ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪಟ್ಟಿ ಕಳುವಾಗಿದೆ ಎಂದು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುವ ಆಯೋಗದ ನಡೆ ಅನುಮಾನಾಸ್ಪದವಾಗಿದೆ. ಈ ಡಿಜಿಟಲ್ ಯುಗದಲ್ಲಿ ಇಂಥ ಬೇಜವಾಬ್ದಾರಿ ಹೇಗೆ ಸಾಧ್ಯ? ಈ ಪ್ರಕರಣದಲ್ಲಿ ದೊಡ್ಡ ದೊಡ್ಡ ಅಧಿಕಾರಿಗಳು, ರಾಜಕಾರಣಿಗಳ ಕೈವಾಡವಿದ್ದು, ರಾಜ್ಯ ಪೊಲೀಸರಿಂದ ಸತ್ಯ ಹೊರತರಲು ಸಾಧ್ಯವೇ’ ಎಂದು ಅನುಮಾನ ವ್ಯಕ್ತಪಡಿಸಿದರು.