<p><strong>ಹಂಪಾಪುರ</strong>: ಪತಿ ಮೃತಪಟ್ಟ ಮಾರನೇ ದಿನವೇ ಶಿಕ್ಷಕಿಯೊಬ್ಬರು ಶಾಲೆಗೆ ಹಾಜರಾಗಿ ಕರ್ತವ್ಯ ನಿರ್ವಹಿಸಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.</p>.<p>ಸಮೀಪದ ಜಿ.ಬಿ. ಸರಗೂರು ಸರ್ಕಾರಿ ಪ್ರೌಢಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ಜ್ಯೋತಿ ಅವರ ಪತಿ ಕಿರಣ್ ಕುಮಾರ್ (47) ಮಾರ್ಚ್ 25 ರಂದು ಮೃತಪಟ್ಟರು. ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಗಣಿತ ವಿಷಯದ ಪರೀಕ್ಷೆ ಇದ್ದುದರಿಂದ ವಿದ್ಯಾರ್ಥಿಗಳ ಭವಿಷ್ಯಕ್ಕೋಸ್ಕರ ದುಃಖದ ಮಡುವಿನಲಿದ್ದರೂ ಜ್ಯೋತಿ ಮರುದಿನವೇ ಶಾಲೆಗೆ ಹಾಜರಾಗಿ ಗಣಿತ ವಿಷಯದ ಬಗ್ಗೆ ಮಕ್ಕಳಿಗೆ ಪೂರ್ವ ಸಿದ್ಧತೆ ಮಾಡಿಸಿದ್ದಾರೆ. </p>.<p>ಗಣಿತದಲ್ಲಿ ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆಯಾಗಬೇಕೆಂಬ ಆಶಯದೊಂದಿಗೆ ತನ್ನ ಪತಿ ಸಾವಿನ ನೋವಿನಲ್ಲೂ ಎಸ್ಎಸ್ಎಲ್ಸಿ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಕರ್ತವ್ಯಕ್ಕೆ ಹಾಜರಾಗಿ ವಿದ್ಯಾರ್ಥಿಗಳಿಗೆ ಗಣಿತ ಮಾರ್ಗದರ್ಶನ ನೀಡಿದರು.</p>.<p>ಪೋಷಕರು, ಸಾರ್ವಜನಿಕರು ಹಾಗೂ ಶಾಲೆಯ ಹಳೆಯ ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿಗಳು ಜ್ಯೋತಿ ಅವರ ಕಾರ್ಯಕ್ಕೆ ಗೌರವ ಮತ್ತು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.</p>.<p>ವಿಷಯ ತಿಳಿದು ಶಾಲೆಗೆ ಭೇಟಿ ನೀಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎನ್. ರಾಜು ಅವರು ಜ್ಯೋತಿ ಅವರಿಗೆ ಸಾಂತ್ವನ ಹೇಳಿ ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>‘ನಾನು ಪತಿಯ ಸಾವಿನ ನೋವಿನಲ್ಲಿರುವುದು ನಿಜ. ಆದರೆ, ಸತ್ತವರಿಗಿಂತ ಬದುಕಿರುವ ಮಕ್ಕಳ ಬಗ್ಗೆ ಯೋಚನೆ ಮಾಡಿದರೆ ಹತ್ತಾರು ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಹಕಾರಿಯಾಗುತ್ತದೆ. ಈ ಮಕ್ಕಳ ಬಗ್ಗೆ ಸಾಕಷ್ಟು ಕನಸು ಕಂಡಿದ್ದೇನೆ. ನನ್ನ ಗೈರು ಅವರ ಭವಿಷ್ಯಕ್ಕೆ ಅಡ್ಡಿಯಾಗಬಾರದು, ವರ್ಷ ಪೂರ್ತಿ ಮಕ್ಕಳು ಹಾಕಿದ ಶ್ರಮ ಈ ಒಂದು ದಿನದಿಂದ ಹಾಳಗಬಾರದು ಎನ್ನುವ ಉದ್ದೇಶದಿಂದ, ಮನೆಯಲ್ಲಿ ಇದ್ದರೆ ದುಃಖ ಇನ್ನೂ ಜಾಸ್ತಿ ಆಗುತ್ತದೆಯೇ ಹೊರತು ಕಡೆಮೆಯಾಗಲ್ಲ. ಆದ್ದರಿಂದ ಶಾಲೆಗೆ ಹಾಜರಾದೆ’ ಎಂದು ಶಿಕ್ಷಕಿ ಜ್ಯೋತಿ ಪ್ರತಿಕ್ರಿಯಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಂಪಾಪುರ</strong>: ಪತಿ ಮೃತಪಟ್ಟ ಮಾರನೇ ದಿನವೇ ಶಿಕ್ಷಕಿಯೊಬ್ಬರು ಶಾಲೆಗೆ ಹಾಜರಾಗಿ ಕರ್ತವ್ಯ ನಿರ್ವಹಿಸಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.</p>.<p>ಸಮೀಪದ ಜಿ.ಬಿ. ಸರಗೂರು ಸರ್ಕಾರಿ ಪ್ರೌಢಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ಜ್ಯೋತಿ ಅವರ ಪತಿ ಕಿರಣ್ ಕುಮಾರ್ (47) ಮಾರ್ಚ್ 25 ರಂದು ಮೃತಪಟ್ಟರು. ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಗಣಿತ ವಿಷಯದ ಪರೀಕ್ಷೆ ಇದ್ದುದರಿಂದ ವಿದ್ಯಾರ್ಥಿಗಳ ಭವಿಷ್ಯಕ್ಕೋಸ್ಕರ ದುಃಖದ ಮಡುವಿನಲಿದ್ದರೂ ಜ್ಯೋತಿ ಮರುದಿನವೇ ಶಾಲೆಗೆ ಹಾಜರಾಗಿ ಗಣಿತ ವಿಷಯದ ಬಗ್ಗೆ ಮಕ್ಕಳಿಗೆ ಪೂರ್ವ ಸಿದ್ಧತೆ ಮಾಡಿಸಿದ್ದಾರೆ. </p>.<p>ಗಣಿತದಲ್ಲಿ ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆಯಾಗಬೇಕೆಂಬ ಆಶಯದೊಂದಿಗೆ ತನ್ನ ಪತಿ ಸಾವಿನ ನೋವಿನಲ್ಲೂ ಎಸ್ಎಸ್ಎಲ್ಸಿ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಕರ್ತವ್ಯಕ್ಕೆ ಹಾಜರಾಗಿ ವಿದ್ಯಾರ್ಥಿಗಳಿಗೆ ಗಣಿತ ಮಾರ್ಗದರ್ಶನ ನೀಡಿದರು.</p>.<p>ಪೋಷಕರು, ಸಾರ್ವಜನಿಕರು ಹಾಗೂ ಶಾಲೆಯ ಹಳೆಯ ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿಗಳು ಜ್ಯೋತಿ ಅವರ ಕಾರ್ಯಕ್ಕೆ ಗೌರವ ಮತ್ತು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.</p>.<p>ವಿಷಯ ತಿಳಿದು ಶಾಲೆಗೆ ಭೇಟಿ ನೀಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎನ್. ರಾಜು ಅವರು ಜ್ಯೋತಿ ಅವರಿಗೆ ಸಾಂತ್ವನ ಹೇಳಿ ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>‘ನಾನು ಪತಿಯ ಸಾವಿನ ನೋವಿನಲ್ಲಿರುವುದು ನಿಜ. ಆದರೆ, ಸತ್ತವರಿಗಿಂತ ಬದುಕಿರುವ ಮಕ್ಕಳ ಬಗ್ಗೆ ಯೋಚನೆ ಮಾಡಿದರೆ ಹತ್ತಾರು ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಹಕಾರಿಯಾಗುತ್ತದೆ. ಈ ಮಕ್ಕಳ ಬಗ್ಗೆ ಸಾಕಷ್ಟು ಕನಸು ಕಂಡಿದ್ದೇನೆ. ನನ್ನ ಗೈರು ಅವರ ಭವಿಷ್ಯಕ್ಕೆ ಅಡ್ಡಿಯಾಗಬಾರದು, ವರ್ಷ ಪೂರ್ತಿ ಮಕ್ಕಳು ಹಾಕಿದ ಶ್ರಮ ಈ ಒಂದು ದಿನದಿಂದ ಹಾಳಗಬಾರದು ಎನ್ನುವ ಉದ್ದೇಶದಿಂದ, ಮನೆಯಲ್ಲಿ ಇದ್ದರೆ ದುಃಖ ಇನ್ನೂ ಜಾಸ್ತಿ ಆಗುತ್ತದೆಯೇ ಹೊರತು ಕಡೆಮೆಯಾಗಲ್ಲ. ಆದ್ದರಿಂದ ಶಾಲೆಗೆ ಹಾಜರಾದೆ’ ಎಂದು ಶಿಕ್ಷಕಿ ಜ್ಯೋತಿ ಪ್ರತಿಕ್ರಿಯಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>