<p><strong>ಮಳವಳ್ಳಿ (ಮಂಡ್ಯ ಜಿಲ್ಲೆ):</strong> ‘ಕೆಆರ್ಎಸ್ ಜಲಾಶಯದ ಬಳಿ ಕಾವೇರಿ ಆರತಿ ಕಾರ್ಯಕ್ರಮವನ್ನು ನಿಲ್ಲಿಸಲಾಗದು’ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.</p>.<p>ತಾಲ್ಲೂಕಿನ ಶಿವನಸಮುದ್ರ ಬಳಿ ಭಾನುವಾರ ‘ಗಗನಚುಕ್ಕಿ ಜಲಪಾತೋತ್ಸವ’ದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಕಾವೇರಿ ಆರತಿಗೆ ವಿರೋಧ ವ್ಯಕ್ತಪಡಿಸಿ ರೈತ ಸಂಘದ ಕೆಲವರು ನ್ಯಾಯಾಲಯಕ್ಕೆ ಹೋಗಿದ್ದಾರೆ. ಆದರೆ ಪ್ರಕೃತಿ ಮಾತೆಗೆ ಪೂಜೆ, ಆರತಿ ಮಾಡುವುದನ್ನು ಯಾರಿಂದಲೂ ನಿಲ್ಲಿಸಲು ಸಾಧ್ಯವಿಲ್ಲ’ ಎಂದರು.</p>.<p>‘ಎರಡು ವರ್ಷಗಳಲ್ಲೇ ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ ₹ 2ಸಾವಿರ ಕೋಟಿ ಅನುದಾನ ನೀಡಿದ್ದೇವೆ. ಇದುವರೆಗೆ ₹ 1,970 ಕೋಟಿ ಮೊತ್ತದ ಕಾಮಗಾರಿ ಮಂಜೂರಾಗಿವೆ. ಇದು ಸುಳ್ಳಾದರೆ ವಿರೋಧ ಪಕ್ಷದವರು ಬಂದು ಪರಿಶೀಲಿಸಲಿ’ ಎಂದು ಸವಾಲೆಸೆದರು.</p>.<p>‘ಮಂಡ್ಯ ಹಾಗೂ ಬೆಂಗಳೂರು ದಕ್ಷಿಣ ಜಿಲ್ಲೆಗಳು ನನ್ನ ಕಣ್ಣುಗಳಿದ್ದಂತೆ. ರೈತರ ಬದುಕು ಸುಧಾರಣೆಗೆ ಹಾಗೂ ಅಭಿವೃದ್ಧಿಗೆ ಎಲ್ಲ ರೀತಿಯ ಕಾಯಕ್ರಮ ರೂಪಿಸಲು ಸರ್ಕಾರ ಬದ್ಧವಾಗಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಳವಳ್ಳಿ (ಮಂಡ್ಯ ಜಿಲ್ಲೆ):</strong> ‘ಕೆಆರ್ಎಸ್ ಜಲಾಶಯದ ಬಳಿ ಕಾವೇರಿ ಆರತಿ ಕಾರ್ಯಕ್ರಮವನ್ನು ನಿಲ್ಲಿಸಲಾಗದು’ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.</p>.<p>ತಾಲ್ಲೂಕಿನ ಶಿವನಸಮುದ್ರ ಬಳಿ ಭಾನುವಾರ ‘ಗಗನಚುಕ್ಕಿ ಜಲಪಾತೋತ್ಸವ’ದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಕಾವೇರಿ ಆರತಿಗೆ ವಿರೋಧ ವ್ಯಕ್ತಪಡಿಸಿ ರೈತ ಸಂಘದ ಕೆಲವರು ನ್ಯಾಯಾಲಯಕ್ಕೆ ಹೋಗಿದ್ದಾರೆ. ಆದರೆ ಪ್ರಕೃತಿ ಮಾತೆಗೆ ಪೂಜೆ, ಆರತಿ ಮಾಡುವುದನ್ನು ಯಾರಿಂದಲೂ ನಿಲ್ಲಿಸಲು ಸಾಧ್ಯವಿಲ್ಲ’ ಎಂದರು.</p>.<p>‘ಎರಡು ವರ್ಷಗಳಲ್ಲೇ ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ ₹ 2ಸಾವಿರ ಕೋಟಿ ಅನುದಾನ ನೀಡಿದ್ದೇವೆ. ಇದುವರೆಗೆ ₹ 1,970 ಕೋಟಿ ಮೊತ್ತದ ಕಾಮಗಾರಿ ಮಂಜೂರಾಗಿವೆ. ಇದು ಸುಳ್ಳಾದರೆ ವಿರೋಧ ಪಕ್ಷದವರು ಬಂದು ಪರಿಶೀಲಿಸಲಿ’ ಎಂದು ಸವಾಲೆಸೆದರು.</p>.<p>‘ಮಂಡ್ಯ ಹಾಗೂ ಬೆಂಗಳೂರು ದಕ್ಷಿಣ ಜಿಲ್ಲೆಗಳು ನನ್ನ ಕಣ್ಣುಗಳಿದ್ದಂತೆ. ರೈತರ ಬದುಕು ಸುಧಾರಣೆಗೆ ಹಾಗೂ ಅಭಿವೃದ್ಧಿಗೆ ಎಲ್ಲ ರೀತಿಯ ಕಾಯಕ್ರಮ ರೂಪಿಸಲು ಸರ್ಕಾರ ಬದ್ಧವಾಗಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>