ಶನಿವಾರ ಕೆಪಿಸಿಸಿ ಮಹಿಳಾ ಕಾಂಗ್ರೆಸ್ ಕಾರ್ಯಕಾರಿಣಿ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು, ‘ಎಲ್ಐಸಿಯಲ್ಲಿರುವ ಜನಸಾಮಾನ್ಯರ ಉಳಿತಾಯದ ಹಣವನ್ನು, ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿರುವ ಅದಾನಿ ಅವರನ್ನು ಪಾರು ಮಾಡಲು ಬಳಸಲಾಗುತ್ತಿದೆ. ₹ 3 ಸಾವಿರ ಕೋಟಿ ಷೇರುಪೇಟೆಯಲ್ಲಿ ನಷ್ಟವಾಗುತ್ತಿದೆ. ಬೆಲೆ ಏರಿಕೆಯಿಂದ ಜನ ಹೈರಾಣಾಗಿದ್ದಾರೆ’ ಎಂದು ಕಿಡಿಕಾರಿದರು.