<p><strong>ಮೈಸೂರು:</strong> ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತವರಿನಲ್ಲಿ ಶುಕ್ರವಾರ ಮಧ್ಯಾಹ್ನದಿಂದ ರಾತ್ರಿ 9.35ರವರೆಗೂ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದರು.</p><p>‘ನಾನು ಮೈಸೂರಿಗೆ ಬಂದಾಗಲೆಲ್ಲಾ ಜನ ಸಣ್ಣ-ಪುಟ್ಟ ಸಮಸ್ಯೆಗಳಿಗೂ ನನ್ನ ಬಳಿಗೆ ಬರುತ್ತಾರೆ. ಇದರ ಅರ್ಥವೇನು? ಅಧಿಕಾರಿಗಳು ಸರಿಯಾಗಿ ಕೆಲಸ ಮಾಡಿದ್ದರೆ ಜನ ನನ್ನ ಬಳಿಗೆ ನೂರಾರು ಸಂಖ್ಯೆಯಲ್ಲಿ ಏಕೆ ಬರುತ್ತಿದ್ದರು’ ಎಂದು ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಪ್ರಶ್ನಿಸಿದರು.</p><p>‘ಅಧಿಕಾರಿಗಳು ಆಸ್ಪತ್ರೆ, ಹಾಸ್ಟೆಲ್, ಬಾರ್ಗಳು ಮೊದಲಾದ ಕಡೆಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸುವುದು ನಿಲ್ಲಿಸಿದ್ದೀರಿ. ಹೀಗಾಗಿ ಭಯ ಇಲ್ಲವಾಗಿದೆ. ದಿಢೀರ್ ಭೇಟಿ ನೀಡಿ ಗುಣಮಟ್ಟ ಪರಿಶೀಲಿಸಬೇಕು; ನಿಯಮ ಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು’ ಎಂದು ಸೂಚಿಸಿದರು.</p><p>‘ಮೈಸೂರು ನನ್ನ ಜಿಲ್ಲೆ. ಇದು ಉಳಿದ ಜಿಲ್ಲೆಗಳಿಗೆ ಮಾದರಿ ಆಗಬೇಕು. ಈ ಜವಾಬ್ದಾರಿಯನ್ನು ಜಿಲ್ಲಾ ಮಟ್ಟದ ಅಧಿಕಾರಿಗಳು ತೆಗೆದುಕೊಳ್ಳಬೇಕು. ಬಹಳ ವರ್ಷಗಳಿಂದ ಬಾಕಿ ಇರುವ ಫೈಲ್ಗಳನ್ನು ಪರಿಶೀಲಿಸಬೇಕು. ಏಕೆ ವಿಲೇವಾರಿ ಮಾಡುತ್ತಿಲ್ಲ? ಮೂರು, ನಾಲ್ಕು ಹಾಗೂ ಐದು ವರ್ಷಗಳ ಕಡತಗಳೂ ಏಕೆ ಬಾಕಿ ಇವೆ? ಏಕೆ ಇತ್ಯರ್ಥ ಮಾಡುತ್ತಿಲ್ಲ’ ಎಂದು ಕೇಳಿದರು.</p><p>‘ವಿಭಾಗೀಯ ಅಧಿಕಾರಿಗಳು ಚುರುಕಾಗಿದ್ದರೆ ಜಿಲ್ಲಾ ಮಟ್ಟದ ಅಧಿಕಾರಿಗಳೂ ಅಲರ್ಟ್ ಆಗಿರುತ್ತಾರೆ. ಕಚೇರಿ ಬಾಗಿಲಿಗೆ ಬರುವ ರೈತರನ್ನು ಲಘುವಾಗಿ ನೋಡುವುದನ್ನು ನಾನು ಸಹಿಸುವುದಿಲ್ಲ. ಬಹಳ ಮಂದಿ ಅಧಿಕಾರಿಗಳು ಕಚೇರಿಯಲ್ಲೇ ಇರುವುದಿಲ್ಲ; ಪಿಡಿಒಗಳು ತಾಲ್ಲೂಕು ಕೇಂದ್ರದಲ್ಲೂ ಇರುವುದಿಲ್ಲ ಎನ್ನುವ ದೂರುಗಳೂ ನನಗೆ ಬರುತ್ತಿವೆ. ವೈದ್ಯರು ಕರ್ತವ್ಯದ ಸ್ಥಳದಲ್ಲಿ ನೆಲೆಸುತ್ತಿಲ್ಲ. ದೂರದ ಊರಿಂದ ಓಡಾಡುತ್ತಿದ್ದಾರೆ. ಇದನ್ನು ಸಹಿಸಬೇಕಾ’ ಎಂದು ಪ್ರಶ್ನಿಸಿದರು.</p><p>‘ಹೊಣೆಗಾರಿಕೆಗಳನ್ನು ನೀವು ಸೂಕ್ತವಾಗಿ ನಿರ್ವಹಿಸಿದರೆ, ಸಮಸ್ಯೆಗಳನ್ನು ಬಗೆಹರಿಸುವುದು ಕಷ್ಟವೇನಲ್ಲ. ನಿಮ್ಮ ಹಂತದಲ್ಲೇ ಬಗೆಹರಿಯುವ ಸಮಸ್ಯೆಗಳನ್ನು ಉದಾಸೀನ ಮಾಡದೆ ಪರಿಹರಿಸಬೇಕು. ಜನ ನನ್ನ ಬಳಿಗೆ ಬರುತ್ತಿದ್ದಾರೆ ಎಂದರೆ ನಿಮ್ಮ ಹಂತದಲ್ಲಿ ಕೆಲಸಗಳು ಆಗುತ್ತಿಲ್ಲ ಎಂದೇ ಅರ್ಥ; ನೀವು ಜನರ ಪರವಾಗಿ ಇಲ್ಲ ಎಂದೇ ಅರ್ಥ. ಕೆಲಸವನ್ನು ಗಂಭೀರವಾಗಿ ಪರಿಗಣಿಸಿ ಜನರ ಸಮಸ್ಯೆ ಪರಿಹರಿಸಬೇಕು’ ಎಂದು ತಾಕೀತು ಮಾಡಿದರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತವರಿನಲ್ಲಿ ಶುಕ್ರವಾರ ಮಧ್ಯಾಹ್ನದಿಂದ ರಾತ್ರಿ 9.35ರವರೆಗೂ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದರು.</p><p>‘ನಾನು ಮೈಸೂರಿಗೆ ಬಂದಾಗಲೆಲ್ಲಾ ಜನ ಸಣ್ಣ-ಪುಟ್ಟ ಸಮಸ್ಯೆಗಳಿಗೂ ನನ್ನ ಬಳಿಗೆ ಬರುತ್ತಾರೆ. ಇದರ ಅರ್ಥವೇನು? ಅಧಿಕಾರಿಗಳು ಸರಿಯಾಗಿ ಕೆಲಸ ಮಾಡಿದ್ದರೆ ಜನ ನನ್ನ ಬಳಿಗೆ ನೂರಾರು ಸಂಖ್ಯೆಯಲ್ಲಿ ಏಕೆ ಬರುತ್ತಿದ್ದರು’ ಎಂದು ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಪ್ರಶ್ನಿಸಿದರು.</p><p>‘ಅಧಿಕಾರಿಗಳು ಆಸ್ಪತ್ರೆ, ಹಾಸ್ಟೆಲ್, ಬಾರ್ಗಳು ಮೊದಲಾದ ಕಡೆಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸುವುದು ನಿಲ್ಲಿಸಿದ್ದೀರಿ. ಹೀಗಾಗಿ ಭಯ ಇಲ್ಲವಾಗಿದೆ. ದಿಢೀರ್ ಭೇಟಿ ನೀಡಿ ಗುಣಮಟ್ಟ ಪರಿಶೀಲಿಸಬೇಕು; ನಿಯಮ ಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು’ ಎಂದು ಸೂಚಿಸಿದರು.</p><p>‘ಮೈಸೂರು ನನ್ನ ಜಿಲ್ಲೆ. ಇದು ಉಳಿದ ಜಿಲ್ಲೆಗಳಿಗೆ ಮಾದರಿ ಆಗಬೇಕು. ಈ ಜವಾಬ್ದಾರಿಯನ್ನು ಜಿಲ್ಲಾ ಮಟ್ಟದ ಅಧಿಕಾರಿಗಳು ತೆಗೆದುಕೊಳ್ಳಬೇಕು. ಬಹಳ ವರ್ಷಗಳಿಂದ ಬಾಕಿ ಇರುವ ಫೈಲ್ಗಳನ್ನು ಪರಿಶೀಲಿಸಬೇಕು. ಏಕೆ ವಿಲೇವಾರಿ ಮಾಡುತ್ತಿಲ್ಲ? ಮೂರು, ನಾಲ್ಕು ಹಾಗೂ ಐದು ವರ್ಷಗಳ ಕಡತಗಳೂ ಏಕೆ ಬಾಕಿ ಇವೆ? ಏಕೆ ಇತ್ಯರ್ಥ ಮಾಡುತ್ತಿಲ್ಲ’ ಎಂದು ಕೇಳಿದರು.</p><p>‘ವಿಭಾಗೀಯ ಅಧಿಕಾರಿಗಳು ಚುರುಕಾಗಿದ್ದರೆ ಜಿಲ್ಲಾ ಮಟ್ಟದ ಅಧಿಕಾರಿಗಳೂ ಅಲರ್ಟ್ ಆಗಿರುತ್ತಾರೆ. ಕಚೇರಿ ಬಾಗಿಲಿಗೆ ಬರುವ ರೈತರನ್ನು ಲಘುವಾಗಿ ನೋಡುವುದನ್ನು ನಾನು ಸಹಿಸುವುದಿಲ್ಲ. ಬಹಳ ಮಂದಿ ಅಧಿಕಾರಿಗಳು ಕಚೇರಿಯಲ್ಲೇ ಇರುವುದಿಲ್ಲ; ಪಿಡಿಒಗಳು ತಾಲ್ಲೂಕು ಕೇಂದ್ರದಲ್ಲೂ ಇರುವುದಿಲ್ಲ ಎನ್ನುವ ದೂರುಗಳೂ ನನಗೆ ಬರುತ್ತಿವೆ. ವೈದ್ಯರು ಕರ್ತವ್ಯದ ಸ್ಥಳದಲ್ಲಿ ನೆಲೆಸುತ್ತಿಲ್ಲ. ದೂರದ ಊರಿಂದ ಓಡಾಡುತ್ತಿದ್ದಾರೆ. ಇದನ್ನು ಸಹಿಸಬೇಕಾ’ ಎಂದು ಪ್ರಶ್ನಿಸಿದರು.</p><p>‘ಹೊಣೆಗಾರಿಕೆಗಳನ್ನು ನೀವು ಸೂಕ್ತವಾಗಿ ನಿರ್ವಹಿಸಿದರೆ, ಸಮಸ್ಯೆಗಳನ್ನು ಬಗೆಹರಿಸುವುದು ಕಷ್ಟವೇನಲ್ಲ. ನಿಮ್ಮ ಹಂತದಲ್ಲೇ ಬಗೆಹರಿಯುವ ಸಮಸ್ಯೆಗಳನ್ನು ಉದಾಸೀನ ಮಾಡದೆ ಪರಿಹರಿಸಬೇಕು. ಜನ ನನ್ನ ಬಳಿಗೆ ಬರುತ್ತಿದ್ದಾರೆ ಎಂದರೆ ನಿಮ್ಮ ಹಂತದಲ್ಲಿ ಕೆಲಸಗಳು ಆಗುತ್ತಿಲ್ಲ ಎಂದೇ ಅರ್ಥ; ನೀವು ಜನರ ಪರವಾಗಿ ಇಲ್ಲ ಎಂದೇ ಅರ್ಥ. ಕೆಲಸವನ್ನು ಗಂಭೀರವಾಗಿ ಪರಿಗಣಿಸಿ ಜನರ ಸಮಸ್ಯೆ ಪರಿಹರಿಸಬೇಕು’ ಎಂದು ತಾಕೀತು ಮಾಡಿದರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>