‘ಪಕ್ಷದ ಮುಖಂಡರ ವಿರುದ್ಧ ಉದ್ದೇಶಪೂರ್ವಕ ಆರೋಪ ಮಾಡಿ ಮಾನಸಿಕ ಹಿಂಸೆ ನೀಡಲಾಗುತ್ತಿದೆ. ಭ್ರಷ್ಟಾಚಾರದ ಆರೋಪ ಮಾಡುತ್ತಾರೆ. ಆದರೆ, ಈವರೆಗೆ ಒಂದೇ ಒಂದು ಪೈಸೆ ಭ್ರಷ್ಟಾಚಾರದ ಹಣ ವಶಪಡಿಸಿಕೊಳ್ಳಲು ಸಾಧ್ಯವಾಗಿಲ್ಲ. ಬಂಧನದ ಮೂಲಕ ಪಕ್ಷದ ಕಾರ್ಯವೈಖರಿಯನ್ನು ಕುಂಠಿತಗೊಳಿಸುವ ಪ್ರಯತ್ನವಾಗುತ್ತಿದೆ. ಆದರೆ, ಮತದಾರ ಇವನ್ನು ಗಮನಿಸಿ, ಸೂಕ್ತ ನಿರ್ಧಾರ ಕೈಗೊಳ್ಳುತ್ತಾನೆ’ ಎಂದರು.