<p><strong>ಬೆಟ್ಟದಪುರ</strong>: ಸಮೀಪದ ಕಿತ್ತೂರು ಗ್ರಾಮದ ದುರ್ಗಾಪರಮೇಶ್ವರಿ ಆದಿಶಕ್ತಿ ಕಿತ್ತೂರಮ್ಮ ಜಾತ್ರಾ ಮಹೋತ್ಸವವು ಗುರುವಾರ ಸಕಲ ಪೂಜಾ ಕೈಂಕರ್ಯಗಳೊಂದಿಗೆ ವಿಜೃಂಭಣೆಯಿಂದ ನೆರವೇರಿತು.</p>.<p>ಜಾತ್ರೆಯ ಹಿಂದಿನ ದಿನ ಉತ್ಸವ ಮೂರ್ತಿಯ ದೇವಿಯನ್ನು ಹತ್ತಿರದ ಪುಣ್ಯಕ್ಷೇತ್ರವಾದ ಚುಂಚನಕಟ್ಟೆ ಕಾವೇರಿ ಹೊಳೆಯಲ್ಲಿ ಮಡಿಮಾಡಿ, ಸಕಲ ಪೂಜಾ ವಿಧಾನಗಳು ಹಾಗೂ ಹೋಮ, ಹವನಗಳನ್ನು ನೆರವೇರಿಸಲಾಯಿತು. ಭಕ್ತರ ಮೆರವಣಿಗೆಯೊಂದಿಗೆ ಉತ್ಸವ ಮೂರ್ತಿ ದೇವಿಯನ್ನು ಕಿತ್ತೂರು ಗ್ರಾಮಕ್ಕೆ ತಂದು ದೇವಸ್ಥಾನದಲ್ಲಿ ಪ್ರತಿಷ್ಠಾಪಿಸಲಾಯಿತು.</p>.<p>ಜಾತ್ರೋತ್ಸವದಲ್ಲಿ ದೇವಿಯನ್ನು ರಥಕ್ಕೆ ಪ್ರತಿಷ್ಠಾಪಿಸಿ ರಥೋತ್ಸವಕ್ಕೆ ಚಾಲನೆ ನೀಡಿ ಭಕ್ತರು ಹರ್ಷೋದ್ಗಾರದಿಂದ ಉಘೇ ಅನ್ನಪೂರ್ಣೇಶ್ವರಿ, ಉಘೇ ಕಿತ್ತೂರಮ್ಮ ಘೋಷಣೆಯೊಂದಿಗೆ ರಥವನ್ನು ಎಳೆದು ಪುನೀತರಾದರು. ಹಣ್ಣು– ಜವನ ಎಸೆದು ಪೂಜೆ ಸಲ್ಲಿಸಿದರು. ತಮ್ಮ ಹರಕೆಯನ್ನು ಸಮರ್ಪಿಸಿದರು.</p>.<p>ಸಚಿವ ಕೆ. ವೆಂಕಟೇಶ್, ಗ್ಯಾರಂಟಿ ಅನುಷ್ಠಾನ ಸಮಿತಿ ಪಿರಿಯಾಪಟ್ಟಣ ತಾಲ್ಲೂಕು ಘಟಕದ ಅಧ್ಯಕ್ಷ ನಿತಿನ್ ವೆಂಕಟೇಶ್ ಮತ್ತು ಅಭಿಮಾನಿ ಬಳಗದಿಂದ, ಭಕ್ತರಿಗೆ ಪ್ರಸಾದ ಹಾಗೂ ಮಜ್ಜಿಗೆ ಪಾನಕ ವಿತರಣೆ ಮಾಡಲಾಯಿತು. ಕಿತ್ತೂರಿನ 18 ಗ್ರಾಮಗಳ ಗ್ರಾಮಸ್ಥರು ರಥೋತ್ಸವದಲ್ಲಿ ಪಾಲ್ಗೊಂಡರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಟ್ಟದಪುರ</strong>: ಸಮೀಪದ ಕಿತ್ತೂರು ಗ್ರಾಮದ ದುರ್ಗಾಪರಮೇಶ್ವರಿ ಆದಿಶಕ್ತಿ ಕಿತ್ತೂರಮ್ಮ ಜಾತ್ರಾ ಮಹೋತ್ಸವವು ಗುರುವಾರ ಸಕಲ ಪೂಜಾ ಕೈಂಕರ್ಯಗಳೊಂದಿಗೆ ವಿಜೃಂಭಣೆಯಿಂದ ನೆರವೇರಿತು.</p>.<p>ಜಾತ್ರೆಯ ಹಿಂದಿನ ದಿನ ಉತ್ಸವ ಮೂರ್ತಿಯ ದೇವಿಯನ್ನು ಹತ್ತಿರದ ಪುಣ್ಯಕ್ಷೇತ್ರವಾದ ಚುಂಚನಕಟ್ಟೆ ಕಾವೇರಿ ಹೊಳೆಯಲ್ಲಿ ಮಡಿಮಾಡಿ, ಸಕಲ ಪೂಜಾ ವಿಧಾನಗಳು ಹಾಗೂ ಹೋಮ, ಹವನಗಳನ್ನು ನೆರವೇರಿಸಲಾಯಿತು. ಭಕ್ತರ ಮೆರವಣಿಗೆಯೊಂದಿಗೆ ಉತ್ಸವ ಮೂರ್ತಿ ದೇವಿಯನ್ನು ಕಿತ್ತೂರು ಗ್ರಾಮಕ್ಕೆ ತಂದು ದೇವಸ್ಥಾನದಲ್ಲಿ ಪ್ರತಿಷ್ಠಾಪಿಸಲಾಯಿತು.</p>.<p>ಜಾತ್ರೋತ್ಸವದಲ್ಲಿ ದೇವಿಯನ್ನು ರಥಕ್ಕೆ ಪ್ರತಿಷ್ಠಾಪಿಸಿ ರಥೋತ್ಸವಕ್ಕೆ ಚಾಲನೆ ನೀಡಿ ಭಕ್ತರು ಹರ್ಷೋದ್ಗಾರದಿಂದ ಉಘೇ ಅನ್ನಪೂರ್ಣೇಶ್ವರಿ, ಉಘೇ ಕಿತ್ತೂರಮ್ಮ ಘೋಷಣೆಯೊಂದಿಗೆ ರಥವನ್ನು ಎಳೆದು ಪುನೀತರಾದರು. ಹಣ್ಣು– ಜವನ ಎಸೆದು ಪೂಜೆ ಸಲ್ಲಿಸಿದರು. ತಮ್ಮ ಹರಕೆಯನ್ನು ಸಮರ್ಪಿಸಿದರು.</p>.<p>ಸಚಿವ ಕೆ. ವೆಂಕಟೇಶ್, ಗ್ಯಾರಂಟಿ ಅನುಷ್ಠಾನ ಸಮಿತಿ ಪಿರಿಯಾಪಟ್ಟಣ ತಾಲ್ಲೂಕು ಘಟಕದ ಅಧ್ಯಕ್ಷ ನಿತಿನ್ ವೆಂಕಟೇಶ್ ಮತ್ತು ಅಭಿಮಾನಿ ಬಳಗದಿಂದ, ಭಕ್ತರಿಗೆ ಪ್ರಸಾದ ಹಾಗೂ ಮಜ್ಜಿಗೆ ಪಾನಕ ವಿತರಣೆ ಮಾಡಲಾಯಿತು. ಕಿತ್ತೂರಿನ 18 ಗ್ರಾಮಗಳ ಗ್ರಾಮಸ್ಥರು ರಥೋತ್ಸವದಲ್ಲಿ ಪಾಲ್ಗೊಂಡರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>