ಪಿರಿಯಾಪಟ್ಟಣ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ಸಾವಿರಾರು ಭಕ್ತಾದಿಗಳು ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ದೇವಾಲಯ ಭಕ್ತರ ಸಮಿತಿ ವತಿಯಿಂದ ಪ್ರತಿ ವರ್ಷ ಕಡೆ ಕಾರ್ತಿಕ ಸೋಮವಾರದಂದು ದೇವಾಲಯದಲ್ಲಿ ವಿಶೇಷ ಪೂಜೆ ನಡೆಸಿ ಭಕ್ತರಿಗೆ ಅನ್ನ ಸಂತರ್ಪಣೆ ಮಾಡುವುದು ಅನಾದಿ ಕಾಲದಿಂದ ನಡೆದುಕೊಂಡು ಬಂದ ಪದ್ಧತಿಯಾಗಿದೆ.