<p><strong>ಮೈಸೂರು</strong>: ‘ವಿಧಾನಪರಿಷತ್ ದಕ್ಷಿಣ ಶಿಕ್ಷಕರ ಕ್ಷೇತ್ರ ಸರಸ್ವತಿಯ ನೆಲೆಯಾಗಿದ್ದು, ಇಲ್ಲಿ ಲಕ್ಷ್ಮಿ (ಹಣ) ಆಟ ನಡೆಯುವುದಿಲ್ಲ’ ಎಂದು ಕೆಪಿಸಿಸಿ ವಕ್ತಾರ ಎಚ್.ಎ. ವೆಂಕಟೇಶ್ ಹೇಳಿದರು.</p>.<p>ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, ‘ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಜೆಡಿಎಸ್ ಅಭ್ಯರ್ಥಿ ಕೆ.ವಿವೇಕಾನಂದ ಅವರಿಗೆ ಟಿಕೆಟ್ ಸಿಗಲು ಲಕ್ಷ್ಮಿ ಕಟಾಕ್ಷ ಕಾರಣ’ ಎಂದು ದೂರಿದರು.</p>.<p>‘ಕ್ಷೇತ್ರವು ಬುದ್ಧಿವಂತರು, ವಾಗ್ಮಿಗಳು ಪ್ರತಿನಿಧಿಸುವಂಥದ್ದು. ಮರಿತಿಬ್ಬೇಗೌಡ ಅವರು ಜೆಡಿಎಸ್ನಲ್ಲೇ ಇದ್ದಿದ್ದರೆ ಟಿಕೆಟ್ ಸಿಗುತ್ತಿರಲಿಲ್ಲ. ಅಲ್ಲಿನ ಲಕ್ಷ್ಮಿ ಪ್ರಭಾವ ಅರಿತೇ ಅವರು ಜೆಡಿಎಸ್ ತೊರೆದರು’ ಎಂದು ಹೇಳಿದರು.</p>.<p>‘ಕಾಂಗ್ರೆಸ್ನವರು ಜಿಲ್ಲೆಯಲ್ಲಿ ಅಧಿಕಾರಿಗಳನ್ನು, ಶಿಕ್ಷಕರನ್ನು ಹೆದರಿಸುತ್ತಿದ್ದಾರೆ ಎಂದು ಶಾಸಕ ಜಿ.ಟಿ. ದೇವೇಗೌಡರು ಪ್ರಚಾರ ಸಭೆಯಲ್ಲಿ ಆರೋಪಿಸಿದ್ದಾರೆ. ಇದು ಸತ್ಯಕ್ಕೆ ದೂರವಾದುದು. ಜವಾಬ್ದಾರಿ ಸ್ಥಾನದಲ್ಲಿರುವ ಹಿರಿಯ ರಾಜಕಾರಣಿ ಇಂಥ ಸುಳ್ಳು ಹೇಳಬಾರದು’ ಎಂದರು.</p>.<p>‘ಯಾರ ಸಂಸ್ಕೃತಿ ಎಂಥದ್ದು ಎಂಬುದು ಜನಕ್ಕೆ ಗೊತ್ತಿದೆ. ಜೆಡಿಎಸ್ ಟಿಕೆಟ್ ವಂಚಿತರಾದ ಕೆ.ಟಿ. ಶ್ರೀಕಂಠೇಗೌಡ ಅವರು ಬೆಂಬಲಿಗರ ಸಭೆ ನಡೆಸುವಾಗ ಅಡ್ಡಿಪಡಿಸಿದವರು, ಅವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗುವಂತೆ ಮಾಡಿದವರು ಜೆಡಿಎಸ್ ಕಾರ್ಯಕರ್ತರಲ್ಲವೇ’ ಎಂದು ಕೇಳಿದರು.</p>.<p>ಮಾಜಿ ಶಾಸಕ ಎಂ.ಕೆ. ಸೋಮಶೇಖರ್, ಸ್ವಾಮಿ ಆನಂದ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ವಿಧಾನಪರಿಷತ್ ದಕ್ಷಿಣ ಶಿಕ್ಷಕರ ಕ್ಷೇತ್ರ ಸರಸ್ವತಿಯ ನೆಲೆಯಾಗಿದ್ದು, ಇಲ್ಲಿ ಲಕ್ಷ್ಮಿ (ಹಣ) ಆಟ ನಡೆಯುವುದಿಲ್ಲ’ ಎಂದು ಕೆಪಿಸಿಸಿ ವಕ್ತಾರ ಎಚ್.ಎ. ವೆಂಕಟೇಶ್ ಹೇಳಿದರು.</p>.<p>ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, ‘ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಜೆಡಿಎಸ್ ಅಭ್ಯರ್ಥಿ ಕೆ.ವಿವೇಕಾನಂದ ಅವರಿಗೆ ಟಿಕೆಟ್ ಸಿಗಲು ಲಕ್ಷ್ಮಿ ಕಟಾಕ್ಷ ಕಾರಣ’ ಎಂದು ದೂರಿದರು.</p>.<p>‘ಕ್ಷೇತ್ರವು ಬುದ್ಧಿವಂತರು, ವಾಗ್ಮಿಗಳು ಪ್ರತಿನಿಧಿಸುವಂಥದ್ದು. ಮರಿತಿಬ್ಬೇಗೌಡ ಅವರು ಜೆಡಿಎಸ್ನಲ್ಲೇ ಇದ್ದಿದ್ದರೆ ಟಿಕೆಟ್ ಸಿಗುತ್ತಿರಲಿಲ್ಲ. ಅಲ್ಲಿನ ಲಕ್ಷ್ಮಿ ಪ್ರಭಾವ ಅರಿತೇ ಅವರು ಜೆಡಿಎಸ್ ತೊರೆದರು’ ಎಂದು ಹೇಳಿದರು.</p>.<p>‘ಕಾಂಗ್ರೆಸ್ನವರು ಜಿಲ್ಲೆಯಲ್ಲಿ ಅಧಿಕಾರಿಗಳನ್ನು, ಶಿಕ್ಷಕರನ್ನು ಹೆದರಿಸುತ್ತಿದ್ದಾರೆ ಎಂದು ಶಾಸಕ ಜಿ.ಟಿ. ದೇವೇಗೌಡರು ಪ್ರಚಾರ ಸಭೆಯಲ್ಲಿ ಆರೋಪಿಸಿದ್ದಾರೆ. ಇದು ಸತ್ಯಕ್ಕೆ ದೂರವಾದುದು. ಜವಾಬ್ದಾರಿ ಸ್ಥಾನದಲ್ಲಿರುವ ಹಿರಿಯ ರಾಜಕಾರಣಿ ಇಂಥ ಸುಳ್ಳು ಹೇಳಬಾರದು’ ಎಂದರು.</p>.<p>‘ಯಾರ ಸಂಸ್ಕೃತಿ ಎಂಥದ್ದು ಎಂಬುದು ಜನಕ್ಕೆ ಗೊತ್ತಿದೆ. ಜೆಡಿಎಸ್ ಟಿಕೆಟ್ ವಂಚಿತರಾದ ಕೆ.ಟಿ. ಶ್ರೀಕಂಠೇಗೌಡ ಅವರು ಬೆಂಬಲಿಗರ ಸಭೆ ನಡೆಸುವಾಗ ಅಡ್ಡಿಪಡಿಸಿದವರು, ಅವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗುವಂತೆ ಮಾಡಿದವರು ಜೆಡಿಎಸ್ ಕಾರ್ಯಕರ್ತರಲ್ಲವೇ’ ಎಂದು ಕೇಳಿದರು.</p>.<p>ಮಾಜಿ ಶಾಸಕ ಎಂ.ಕೆ. ಸೋಮಶೇಖರ್, ಸ್ವಾಮಿ ಆನಂದ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>