<p><strong>ಮೈಸೂರು:</strong> ಶಾಸಕ ತನ್ವೀರ್ಸೇಠ್ ಅವರ ಮೇಲಿನ ಹಲ್ಲೆ ಪ್ರಕರಣದ ಹಿಂದೆ ವ್ಯವಸ್ಥಿತವಾದ ಯೋಜನೆ ಹಾಗೂ ಸಂಚು ಇತ್ತು ಎಂಬುದು ಪೊಲೀಸರ ತನಿಖೆಯಿಂದ ಬಯಲಾಗಿದೆ.</p>.<p>ಆರೋಪಿ ಫರ್ಹಾನ್ ಪಾಷಾ ಹಲ್ಲೆ ನಡೆಸಿ ಓಡುತ್ತಿದ್ದ ವೇಳೆ ಗೃಹರಕ್ಷಕ ಸಿಬ್ಬಂದಿಯ ಕೈಗೆ ಸಿಕ್ಕಿಬಿದ್ದ. ಬಾಲಭವನದ ಗೇಟಿನ ಮುಂಭಾಗ ಬೈಕ್ಗಳಲ್ಲಿ ನಿಂತಿದ್ದ 7 ಮಂದಿ ಪರಾರಿಯಾದರು ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.</p>.<p>ಈ ಹಿಂದೆ ಎನ್.ಆರ್.ಕ್ಷೇತ್ರದಲ್ಲಿ ನಡೆದ ಆರ್ಎಸ್ಎಸ್ ಮುಖಂಡ ರಾಜು ಅವರ ಹತ್ಯೆಗೂ ಈ ಪ್ರಕರಣಕ್ಕೂ ಇರುವ ಸಾಮ್ಯತೆಯನ್ನು ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ರಾಜು ಹತ್ಯೆ ಹಿಂದೆ ಇದೆ ಎನ್ನಲಾದ ಸಂಘಟನೆಯ ಕೈವಾಡದ ಬಗ್ಗೆಯೂ ತನಿಖೆ ಸಾಗಿದೆ.</p>.<p>ಮುಖ್ಯವಾಗಿ ಕೇರಳದ ಕೊಟ್ಟಾಯಂ ಜಿಲ್ಲೆಯಲ್ಲಿ ಸೆಪ್ಟೆಂಬರ್ 6ರಂದು ಮಸೀದಿಯೊಂದರಲ್ಲಿ ಧರ್ಮಗುರು ಒಬ್ಬರ ಮೇಲೆ ನಡೆದ ಹಲ್ಲೆ ಪ್ರಕರಣ ಹಾಗೂ ಜುಲೈ 30ರಂದು ತ್ರಿಶೂರ್ ಜಿಲ್ಲೆಯಲ್ಲಿ ಕಾಂಗ್ರೆಸ್ ಮುಖಂಡ ನೌಷಾದ್ ಅವರ ಹತ್ಯೆ ಪ್ರಕರಣವನ್ನೂ ಪರಿಶೀಲಿಸಲಾಗುತ್ತಿದೆ.</p>.<p>ಈ ಎಲ್ಲವುಗಳ ಹಿಂದೆ ಸಂಘಟನೆಯೊಂದರ ಕೈವಾಡ ಇದ್ದು, ಮುಸ್ಲಿಂ ಬಲಪಂಥೀಯ ಸಂಘಟನೆಯ ಗುರಿ ಇದೀಗ ಕಾಂಗ್ರೆಸ್ನತ್ತ ಹಾಗೂ ಮುಸ್ಲಿಂ ಸಮುದಾಯದವರತ್ತಲೇ ನೆಟ್ಟಿರುವುದು ತನಿಖೆಯಿಂದ ತಿಳಿದು ಬಂದಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಶಾಸಕ ತನ್ವೀರ್ಸೇಠ್ ಅವರ ಮೇಲಿನ ಹಲ್ಲೆ ಪ್ರಕರಣದ ಹಿಂದೆ ವ್ಯವಸ್ಥಿತವಾದ ಯೋಜನೆ ಹಾಗೂ ಸಂಚು ಇತ್ತು ಎಂಬುದು ಪೊಲೀಸರ ತನಿಖೆಯಿಂದ ಬಯಲಾಗಿದೆ.</p>.<p>ಆರೋಪಿ ಫರ್ಹಾನ್ ಪಾಷಾ ಹಲ್ಲೆ ನಡೆಸಿ ಓಡುತ್ತಿದ್ದ ವೇಳೆ ಗೃಹರಕ್ಷಕ ಸಿಬ್ಬಂದಿಯ ಕೈಗೆ ಸಿಕ್ಕಿಬಿದ್ದ. ಬಾಲಭವನದ ಗೇಟಿನ ಮುಂಭಾಗ ಬೈಕ್ಗಳಲ್ಲಿ ನಿಂತಿದ್ದ 7 ಮಂದಿ ಪರಾರಿಯಾದರು ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.</p>.<p>ಈ ಹಿಂದೆ ಎನ್.ಆರ್.ಕ್ಷೇತ್ರದಲ್ಲಿ ನಡೆದ ಆರ್ಎಸ್ಎಸ್ ಮುಖಂಡ ರಾಜು ಅವರ ಹತ್ಯೆಗೂ ಈ ಪ್ರಕರಣಕ್ಕೂ ಇರುವ ಸಾಮ್ಯತೆಯನ್ನು ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ರಾಜು ಹತ್ಯೆ ಹಿಂದೆ ಇದೆ ಎನ್ನಲಾದ ಸಂಘಟನೆಯ ಕೈವಾಡದ ಬಗ್ಗೆಯೂ ತನಿಖೆ ಸಾಗಿದೆ.</p>.<p>ಮುಖ್ಯವಾಗಿ ಕೇರಳದ ಕೊಟ್ಟಾಯಂ ಜಿಲ್ಲೆಯಲ್ಲಿ ಸೆಪ್ಟೆಂಬರ್ 6ರಂದು ಮಸೀದಿಯೊಂದರಲ್ಲಿ ಧರ್ಮಗುರು ಒಬ್ಬರ ಮೇಲೆ ನಡೆದ ಹಲ್ಲೆ ಪ್ರಕರಣ ಹಾಗೂ ಜುಲೈ 30ರಂದು ತ್ರಿಶೂರ್ ಜಿಲ್ಲೆಯಲ್ಲಿ ಕಾಂಗ್ರೆಸ್ ಮುಖಂಡ ನೌಷಾದ್ ಅವರ ಹತ್ಯೆ ಪ್ರಕರಣವನ್ನೂ ಪರಿಶೀಲಿಸಲಾಗುತ್ತಿದೆ.</p>.<p>ಈ ಎಲ್ಲವುಗಳ ಹಿಂದೆ ಸಂಘಟನೆಯೊಂದರ ಕೈವಾಡ ಇದ್ದು, ಮುಸ್ಲಿಂ ಬಲಪಂಥೀಯ ಸಂಘಟನೆಯ ಗುರಿ ಇದೀಗ ಕಾಂಗ್ರೆಸ್ನತ್ತ ಹಾಗೂ ಮುಸ್ಲಿಂ ಸಮುದಾಯದವರತ್ತಲೇ ನೆಟ್ಟಿರುವುದು ತನಿಖೆಯಿಂದ ತಿಳಿದು ಬಂದಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>