಿಕಾರಿಗಳು, ಲೆಕ್ಕ ಪರಿಶೋಧಕರು, ಬ್ಯಾಂಕುಗಳು ಸಿಬಿಐಗೆ ಅಗತ್ಯ ಮಾಹಿತಿ ಒದಗಿಸುವಂತೆ ಸೂಚಿಸಿತ್ತು. ಸಿಬಿಐ ಅಧಿಕಾರಿಗಳು ಸದ್ಯ ಪ್ರಕರಣದ ತನಿಖೆ ಯನ್ನು ಆರಂಭಿಸಿದ್ದು, ಸಂಬಂಧಿಸಿದ ಎಲ್ಲರಿಗೆ ನೋಟಿಸ್ ನೀಡಿದ್ದಾರೆ ಎಂದು <br>ತಿಳಿದುಬಂದಿದೆ.</p>.<p>ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಕೆಎಸ್ಒಯು ಕುಲಸಚಿವ ಕೆಎನ್ಎನ್ ಮೂರ್ತಿ ‘ಸಿಬಿಐ ತನಿಖೆ ಸಂಬಂಧ ಈವರೆಗೆ ನೋಟಿಸ್ ಬಂದಿಲ್ಲ. ಬಂದರೆ ಅಗತ್ಯ ಮಾಹಿತಿ ಒದಗಿಸುತ್ತೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>