<p><strong>ಮೈಸೂರು:</strong> ‘ನಮ್ಮ ರಾಜ್ಯದಲ್ಲೇ ಸಾಕಾಗುವಷ್ಟು ವಿದ್ಯುತ್ ಖರೀದಿ ಮಾಡುವ ಶಕ್ತಿ ಇದ್ದರೂ ಹೆಚ್ಚುವರಿ ಹಣ ನೀಡಿ ಖಾಸಗಿ ಕಂಪನಿಗಳಿಂದ ರಾಜ್ಯಸರ್ಕಾರ ವಿದ್ಯುತ್ ಖರೀದಿ ಮಾಡುತ್ತಿದೆ. ಇದೊಂದು ಕಮಿಷನ್ ದಂಧೆ’ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ಆರೋಪಿಸಿದರು.</p>.<p>ರಾಜ್ಯದಲ್ಲಿರುವ ಎಲ್ಲ ಸ್ಥಾವರಗಳನ್ನೂ ಸಮರ್ಪಕವಾಗಿ ಬಳಕೆ ಮಾಡಿಕೊಂಡರೆ 14,574 ಮೆಗಾವ್ಯಾಟ್ನಷ್ಟು ವಿದ್ಯುತ್ ಉತ್ಪಾದಿಸಬಹುದು. 9,451 ಮೆಗಾವ್ಯಾಟ್ ಸದ್ಯದ ಬೇಡಿಕೆ. ಆದರೆ, ಈಗ ಕೇವಲ 6,708 ಮೆಗಾವ್ಯಾಟ್ ಮಾತ್ರ ಉತ್ಪಾದನೆಯಾಗುತ್ತಿದೆ ಎಂದು ಹೇಳಿದರು.</p>.<p>ಕೊರತೆಯಾಗಿರುವ ವಿದ್ಯುತ್ನ್ನು ಅದಾನಿ ಮಾಲೀಕತ್ವ ಹಾಗೂ ಇನ್ನಿತರೆ ಕಂಪನಿಗಳಿಂದ ಖರೀದಿ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರ ಪ್ರತಿ ಯೂನಿಟ್ಗೆ ₹ 4.70 ದರ ನಿಗದಿ ಮಾಡಿದ್ದರೆ, ಸರ್ಕಾರ ₹ 6 ನೀಡುತ್ತಿರುವುದಾದರೂ ಏಕೆ ಎಂದು ಪ್ರಶ್ನಿಸಿದರು.</p>.<p>ಈ ಕುರಿತು ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಕರ್ನಾಟಕ ಪವರ್ ಕಾರ್ಪೋರೇಷನ್ ಲಿಮಿಟೆಡ್ನ ವ್ಯವಸ್ಥಾಪಕ ನಿರ್ದೇಶಕ ವಿ.ಪೊನ್ನುರಾಜ್ ಪತ್ರ ಬರೆದಿದ್ದಾರೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ನಮ್ಮ ರಾಜ್ಯದಲ್ಲೇ ಸಾಕಾಗುವಷ್ಟು ವಿದ್ಯುತ್ ಖರೀದಿ ಮಾಡುವ ಶಕ್ತಿ ಇದ್ದರೂ ಹೆಚ್ಚುವರಿ ಹಣ ನೀಡಿ ಖಾಸಗಿ ಕಂಪನಿಗಳಿಂದ ರಾಜ್ಯಸರ್ಕಾರ ವಿದ್ಯುತ್ ಖರೀದಿ ಮಾಡುತ್ತಿದೆ. ಇದೊಂದು ಕಮಿಷನ್ ದಂಧೆ’ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ಆರೋಪಿಸಿದರು.</p>.<p>ರಾಜ್ಯದಲ್ಲಿರುವ ಎಲ್ಲ ಸ್ಥಾವರಗಳನ್ನೂ ಸಮರ್ಪಕವಾಗಿ ಬಳಕೆ ಮಾಡಿಕೊಂಡರೆ 14,574 ಮೆಗಾವ್ಯಾಟ್ನಷ್ಟು ವಿದ್ಯುತ್ ಉತ್ಪಾದಿಸಬಹುದು. 9,451 ಮೆಗಾವ್ಯಾಟ್ ಸದ್ಯದ ಬೇಡಿಕೆ. ಆದರೆ, ಈಗ ಕೇವಲ 6,708 ಮೆಗಾವ್ಯಾಟ್ ಮಾತ್ರ ಉತ್ಪಾದನೆಯಾಗುತ್ತಿದೆ ಎಂದು ಹೇಳಿದರು.</p>.<p>ಕೊರತೆಯಾಗಿರುವ ವಿದ್ಯುತ್ನ್ನು ಅದಾನಿ ಮಾಲೀಕತ್ವ ಹಾಗೂ ಇನ್ನಿತರೆ ಕಂಪನಿಗಳಿಂದ ಖರೀದಿ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರ ಪ್ರತಿ ಯೂನಿಟ್ಗೆ ₹ 4.70 ದರ ನಿಗದಿ ಮಾಡಿದ್ದರೆ, ಸರ್ಕಾರ ₹ 6 ನೀಡುತ್ತಿರುವುದಾದರೂ ಏಕೆ ಎಂದು ಪ್ರಶ್ನಿಸಿದರು.</p>.<p>ಈ ಕುರಿತು ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಕರ್ನಾಟಕ ಪವರ್ ಕಾರ್ಪೋರೇಷನ್ ಲಿಮಿಟೆಡ್ನ ವ್ಯವಸ್ಥಾಪಕ ನಿರ್ದೇಶಕ ವಿ.ಪೊನ್ನುರಾಜ್ ಪತ್ರ ಬರೆದಿದ್ದಾರೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>