<p><strong>ಮೈಸೂರು</strong>: ಕೋಲ್ಕತ್ತಾದ ಆರ್.ಜಿ. ವೈದ್ಯಕೀಯ ಕಾಲೇಜಿನಲ್ಲಿ ವೈದ್ಯ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ, ಕೊಲೆ ಪ್ರಕರಣ ಖಂಡಿಸಿ ‘ನಿವೃತ್ತ ಸೈನಿಕರ ಕ್ಷೇಮಾಭಿವೃದ್ಧಿ ಸಂಘ’ ಹಾಗೂ ‘ಮೈಸೂರು ಸಶಸ್ತ್ರ ಪಡೆಗಳ ಮಾಜಿ ಸೈನಿಕ ಸಂಘ’ದ ಸದಸ್ಯರು ಶುಕ್ರವಾರ ಮೋಂಬತ್ತಿ ಹಿಡಿದು ಪ್ರತಿಭಟನೆ ನಡೆಸಿದರು.</p>.<p>ನಗರದ ಹಳೆ ಜಿಲ್ಲಾಧಿಕಾರಿ ಕಚೇರಿ ಸಮೀಪದ ಯುದ್ಧ ಸ್ಮಾರಕ ಉದ್ಯಾನದಲ್ಲಿ ಜಮಾಯಿಸಿದ ಪ್ರತಿಭಟನಕಾರರು, ‘ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ’ಗೆ ಒತ್ತಾಯಿಸಿದರು.</p>.<p>ಸಂಘದ ಪಿ.ಕೆ.ಬಿದ್ದಪ್ಪ ಮಾತನಾಡಿ, ‘ತರಬೇತಿ ನಿರತ ವೈದ್ಯೆ ಮೇಲಿನ ಅತ್ಯಾಚಾರ, ಹತ್ಯೆ ಪ್ರಕರಣದಿಂದ ಇಡೀ ಸಮಾಜ ತಲೆತಗ್ಗಿಸುವಂತಾಗಿದೆ. ರೋಗಿಗಳ ಜೀವವನ್ನು ಉಳಿಸುವ ವೈದ್ಯರಿಗೇ ದೇಶದಲ್ಲಿ ರಕ್ಷಣೆ ಇಲ್ಲದಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು. </p>.<p>‘ವೈದ್ಯಕೀಯ ಕ್ಷೇತ್ರಕ್ಕೆ ಪ್ರವೇಶಿಸಿಸುವ ವಿದ್ಯಾರ್ಥಿನಿಯರ ಸಂಖ್ಯೆಯೂ ಈಚೆಗೆ ಕಡಿಮೆಯಾಗುತ್ತಿದೆ. ಆದ್ದರಿಂದ ಪಶ್ಚಿಮ ಬಂಗಾಳ ಸರ್ಕಾರ ತಕ್ಷಣ ಎಲ್ಲ ಆರೋಪಿಗಳನ್ನು ಬಂಧಿಸಬೇಕು. ದೇಶದ ಎಲ್ಲ ರಾಜ್ಯಗಳೂ ವೈದ್ಯರಿಗೆ ಹಾಗೂ ಜನಸಾಮಾನ್ಯರಿಗೆ ರಕ್ಷಣೆ ಕೊಡಬೇಕು’ ಎಂದು ಒತ್ತಾಯಿಸಿದರು.</p>.<p>‘ದೇಶದಾದ್ಯಂತ ದಿನೇ ದಿನೆ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ ಹೆಚ್ಚುತ್ತಿವೆ. ಇಂಥ ಘಟನೆಗಳು ಮಾನವೀಯತೆಗೆ ಸವಾಲೊಡುತ್ತಿವೆ. ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸುವ ಬಲವಾದ ಕಾನೂನು ಜಾರಿಗೊಳಿಸಬೇಕು’ ಎಂದರು.</p>.<p>ಗೋಪಾಲ್, ಕೆ.ಎಸ್.ಸುರೇಶ್, ರವಿಕುಮಾರ್, ಎನ್.ಎ.ಹರೀಶ್, ಮೊಣ್ಣಪ್ಪ ಮ್ಯಾಥ್ಯೂ, ಬ್ರಿಗೇಡಿಯರ್ ಅಡಪ್ಪ, ಶ್ರೀಧರ್, ಅಯ್ಯರ್, ಬಾಲಸುಬ್ರಹ್ಮಣ್ಯ, ವೇದಾ ರೈ, ರೇಷ್ಮಾ ಶೆಟ್ಟಿ, ಗೀತಾ ಶೆಟ್ಟಿ, ಶಬೀನ್ ವಿಜಯಾಳ್ವ, ಶಬೀನ ಜಲೀಲ್, ಸರೋಜಿನಿ, ಶ್ರೀಧರ್, ಕೆ.ಆರ್.ಭಾಸ್ಕರಾನಂದ, ಕೆ.ಎಂ.ಯಶೋಧಮ್ಮ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ಕೋಲ್ಕತ್ತಾದ ಆರ್.ಜಿ. ವೈದ್ಯಕೀಯ ಕಾಲೇಜಿನಲ್ಲಿ ವೈದ್ಯ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ, ಕೊಲೆ ಪ್ರಕರಣ ಖಂಡಿಸಿ ‘ನಿವೃತ್ತ ಸೈನಿಕರ ಕ್ಷೇಮಾಭಿವೃದ್ಧಿ ಸಂಘ’ ಹಾಗೂ ‘ಮೈಸೂರು ಸಶಸ್ತ್ರ ಪಡೆಗಳ ಮಾಜಿ ಸೈನಿಕ ಸಂಘ’ದ ಸದಸ್ಯರು ಶುಕ್ರವಾರ ಮೋಂಬತ್ತಿ ಹಿಡಿದು ಪ್ರತಿಭಟನೆ ನಡೆಸಿದರು.</p>.<p>ನಗರದ ಹಳೆ ಜಿಲ್ಲಾಧಿಕಾರಿ ಕಚೇರಿ ಸಮೀಪದ ಯುದ್ಧ ಸ್ಮಾರಕ ಉದ್ಯಾನದಲ್ಲಿ ಜಮಾಯಿಸಿದ ಪ್ರತಿಭಟನಕಾರರು, ‘ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ’ಗೆ ಒತ್ತಾಯಿಸಿದರು.</p>.<p>ಸಂಘದ ಪಿ.ಕೆ.ಬಿದ್ದಪ್ಪ ಮಾತನಾಡಿ, ‘ತರಬೇತಿ ನಿರತ ವೈದ್ಯೆ ಮೇಲಿನ ಅತ್ಯಾಚಾರ, ಹತ್ಯೆ ಪ್ರಕರಣದಿಂದ ಇಡೀ ಸಮಾಜ ತಲೆತಗ್ಗಿಸುವಂತಾಗಿದೆ. ರೋಗಿಗಳ ಜೀವವನ್ನು ಉಳಿಸುವ ವೈದ್ಯರಿಗೇ ದೇಶದಲ್ಲಿ ರಕ್ಷಣೆ ಇಲ್ಲದಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು. </p>.<p>‘ವೈದ್ಯಕೀಯ ಕ್ಷೇತ್ರಕ್ಕೆ ಪ್ರವೇಶಿಸಿಸುವ ವಿದ್ಯಾರ್ಥಿನಿಯರ ಸಂಖ್ಯೆಯೂ ಈಚೆಗೆ ಕಡಿಮೆಯಾಗುತ್ತಿದೆ. ಆದ್ದರಿಂದ ಪಶ್ಚಿಮ ಬಂಗಾಳ ಸರ್ಕಾರ ತಕ್ಷಣ ಎಲ್ಲ ಆರೋಪಿಗಳನ್ನು ಬಂಧಿಸಬೇಕು. ದೇಶದ ಎಲ್ಲ ರಾಜ್ಯಗಳೂ ವೈದ್ಯರಿಗೆ ಹಾಗೂ ಜನಸಾಮಾನ್ಯರಿಗೆ ರಕ್ಷಣೆ ಕೊಡಬೇಕು’ ಎಂದು ಒತ್ತಾಯಿಸಿದರು.</p>.<p>‘ದೇಶದಾದ್ಯಂತ ದಿನೇ ದಿನೆ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ ಹೆಚ್ಚುತ್ತಿವೆ. ಇಂಥ ಘಟನೆಗಳು ಮಾನವೀಯತೆಗೆ ಸವಾಲೊಡುತ್ತಿವೆ. ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸುವ ಬಲವಾದ ಕಾನೂನು ಜಾರಿಗೊಳಿಸಬೇಕು’ ಎಂದರು.</p>.<p>ಗೋಪಾಲ್, ಕೆ.ಎಸ್.ಸುರೇಶ್, ರವಿಕುಮಾರ್, ಎನ್.ಎ.ಹರೀಶ್, ಮೊಣ್ಣಪ್ಪ ಮ್ಯಾಥ್ಯೂ, ಬ್ರಿಗೇಡಿಯರ್ ಅಡಪ್ಪ, ಶ್ರೀಧರ್, ಅಯ್ಯರ್, ಬಾಲಸುಬ್ರಹ್ಮಣ್ಯ, ವೇದಾ ರೈ, ರೇಷ್ಮಾ ಶೆಟ್ಟಿ, ಗೀತಾ ಶೆಟ್ಟಿ, ಶಬೀನ್ ವಿಜಯಾಳ್ವ, ಶಬೀನ ಜಲೀಲ್, ಸರೋಜಿನಿ, ಶ್ರೀಧರ್, ಕೆ.ಆರ್.ಭಾಸ್ಕರಾನಂದ, ಕೆ.ಎಂ.ಯಶೋಧಮ್ಮ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>